AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದ ಬೆನ್ನೆಲುಬಾದ ಗಾರ್ಮೆಂಟ್ಸ್ ಫ್ಯಾಕ್ಟರಿಗಳ ಬಾಗಿಲು ಬಂದ್; ತಲೆನೋವು ತಂದ ಕಾರ್ಮಿಕರ ಪ್ರತಿಭಟನೆ; 11,000 ಮಂದಿ ಮೇಲೆ ಪೊಲೀಸ್ ಕೇಸ್

Bangladesh Garments Factory workers protest: ಬಾಂಗ್ಲಾದೇಶದ ಗಾರ್ಮೆಂಟ್ ಫ್ಯಾಕ್ಟರಿ ಉದ್ಯೋಗಿಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕನಿಷ್ಠ ವೇತನವನ್ನು ಹೆಚ್ಚಿಸಬೇಕೆಂದು ಅಲ್ಲಿ ಕಳೆದ ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. 70ಕ್ಕೂ ಹೆಚ್ಚು ಫ್ಯಾಕ್ಟರಿಗಳನ್ನು ಕಾರ್ಮಿಕರು ಹಾನಿಗೆಡವಿದ್ದಾರೆ. ಪ್ರತಿಭಟನೆಯಲ್ಲಿ ಮೂವರು ಕಾರ್ಮಿಕರು ಬಲಿಯಾಗಿದ್ದಾರೆ. 150 ಗಾರ್ಮೆಂಟ್ ಫ್ಯಾಕ್ಟರಿಗಳು ಅನಿರ್ದಿಷ್ಟಾವಧಿಯವರೆಗೆ ಬಾಗಿಲು ಬಂದ್ ಮಾಡಿಕೊಂಡಿವೆ.

ಬಾಂಗ್ಲಾದೇಶದ ಬೆನ್ನೆಲುಬಾದ ಗಾರ್ಮೆಂಟ್ಸ್ ಫ್ಯಾಕ್ಟರಿಗಳ ಬಾಗಿಲು ಬಂದ್; ತಲೆನೋವು ತಂದ ಕಾರ್ಮಿಕರ ಪ್ರತಿಭಟನೆ;  11,000 ಮಂದಿ ಮೇಲೆ ಪೊಲೀಸ್ ಕೇಸ್
ಗಾರ್ಮೆಂಟ್ ಫ್ಯಾಕ್ಟರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 14, 2023 | 7:53 PM

Share

ಢಾಕಾ, ನವೆಂಬರ್ 14: ಬಾಂಗ್ಲಾದೇಶದ ಗಾರ್ಮೆಂಟ್ ಫ್ಯಾಕ್ಟರಿ ಉದ್ಯೋಗಿಗಳು (garments factory workers) ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕನಿಷ್ಠ ವೇತನವನ್ನು ಹೆಚ್ಚಿಸಬೇಕೆಂದು ಅಲ್ಲಿ ಕಳೆದ ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. 70ಕ್ಕೂ ಹೆಚ್ಚು ಫ್ಯಾಕ್ಟರಿಗಳನ್ನು ಕಾರ್ಮಿಕರು ಹಾನಿಗೆಡವಿದ್ದಾರೆ. ಪ್ರತಿಭಟನೆಯಲ್ಲಿ ಮೂವರು ಕಾರ್ಮಿಕರು ಬಲಿಯಾಗಿದ್ದಾರೆ. 150 ಗಾರ್ಮೆಂಟ್ ಫ್ಯಾಕ್ಟರಿಗಳು ಅನಿರ್ದಿಷ್ಟಾವಧಿಯವರೆಗೆ ಬಾಗಿಲು ಬಂದ್ ಮಾಡಿಕೊಂಡಿವೆ. ಇದು ಬಾಂಗ್ಲಾದೇಶ ಸರ್ಕಾರವನ್ನ ತಲ್ಲಣಗೊಳಿಸಿದೆ. ಭಾರತದಲ್ಲಿ ಇಂಥ ಹತ್ತು ಹಲವು ಪ್ರತಿಭಟನೆಗಳು ವರ್ಷಂಪ್ರತಿ ನಡೆಯುತ್ತಲೇ ಇರುತ್ತದೆ. ಬಾಂಗ್ಲಾದೇಶದ್ದೇನು ವಿಶೇಷ ಎನಿಸಬಹುದು. ಆದರೆ, ಬಾಂಗ್ಲಾದೇಶದ ಆರ್ಥಿಕತೆಗೆ ಗಾರ್ಮೆಂಟ್ ಫ್ಯಾಕ್ಟರಿಗಳೇ ಬೆನ್ನೆಲುಬು.

ಬಾಂಗ್ಲಾದೇಶ ಒಂದು ವರ್ಷದಲ್ಲಿ ಮಾಡುವ ರಫ್ತು 55 ಬಿಲಿಯನ್ ಡಾಲರ್​ನಷ್ಟಿದೆ. ಇದರಲ್ಲಿ ಗಾರ್ಮೆಂಟ್ ಉದ್ಯಮದ ಕೊಡುಗೆಯೇ ಶೇ. 85ರಷ್ಟಿದೆ. ಅಂದರೆ, ಭಾರತಕ್ಕೆ ಐಟಿ ಸೆಕ್ಟರ್ ಹೇಗೋ ಹಾಗೆ ಬಾಂಗ್ಲಾದೇಶಕ್ಕೆ ಗಾರ್ಮೆಂಟ್ಸ್ ಸೆಕ್ಟರ್. ಬಾಂಗ್ಲಾದಲ್ಲಿ ಒಟ್ಟು 3,500 ಗಾರ್ಮೆಂಟ್ಸ್ ಫ್ಯಾಕ್ಟರಿಗಳಿವೆ. ಲೆವಿಸ್, ಝಾರಾ, ಎಚ್ ಅಂಡ್ ಎಂ ಇತ್ಯಾದಿ ವಿಶ್ವಖ್ಯಾತ ಫ್ಯಾಷನ್ ಬ್ರ್ಯಾಂಡ್​ಗಳು ಬಾಂಗ್ಲಾದೇಶಕ್ಕೆ ಔಟ್​ಸೋರ್ಸ್ ಮಾಡುತ್ತಿವೆ.

ಇದನ್ನೂ ಓದಿ: ಅಮೆರಿಕ, ಯೂರೋಪ್​ನಲ್ಲಿ ಬಜೆಟ್ ಕಡಿಮೆ ಆದರೂ ನಾರ್ಡಿಕ್ ದೇಶಗಳಿಂದ ಭಾರತೀಯ ಐಟಿ ಕಂಪನಿಗಳಿಗೆ ಸಖತ್ ಬಿಸಿನೆಸ್

ಗಾರ್ಮೆಂಟ್ಸ್ ವರ್ಕರ್​ಗಳಿಂದ ಪ್ರತಿಭಟನೆ ಯಾಕೆ?

ಬಾಂಗ್ಲಾದೇಶದ 3,500 ಗಾರ್ಮೆಂಟ್ಸ್ ಫ್ಯಾಕ್ಟರಿಗಳಲ್ಲಿ 40,00,000 ಕೆಲಸಗಾರರಿದ್ದಾರೆ. ಇವರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ಇವರ ತಿಂಗಳ ಆರಂಭಿಕ ಸಂಬಳ 8,300 ಟಾಕಾ. ಅಂದರೆ ಸುಮಾರು 6,200 ರೂ ಮಾತ್ರವೇ. ಈ ಸಂಬಳವನ್ನು ಹೆಚ್ಚಿಸಬೇಕೆಂದು ಅಲ್ಲಿ ಉಗ್ರ ಹೋರಾಟವೇ ನಡೆಯುತ್ತಿದೆ.

ಗಾರ್ಮೆಂಟ್ಸ್ ಉದ್ಯೋಗಿಗಳ ವೇತನ ಪರಿಷ್ಕಾರಕ್ಕಾಗಿ ಅಲ್ಲಿನ ಸರ್ಕಾರ ಸಮಿತಿಯಿಂದನ್ನು ರಚಿಸಿತ್ತು. ಅದು ಕನಿಷ್ಠ ವೇತನವನ್ನು 12,500 ರೂ ಹೆಚ್ಚಿಸುವಂತೆ ಶಿಫಾರಸು ಮಾಡಿತು. ಆದರೆ, ಬಾಂಗ್ಲಾದೇಶದ ಗಾರ್ಮೆಂಟ್ಸ್ ಉದ್ಯೋಗಿಗಳು ಈ ಏರಿಕೆಯನ್ನು ತಿರಸ್ಕರಿಸಿದ್ದಾರೆ. ಕನಿಷ್ಠ ವೇತನ 23,000 ಟಾಕಾ (ಸುಮಾರು 17,000 ರೂ) ಇರಬೇಕೆಂದು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: ಅರ್ಜೆಂಟೀನಾದಲ್ಲಿ ಭೀಕರ ಹಣದುಬ್ಬರ; ಉಟ್ಟ ಉಡುಗೆ ಮಾರಿ ಜೀವನ ನಡೆಸಬೇಕಾದ ಸ್ಥಿತಿ

ಕಳೆದ ವಾರ ಬಾಂಗ್ಲಾದೇಶಾದ್ಯಂತ 15,000 ಗಾರ್ಮೆಂಟ್ಸ್ ಉದ್ಯೋಗಿಗಳ ಪ್ರತಿಭಟನೆ ನಡೆದು ಪೊಲೀಸರೊಂದಿಗೆ ಘರ್ಷಣೆ ಆಗಿತ್ತು. ಟುಸುಕಾ ಸೇರಿದಂತೆ ಹಲವಾರು ಫ್ಯಾಕ್ಟರಿಗಳಿಗೆ ನುಗ್ಗಿ ಕಾರ್ಮಿಕರು ಹಾನಿ ಮಾಡಿದ್ದರು. ಈ ದಾಂದಲೆಯಲ್ಲಿ ಪೊಲೀಸರು 11,000 ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಕಾರ್ಮಿಕ ಪ್ರತಿಭಟನೆ ಇನ್ನಷ್ಟು ವಿಕೋಪಕ್ಕೆ ಹೋಗಬಹುದು ಎಂದು ಭಾವಿಸಿ ಅಶುಲಿಯಾ, ಘಾಜಿಪುರ್ ಪಟ್ಟಣಗಳಲ್ಲಿ 150 ಗಾರ್ಮೆಂಟ್ಸ್ ಫ್ಯಾಕ್ಟರಿಗಳು ಅನಿರ್ದಿಷ್ಟಾವಧಿಯವರೆಗೆ ಮುಚ್ಚಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!