AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜಾಜ್ ಆಟೋ ಕಂಪೆನಿ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ

ಬಜಾಜ್ ಆಟೋ ಕಂಪೆನಿಯ ಅಧಿಕಾರೇತರ ನಿರ್ದೇಶಕ ಹಾಗೂ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಬಜಾಜ್ ಆಟೋ ಕಂಪೆನಿ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ
ರಾಹುಲ್ ಬಜಾಜ್ (ಸಂಗ್ರಹ ಚಿತ್ರ)
Srinivas Mata
|

Updated on:Apr 29, 2021 | 6:45 PM

Share

ಬಜಾಜ್ ಆಟೋ ಗುರುವಾರ ಘೋಷಣೆ ಮಾಡಿರುವ ಪ್ರಕಾರ, ರಾಹುಲ್ ಬಜಾಜ್ ಅವರು ಕಂಪೆನಿಯ ಅಧಿಕಾರೇತರ ನಿರ್ದೇಶಕ ಮತ್ತು ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಹುಲ್​ಅವರನ್ನು ಮೇ 1ರಿಂದ ಅನ್ವಯ ಆಗುವಂತೆ 5 ವರ್ಷಗಳ ಅವಧಿಗೆ ಗೌರವಾಧ್ಯಕ್ಷರಾಗಿ ನೇಮಿಸಲಾಗಿದೆ. ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಕಂಪೆನಿ ಹೇಳಿರುವ ಪ್ರಕಾರ, ನೀರಜ್ ಬಜಾಜ್ ಅವರನ್ನು ಅಧಿಕಾರೇತರ ನಿರ್ದೇಶಕ ಮತ್ತು ಅಧ್ಯಕ್ಷ ಹುದ್ದೆಗೆ ಮೇ 1ರಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ.

ಕಂಪೆನಿಯ ಈ ಹುದ್ದೆಯಲ್ಲಿ 1972ರಿಂದ ರಾಹುಲ್ ಬಜಾಜ್ ಇದ್ದಾರೆ. ಐವತ್ತು ವರ್ಷಗಳಿಂದ ಬಜಾಜ್ ಕಂಪೆನಿಯೊಂದಿಗೆ ಇದ್ದಾರೆ. ತಮ್ಮ ವಯಸ್ಸಿನ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಏಪ್ರಿಲ್ 30, 2021ರಂದು ವ್ಯವಹಾರದ ವೇಳೆ ಮುಗಿದ ಕ್ಷಣದಿಂದ ರಾಹುಲ್ ಬಜಾಜ್ ರಾಜೀನಾಮೆ ಜಾರಿಗೆ ಬರಲಿದೆ.

“ಶ್ರೀ ರಾಹುಲ್ ಬಜಾಜ್ ಅವರು ಕಳೆದ ಐದು ದಶಕಗಳಿಂದ ಕಂಪೆನಿ ಮತ್ತು ಸಮೂಹದ ಯಶಸ್ಸಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಅಗಾಧ ಅನುಭವವನ್ನು ಪರಿಗಣನೆಗೆ ತೆಗೆದುಕೊಂಡು ಮತ್ತು ಕಂಪೆನಿಯ ಹಿತದೃಷ್ಟಿಯಿಂದ ಹಾಗೂ ಅವರ ಅನುಭವ, ಜ್ಞಾನ, ತಿಳಿವಳಿಕೆಯ ಅನುಕೂಲವನ್ನು ಪಡೆಯುವ ಉದ್ದೇಶದಿಂದ ಮಾರ್ಗದರ್ಶಕ ಹುದ್ದೆಯಲ್ಲಿ ಅವರು ನಿಂತು ಸಲಹೆ ನೀಡಬೇಕು. ಕಂಪೆನಿ ಆಡಳಿತ ಮಂಡಳಿ ನಿರ್ದೇಶಕರ ಇಂದಿನ ಸಭೆಯಲ್ಲಿ ಅವರ ಹೆಸರನ್ನು ಶಿಫಾರಸು ಮಾಡಲಾಯಿತು. ಅದರಂತೆ ನಾಮಿನೇಷನ್ ಮತ್ತು ಶಿಫಾರಸು ಸಮಿತಿಯು ಶ್ರೀ ರಾಹುಲ್ ಬಜಾಜ್ ಅವರನ್ನು ಗೌರವ ಅಧ್ಯಕ್ಷ ಹುದ್ದೆಯಲ್ಲಿ ಮೇ 1, 2021ರಿಂದ ಅನ್ವಯ ಆಗುವಂತೆ ನೇಮಕ ಮಾಡಲು ಅನುಮತಿಸಿದೆ,” ಎಂದು ಕಂಪೆನಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಷೇರುದಾರರ ವಾರ್ಷಿಕ ಮಹಾಸಭೆಯಲ್ಲಿ ಈ ವಿಚಾರವನ್ನು ಮುಂದಿಟ್ಟು, ಅನುಮತಿಯನ್ನು ಪಡೆಯಲಾಗುವುದು ಎಂದು ಕಂಪೆನಿಯಿಂದ ತಿಳಿಸಲಾಗಿದೆ.

ಇದನ್ನೂ ಓದಿ: Bajaj Auto CT110X Launch: ಬಜಾಜ್ ಆಟೋ CT110X ಹೊಸ ಬೈಕ್ ಬಿಡುಗಡೆ, ಬೆಲೆ ರೂ. 55,494

(Bajaj Auto ltd Rahul Bajaj resigns as chairman and non executive director. Niraj Bajaj appointed as new chairman, which will come in to effect from May 1, 2021)

Published On - 6:42 pm, Thu, 29 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ