Sign In

By signing in or creating an account, you agree with Associated Broadcasting Company's Terms & Conditions and Privacy Policy.

Wipro Layoff: ವಿಪ್ರೋದಿಂದ 450 ಮಂದಿ ಹೊಸ ಉದ್ಯೋಗಿಗಳ ವಜಾ; ವರದಿ

ಆದಾಯ ಮತ್ತು ಲಾಭದಲ್ಲಿ ಹೆಚ್ಚಳ ದಾಖಲಾದ ಬೆನ್ನಲ್ಲೇ ವಿಪ್ರೋ ಉದ್ಯೋಗಿಗಳನ್ನು ವಜಾಗೊಳಿಸಿರುವುದು ಅಚ್ಚರಿಗೆ ಕಾರಣವಾಗಿದೆ.

Wipro Layoff: ವಿಪ್ರೋದಿಂದ 450 ಮಂದಿ ಹೊಸ ಉದ್ಯೋಗಿಗಳ ವಜಾ; ವರದಿ
ವಿಪ್ರೋ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on:Jan 21, 2023 | 6:21 PM

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ವಿಪ್ರೋ (Wipro) ಸುಮಾರು 450 ಮಂದಿ ಹೊಸ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ (Layoff) ಎಂದು ವರದಿಯಾಗಿದೆ. ಆಂತರಿಕ ಪರೀಕ್ಷೆ ನಡೆಸಿದ ಬಳಿಕ ಕಳಪೆ ಕಾರ್ಯಕ್ಷಮತೆಯ ಕಾರಣ ನೀಡಿ ಉದ್ಯೋಗಿಗಳನ್ನು ವಜಾಗೊಳಿಸಿರುವುದು ತಿಳಿದುಬಂದಿದೆ. ನಾವು ಅತ್ಯುನ್ನತ ಗುಣಮಟ್ಟವನ್ನು ಬಯಸುತ್ತೇವೆ. ನಾವು ನಿಗದಿಪಡಿಸಿರುವ ಗುರಿಯ ಮಾನದಂಡಗಳಿಗೆ ಅನುಗುಣವಾಗಿ, ಪ್ರತಿಯೊಬ್ಬ ಹೊಸ ಉದ್ಯೋಗಿ ಕೂಡ ಅವರಿಗೆ ನೀಡಲಾದ ಕೆಲಸದ ಕ್ಷೇತ್ರದಲ್ಲಿ ನಿರ್ದಿಷ್ಟ ಮಟ್ಟದ ಪ್ರಾವೀಣ್ಯತೆಯನ್ನು ಹೊಂದಿರಬೇಕೆಂದು ನಾವು ನಿರೀಕ್ಷಿಸುತ್ತೇವೆ. ಸಂಸ್ಥೆಯ ವ್ಯವಹಾರ ಉದ್ದೇಶಗಳು ಮತ್ತು ನಮ್ಮ ಗ್ರಾಹಕರ ಅಗತ್ಯತೆಗಳನ್ನು ಗಣನೆಗೆ ತೆಗೆದುಕೊಂಡು ಮೌಲ್ಯಮಾಪನ ಪ್ರಕ್ರಿಯೆ ರೂಪಿಸಲಾಗಿದೆ. ಮೌಲ್ಯಮಾಪನದ ಆಧಾರದಲ್ಲಿ ತರಬೇತಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಪ್ರೋ ಪ್ರತಿಕ್ರಿಯೆ ನೀಡಿರುವುದಾಗಿ ‘ಬ್ಯುಸಿನೆಸ್ ಟುಡೇ’ ವರದಿ ಮಾಡಿದೆ. 450 ಮಂದಿ ಹೊಸ ಉದ್ಯೋಗಿಗಳನ್ನು ವಜಾಗೊಳಿಸಿರುವ ಬಗ್ಗೆ ಮೂಲಗಳು ಆರೋಪಿಸಿವೆ ಎಂದೂ ವರದಿ ಉಲ್ಲೇಖಿಸಿದೆ.

ವಜಾಗೊಂಡ ಉದ್ಯೋಗಿಗಳ ಟರ್ಮಿನೇಷನ್ ಪತ್ರದ ಪ್ರತಿ ಲಭ್ಯವಾಗಿದೆ. ಅದರಲ್ಲಿ, ‘ನಿಮ್ಮ ತರಬೇತಿಗಾಗಿ ವ್ಯಯಿಸಿದ 75,000 ರೂ. ಭರ್ತಿಗೆ ನೀವು ಹೊಣೆಗಾರರಾಗಿದ್ದೀರಿ. ಆದರೆ ಈ ಮೊತ್ತವನ್ನು ಮನ್ನಾ ಮಾಡಿದ್ದೇವೆ’ ಎಂದು ವಿಪ್ರೋ ಉಲ್ಲೇಖಿಸಿದೆ ಎಂದು ‘ಬ್ಯುಸಿನೆಸ್​ ಟುಡೇ’ ವರದಿ ಹೇಳಿದೆ.

‘ನನಗೆ 2022ರ ಜನವರಿಯಲ್ಲಿ ಆಫರ್ ಲೆಟರ್ ದೊರೆತಿತ್ತು. ಸುಮಾರು ತಿಂಗಳು ವಿಳಂಬ ನೀತಿ ಅನುಸರಿಸಿದ ಬಳಿಕ ನೇಮಕ ಮಾಡಿಕೊಳ್ಳಲಾಯಿತು. ಇದೀಗ ಪರೀಕ್ಷೆಯ ನೆಪ ಹೇಳಿ ವಜಾಗೊಳಿಸಿದ್ದಾರೆ’ ಎಂದು ಉದ್ಯೋಗಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ. ‘ಉದ್ಯೋಗಿಗಳನ್ನು ವಜಾಗೊಳಿಸಲು ಇದು ಅವರಿಗೊಂದು ನೆಪವಷ್ಟೇ’ ಎಂದು ಮತ್ತೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Wipro Q3 Result: ವಿಪ್ರೋ ಆದಾಯ ಶೇ 14.3 ಹೆಚ್ಚಳ; ಲಾಭವೂ ಏರಿಕೆ

ಜಾಗತಿಕವಾಗಿ ಐಟಿ ಕಂಪನಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನಡುವೆಯೂ ವಿಪ್ರೋ ಲಾಭದಲ್ಲಿ ಹೆಚ್ಚಳ ಕಂಡುಬಂದಿತ್ತು. ಡಿಸೆಂಬರ್​​ಗೆ ಕೊನೆಗೊಂಡ ತ್ರೈಮಾಸಿಕ ಅವಧಿಯ ಫಲಿತಾಂಶವನ್ನು ಇತ್ತೀಚೆಗಷ್ಟೇ ಪ್ರಕಟಿಸಿದ್ದ ವಿಪ್ರೋ ಆದಾಯ ಗಳಿಕೆಯಲ್ಲಿ ಶೇಕಡಾ 14.3ರಷ್ಟು ಹೆಚ್ಚಳವಾಗಿದ್ದು, 23,229 ಕೋಟಿ ರೂ. ಆಗಿತ್ತು. ಕ್ರೂಡೀಕೃತ ನಿವ್ವಳ ಲಾಭದ ಪ್ರಮಾಣ ಶೇಕಡಾ 2.8ರಷ್ಟು ಹೆಚ್ಚಳವಾಗಿದ್ದು, 3,053 ಕೋಟಿ ರೂ. ಆಗಿದೆ. ನಿವ್ವಳ ಲಾಭ 2,969 ಕೋಟಿ ರೂ. ಆಗಿದೆ ಎಂದು ತಿಳಿಸಿತ್ತು. ಆದಾಯ ಮತ್ತು ಲಾಭದಲ್ಲಿ ಹೆಚ್ಚಳ ದಾಖಲಾದ ಬೆನ್ನಲ್ಲೇ ಉದ್ಯೋಗಿಗಳನ್ನು ವಜಾಗೊಳಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Fri, 20 January 23

ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್