AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2025ರ ಮೇ ತಿಂಗಳಲ್ಲಿ ಬ್ಯಾಂಕುಗಳಿಗೆ 13 ದಿನ, ಕರ್ನಾಟಕದಲ್ಲಿ 7 ದಿನ ರಜೆ; ಇಲ್ಲಿದೆ ಪಟ್ಟಿ

2025 May, bank holidays list: 2025ರ ಮೇ ತಿಂಗಳಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ 13 ರಜಾದಿನಗಳಿವೆ. ಮೇ ಡೇ, ಗುರು ರಬೀಂದ್ರ ಜಯಂತಿ, ಬುದ್ಧ ಪೂರ್ಣಿಮಾ ಮೊದಲಾದ ರಜೆಗಳಿವೆ. ಕರ್ನಾಟಕದಲ್ಲಿ ಮೇ 1ರಂದು ಇರುವ ಕಾರ್ಮಿಕರ ದಿನಕ್ಕೆ ವಿಶೇಷ ರಜೆ ಇದೆ. ಅದು ಬಿಟ್ಟರೆ ಶನಿವಾರ ಮತ್ತು ಭಾನುವಾರದ ರಜೆಗಳೇ ಇರುವುದು.

2025ರ ಮೇ ತಿಂಗಳಲ್ಲಿ ಬ್ಯಾಂಕುಗಳಿಗೆ 13 ದಿನ, ಕರ್ನಾಟಕದಲ್ಲಿ 7 ದಿನ ರಜೆ; ಇಲ್ಲಿದೆ ಪಟ್ಟಿ
ಬ್ಯಾಂಕ್ ರಜಾ ದಿನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 28, 2025 | 3:00 PM

Share

ಬೆಂಗಳೂರು, ಏಪ್ರಿಲ್ 28: ಮುಂಬರುವ ಮೇ ತಿಂಗಳಲ್ಲಿ ದೇಶದ ವಿವಿಧ ಸ್ಥಳಗಳಲ್ಲಿ ಬ್ಯಾಂಕುಗಳಿಗೆ 13 ರಜಾ ದಿನಗಳಿವೆ. ಇಲ್ಲಿ ಪ್ರದೇಶವಾರು ರಜೆಗಳು (Bank holidays list) ಬೇರೆ ಬೇರೆ ಇವೆ. ಕಾರ್ಮಿಕರ ದಿನ, ರವೀಂದ್ರನಾಥ್ ಠಾಗೋರ್ ಜಯಂತಿ, ಬುದ್ಧ ಪೂರ್ಣಿಮಾ, ಕಾಜಿ ನಸರುಲ್ ಜಯಂತಿ ಇತ್ಯಾದಿ ದಿನಗಳು ಮೇ ತಿಂಗಳಲ್ಲಿವೆ. ಕಾರ್ಮಿಕ ದಿನಕ್ಕೆ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ರಜೆ ಇರುತ್ತದೆ. ಇದು ಬಿಟ್ಟರೆ ನಾಲ್ಕು ಭಾನುವಾರ ಹಾಗೂ ಎರಡು ಶನಿವಾರಗಳ ನಿಯಮಿತ ರಜೆಗಳೂ ಮೇ ತಿಂಗಳಲ್ಲಿ ಇವೆ.

ಕರ್ನಾಟಕದಲ್ಲಿ ಭಾನುವಾರ, ಶನಿವಾರಗಳ ಆರು ದಿನಗಳನ್ನು ಹೊರತುಪಡಿಸಿದರೆ, ಕಾರ್ಮಿಕ ದಿನಕ್ಕೆ ಮಾತ್ರವೇ ರಜೆ ಇದೆ. ಹೀಗಾಗಿ, ಮೇ ತಿಂಗಳಲ್ಲಿ ಕರ್ನಾಟಕಕ್ಕೆ ಏಳು ದಿನ ಮಾತ್ರವೇ ಬ್ಯಾಂಕುಗಳು ಬಂದ್ ಆಗಿರುತ್ತವೆ.

2025ರ ಮೇ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿ

  • ಮೇ 1, ಬುಧವಾರ: ಕಾರ್ಮಿಕರ ದಿನ / ಮಹಾರಾಷ್ಟ್ರ ದಿನ (ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಅಸ್ಸಾಮ್ ಸೇರಿ ಬಹುತೇಕ ರಾಜ್ಯಗಳಲ್ಲಿ ರಜೆ)
  • ಮೇ 4: ಭಾನುವಾರದ ರಜೆ
  • ಮೇ 8, ಗುರುವಾರ: ಗುರು ರಬೀಂದ್ರ ಜಯಂತಿ (ದೆಹಲಿ, ಪಶ್ಚಿಮ ಬಂಗಾಳ ಮೊದಲಾದ ಕೆಲ ರಾಜ್ಯಗಳಲ್ಲಿ ರಜೆ)
  • ಮೇ 10: ಎರಡನೇ ಶನಿವಾರದ ರಜೆ
  • ಮೇ 11: ಭಾನುವಾರದ ರಜೆ
  • ಮೇ 12, ಸೋಮವಾರ: ಬುದ್ಧ ಪೂರ್ಣಿಮಾ (ಮಧ್ಯಪ್ರದೇಶ, ಉತ್ತರಪ್ರದೇಶ, ಮಹಾರಾಷ್ಟ್ರ, ದೆಹಲಿ, ಛತ್ತೀಸ್​​​ಗಡ, ಜಾರ್ಖಂಡ್, ಹಿಮಾಚಲ, ಶ್ರೀನಗರ್, ಜಮ್ಮು, ಮಧ್ಯಪ್ರದೇಶ, ಅರುಣಾಚಲ ಪ್ರದೇಶ, ಮಿಜೋರಾಂ, ತ್ರಿಪುರಾ, ಉತ್ತರಾಖಂಡ್ ರಾಜ್ಯಗಳಲ್ಲಿ ರಜೆ)
  • ಮೇ 16, ಶುಕ್ರವಾರ: ಸಿಕ್ಕಿಂ ರಾಜ್ಯ ಸಂಸ್ಥಾಪನಾ ದಿನ
  • ಮೇ 18: ಭಾನುವಾರದ ರಜೆ
  • ಮೇ 24: ನಾಲ್ಕನೇ ಶನಿವಾರದ ರಜೆ
  • ಮೇ 25: ಭಾನುವಾರ ರಜೆ
  • ಮೇ 26, ಸೋಮವಾರ: ಕಾಜಿ ನಜರುಲ್ ಇಸ್ಲಾಂ ಜಯಂತಿ (ತ್ರಿಪುರಾದಲ್ಲಿ ರಜೆ)
  • ಮೇ 29, ಗುರುವಾರ: ಮಹಾರಾಣಾ ಪ್ರತಾಪ್ ಜಯಂತಿ (ಹರ್ಯಾಣ, ಹಿಮಾಚಲ ಪ್ರದೇಶದಲ್ಲಿ ರಜೆ)
  • ಮೇ 30, ಶುಕ್ರವಾರ: ಗುರು ಅರ್ಜುನ್ ದೇವ್ ಬಲಿದಾನ ದಿನ (ಪಂಜಾಬ್​​ನಲ್ಲಿ ರಜೆ)

ಇದನ್ನೂ ಓದಿ: ಭಾರತದ್ದೇ ಸ್ವಂತ ಎಐ ಫೌಂಡೇಶನ್ ಮಾಡಲ್ ನಿರ್ಮಾಣಕ್ಕೆ ಸರ್ವಮ್ ಸಂಸ್ಥೆ ಆಯ್ಕೆ

ಇದನ್ನೂ ಓದಿ
Image
ಚಿನ್ನದ ಶುದ್ಧತೆ, ತೆರಿಗೆ, ಮೇಕಿಂಗ್ ಚಾರ್ಜಸ್ ಇತ್ಯಾದಿ ವಿವರ
Image
ಭಾರತೀಯ ವಿಮಾನಗಳಿಗೆ ಪ್ರವೇಶ ನಿರ್ಬಂಧಿಸಿ ಪಾಕ್ ಯಡವಟ್ಟು?
Image
ಎಸ್​​ಬಿಐ, ಎಚ್​​​ಡಿಎಫ್​​ಸಿ, ಐಸಿಐಸಿಐ ಬ್ಯಾಂಕುಗಳ ಎಫ್​​​ಡಿ ದರಪಟ್ಟಿ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ

2025ರ ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಬ್ಯಾಂಕ್ ರಜಾದಿನಗಳು

  • ಮೇ 1, ಬುಧವಾರ: ಕಾರ್ಮಿಕರ ದಿನ
  • ಮೇ 4: ಭಾನುವಾರದ ರಜೆ
  • ಮೇ 10: ಎರಡನೇ ಶನಿವಾರದ ರಜೆ
  • ಮೇ 11: ಭಾನುವಾರದ ರಜೆ
  • ಮೇ 18: ಭಾನುವಾರದ ರಜೆ
  • ಮೇ 24: ನಾಲ್ಕನೇ ಶನಿವಾರದ ರಜೆ
  • ಮೇ 25: ಭಾನುವಾರ ರಜೆ

ಬ್ಯಾಂಕುಗಳಿಗೆ ರಜೆ ಇದ್ದರೂ ಹೆಚ್ಚಿನ ಬ್ಯಾಂಕಿಂಗ್ ಕಾರ್ಯಗಳನ್ನು ಎಟಿಎಂ, ನೆಟ್​​ಬ್ಯಾಂಕಿಂಗ್, ಯುಪಿಐ ಇತ್ಯಾದಿ ಮೂಲಕ ಮಾಡಬಹುದು. ಇವು ಯಾವುದೇ ದಿನವಾದರೂ ತೆರೆದೇ ಇರುತ್ತವೆ. ದೊಡ್ಡ ಮೊತ್ತದ ವಹಿವಾಟು ಮಾಡಲು, ಡಿಡಿ ಪಡೆಯಲು, ಸಾಲಕ್ಕೆ ಅರ್ಜಿ ಸಲ್ಲಿಸಲು ಇತ್ಯಾದಿ ಕೆಲ ಕಾರ್ಯಗಳಿಗೆ ಬ್ಯಾಂಕ್ ಕಚೇರಿಗೆ ಹೋಗುವುದು ಅನಿವಾರ್ಯವಾಗಬಹುದು. ಅಂಥ ಕೆಲಸಗಳನ್ನು ಹೊಂದಿರುವವರು ಮುಂಚಿತವಾಗಿ ರಜಾದಿನಗಳು ಯಾವತ್ತೆಂದು ತಿಳಿದಿರುವುದು ಉತ್ತಮ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ