AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜಾಜ್ ಆಟೋ ಕಂಪೆನಿ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ

ಬಜಾಜ್ ಆಟೋ ಕಂಪೆನಿಯ ಅಧಿಕಾರೇತರ ನಿರ್ದೇಶಕ ಹಾಗೂ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಬಜಾಜ್ ಆಟೋ ಕಂಪೆನಿ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ
ರಾಹುಲ್ ಬಜಾಜ್ (ಸಂಗ್ರಹ ಚಿತ್ರ)
Srinivas Mata
|

Updated on:Apr 29, 2021 | 6:45 PM

Share

ಬಜಾಜ್ ಆಟೋ ಗುರುವಾರ ಘೋಷಣೆ ಮಾಡಿರುವ ಪ್ರಕಾರ, ರಾಹುಲ್ ಬಜಾಜ್ ಅವರು ಕಂಪೆನಿಯ ಅಧಿಕಾರೇತರ ನಿರ್ದೇಶಕ ಮತ್ತು ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಹುಲ್​ಅವರನ್ನು ಮೇ 1ರಿಂದ ಅನ್ವಯ ಆಗುವಂತೆ 5 ವರ್ಷಗಳ ಅವಧಿಗೆ ಗೌರವಾಧ್ಯಕ್ಷರಾಗಿ ನೇಮಿಸಲಾಗಿದೆ. ಎಕ್ಸ್​ಚೇಂಜ್ ಫೈಲಿಂಗ್​ನಲ್ಲಿ ಕಂಪೆನಿ ಹೇಳಿರುವ ಪ್ರಕಾರ, ನೀರಜ್ ಬಜಾಜ್ ಅವರನ್ನು ಅಧಿಕಾರೇತರ ನಿರ್ದೇಶಕ ಮತ್ತು ಅಧ್ಯಕ್ಷ ಹುದ್ದೆಗೆ ಮೇ 1ರಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ.

ಕಂಪೆನಿಯ ಈ ಹುದ್ದೆಯಲ್ಲಿ 1972ರಿಂದ ರಾಹುಲ್ ಬಜಾಜ್ ಇದ್ದಾರೆ. ಐವತ್ತು ವರ್ಷಗಳಿಂದ ಬಜಾಜ್ ಕಂಪೆನಿಯೊಂದಿಗೆ ಇದ್ದಾರೆ. ತಮ್ಮ ವಯಸ್ಸಿನ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಏಪ್ರಿಲ್ 30, 2021ರಂದು ವ್ಯವಹಾರದ ವೇಳೆ ಮುಗಿದ ಕ್ಷಣದಿಂದ ರಾಹುಲ್ ಬಜಾಜ್ ರಾಜೀನಾಮೆ ಜಾರಿಗೆ ಬರಲಿದೆ.

“ಶ್ರೀ ರಾಹುಲ್ ಬಜಾಜ್ ಅವರು ಕಳೆದ ಐದು ದಶಕಗಳಿಂದ ಕಂಪೆನಿ ಮತ್ತು ಸಮೂಹದ ಯಶಸ್ಸಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಅಗಾಧ ಅನುಭವವನ್ನು ಪರಿಗಣನೆಗೆ ತೆಗೆದುಕೊಂಡು ಮತ್ತು ಕಂಪೆನಿಯ ಹಿತದೃಷ್ಟಿಯಿಂದ ಹಾಗೂ ಅವರ ಅನುಭವ, ಜ್ಞಾನ, ತಿಳಿವಳಿಕೆಯ ಅನುಕೂಲವನ್ನು ಪಡೆಯುವ ಉದ್ದೇಶದಿಂದ ಮಾರ್ಗದರ್ಶಕ ಹುದ್ದೆಯಲ್ಲಿ ಅವರು ನಿಂತು ಸಲಹೆ ನೀಡಬೇಕು. ಕಂಪೆನಿ ಆಡಳಿತ ಮಂಡಳಿ ನಿರ್ದೇಶಕರ ಇಂದಿನ ಸಭೆಯಲ್ಲಿ ಅವರ ಹೆಸರನ್ನು ಶಿಫಾರಸು ಮಾಡಲಾಯಿತು. ಅದರಂತೆ ನಾಮಿನೇಷನ್ ಮತ್ತು ಶಿಫಾರಸು ಸಮಿತಿಯು ಶ್ರೀ ರಾಹುಲ್ ಬಜಾಜ್ ಅವರನ್ನು ಗೌರವ ಅಧ್ಯಕ್ಷ ಹುದ್ದೆಯಲ್ಲಿ ಮೇ 1, 2021ರಿಂದ ಅನ್ವಯ ಆಗುವಂತೆ ನೇಮಕ ಮಾಡಲು ಅನುಮತಿಸಿದೆ,” ಎಂದು ಕಂಪೆನಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಷೇರುದಾರರ ವಾರ್ಷಿಕ ಮಹಾಸಭೆಯಲ್ಲಿ ಈ ವಿಚಾರವನ್ನು ಮುಂದಿಟ್ಟು, ಅನುಮತಿಯನ್ನು ಪಡೆಯಲಾಗುವುದು ಎಂದು ಕಂಪೆನಿಯಿಂದ ತಿಳಿಸಲಾಗಿದೆ.

ಇದನ್ನೂ ಓದಿ: Bajaj Auto CT110X Launch: ಬಜಾಜ್ ಆಟೋ CT110X ಹೊಸ ಬೈಕ್ ಬಿಡುಗಡೆ, ಬೆಲೆ ರೂ. 55,494

(Bajaj Auto ltd Rahul Bajaj resigns as chairman and non executive director. Niraj Bajaj appointed as new chairman, which will come in to effect from May 1, 2021)

Published On - 6:42 pm, Thu, 29 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ