AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸೆಪ್ಟಂಬರ್ ತಿಂಗಳು ಬ್ಯಾಂಕ್​ಗಳಿಗೆ 8 ರಜಾದಿನಗಳು; ಗಣೇಶ ಚತುರ್ಥಿ, ಈದ್ ಮಿಲಾದ್ ಮೊದಲಾದ ದಿನ ರಜೆ

Bank holidays in Karnataka: ದೇಶದ ವಿವಿಧೆಡೆ ಸೆಪ್ಟಂಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಒಟ್ಟು 14 ದಿನ ರಜೆಗಳಿವೆ. ಆರ್​ಬಿಐ ಕ್ಯಾಲಂಡರ್ ಪ್ರಕಾರ ಗಣೇಶ ಚತುರ್ಥಿ, ಈದ್ ಮಿಲಾದ್ ರಾಷ್ಟ್ರೀಯ ಹಬ್ಬವಾದರೆ ಉಳಿದವು ಪ್ರಾದೇಶಿಕ ರಜೆಗಳು. ಕರ್ನಾಟಕದಲ್ಲಿ ಶನಿವಾರ, ಭಾನುವಾರವೂ ಒಳಗೊಂಡು ಒಟ್ಟು 8 ದಿನ ಮಾತ್ರವೇ ಸೆಪ್ಟಂಬರ್​ನಲ್ಲಿ ರಜೆ ಇರುತ್ತದೆ.

ಕರ್ನಾಟಕದಲ್ಲಿ ಸೆಪ್ಟಂಬರ್ ತಿಂಗಳು ಬ್ಯಾಂಕ್​ಗಳಿಗೆ 8 ರಜಾದಿನಗಳು; ಗಣೇಶ ಚತುರ್ಥಿ, ಈದ್ ಮಿಲಾದ್ ಮೊದಲಾದ ದಿನ ರಜೆ
ಬ್ಯಾಂಕು
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Aug 27, 2024 | 12:14 PM

Share

ಬೆಂಗಳೂರು, ಆಗಸ್ಟ್ 22: ಗಣೇಶ ಚತುರ್ಥಿ ಸೇರಿ ದೇಶದ ವಿವಿಧೆಡೆ 14 ದಿನ ಬ್ಯಾಂಕುಗಳಿಗೆ ರಜೆ ಇದ್ದರೆ, ಕರ್ನಾಟಕದಲ್ಲಿ ಎಂಟು ದಿನ ರಜೆಗಳಿವೆ. ಇದರಲ್ಲಿ ಗಣೇಶನ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ರಜೆಗಳೂ ಒಳಗೊಂಡಿವೆ. ನಾಲ್ಕು ಭಾನುವಾರ ಹಾಗೂ ಎರಡು ಶನಿವಾರದ ರಜೆಗಳೂ ಈ ಎಂಟು ರಜೆಗಳ ಪಟ್ಟಿಯಲ್ಲಿವೆ. ಸೆಪ್ಟಂಬರ್ 7ರಂದು ವಿನಾಯಕ ಚತುರ್ಥಿ ಇದ್ದರೆ, ಸೆಪ್ಟಂಬರ್ 16 ಸೋಮವಾರದಂದು ಈದ್ ಮಿಲಾದ್ ಹಬ್ಬಕ್ಕೆ ರಜೆ ಇದೆ. ಸೆಪ್ಟಂಬರ್ 14ರಿಂದ 16ರವರೆಗೆ ಸತತ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಬ್ಯಾಂಕ್ ರಜಾ ದಿನಗಳಿವೆ.

ಕರ್ನಾಟಕದಲ್ಲಿ 2024ರ ಸೆಪ್ಟಂಬರ್​ನಲ್ಲಿರುವ ಬ್ಯಾಂಕ್ ರಜಾ ದಿನಗಳು

  • ಸೆಪ್ಟಂಬರ್ 7, ಶನಿವಾರ: ವಿನಾಯಕ ಚತುರ್ಥಿ
  • ಸೆಪ್ಟಂಬರ್ 8: ಭಾನುವಾರದ ರಜೆ
  • ಸೆಪ್ಟಂಬರ್ 14: ಎರಡನೇ ಶನಿವಾರ
  • ಸೆಪ್ಟಂಬರ್ 15: ಭಾನುವಾರದ ರಜೆ
  • ಸೆಪ್ಟಂಬರ್ 16, ಸೋಮವಾರ: ಈದ್ ಮಿಲಾದ್
  • ಸೆಪ್ಟಂಬರ್ 22: ಭಾನುವಾರದ ರಜೆ
  • ಸೆಪ್ಟಂಬರ್ 28: ನಾಲ್ಕನೇ ಶನಿವಾರ
  • ಸೆಪ್ಟಂಬರ್ 29: ಭಾನುವಾರದ ರಜೆ

ಅಕ್ಟೋಬರ್, ನವೆಂಬರ್, ಡಿಸೆಂಬರ್​ನಲ್ಲಿರುವ ರಜಾದಿನಗಳು

  • ಅ. 1, ಮಂಗಳವಾರ: ಬ್ಯಾಂಕ್ ಖಾತೆಗಳ ಅರ್ಧವಾರ್ಷಿಕ ಮುಕ್ತಾಯ
  • ಅ. 2, ಬುಧವಾರ: ಗಾಂಧಿ ಜಯಂತಿ
  • ಅ. 11, ಶುಕ್ರವಾರ: ಆಯುಧ ಪೂಜೆ, ಸರಸ್ವತಿ ಪೂಜೆ
  • ಅ. 21, ಗುರುವಾರ: ದೀಪಾವಳಿ
  • ನ. 1, ಶುಕ್ರವಾರ: ಕನ್ನಡ ರಾಜ್ಯೋತ್ಸವ
  • ನ. 2, ಶನಿವಾರ: ಗೋವರ್ಧನ ಪೂಜೆ
  • ನ. 18, ಸೋಮವಾರ: ಕನಕದಾಸ ಜಯಂತಿ
  • ಡಿ. 25, ಬುಧವಾರ: ಕ್ರಿಸ್ಮಸ್ ಹಬ್ಬ
  • ಡಿ. 31, ಮಂಗಳವಾರ: ಹೊಸ ವರ್ಷದ ಪ್ರಯುಕ್ತ

ಇದನ್ನೂ ಓದಿ: ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ ಸೇರಿ 2024ರ ಸೆಪ್ಟಂಬರ್ ತಿಂಗಳಲ್ಲಿ 14 ದಿನ ರಜೆ; ಇಲ್ಲಿದೆ ಪಟ್ಟಿ

ಎಟಿಎಂ, ನೆಟ್​ಬ್ಯಾಂಕಿಂಗ್ ಇತ್ಯಾದಿ ಸೇವೆ ಲಭ್ಯ

ಬ್ಯಾಂಕುಗಳಿಗೆ ಯಾವಾಗಲೇ ರಜೆಗಳಿದ್ದರೂ ಬಹುತೇಕ ಬ್ಯಾಂಕಿಂಗ್ ಚಟುವಟಿಕೆಗಳು ನಿರಂತರವಾಗಿ ಲಭ್ಯ ಇರುತ್ತವೆ. ಎಟಿಎಂ ಸೇವೆ ಇದ್ದೇ ಇರುತ್ತದೆ. ನೆಟ್​ಬ್ಯಾಂಕಿಂಗ್, ಫೋನ್ ಬ್ಯಾಂಕಿಂಗ್​ಗಳು ಸದಾ ಲಭ್ಯ ಇರುತ್ತವೆ. ಯುಪಿಐ ಮೂಲಕವೂ ಹಣದ ವಹಿವಾಟು ನಡೆಸಬಹುದು. ಚೆಕ್ ಡೆಪಾಸಿಟ್, ಕ್ಯಾಷ್ ಡೆಪಾಸಿಟ್, ಡಿಡಿ ಇತ್ಯಾದಿ ಸೇವೆಗಳಿಗೆ ಬ್ಯಾಂಕುಗಳಿಗೆ ಹೋಗಬೇಕಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Fri, 23 August 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!