AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays: ನಿಮ್ಮ ವ್ಯವಹಾರ ಮಾಡುವಾಗ ಈ ದಿನಗಳನ್ನು ಗಮನಿಸಿ; ಸೆಪ್ಟೆಂಬರ್​ ತಿಂಗಳಲ್ಲಿ 12 ದಿನ ಬ್ಯಾಂಕ್ ರಜಾ

2021ರ ಸೆಪ್ಟೆಂಬರ್​ನಲ್ಲಿ 12 ದಿನಗಳ ಕಾಲ ಬ್ಯಾಂಕ್​ಗಳಿಗೆ ರಜಾ ಇದೆ. ರಜಾ ದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಆ ಬಗ್ಗೆ ವಿವರ ಇಲ್ಲಿದೆ.

Bank Holidays: ನಿಮ್ಮ ವ್ಯವಹಾರ ಮಾಡುವಾಗ ಈ ದಿನಗಳನ್ನು ಗಮನಿಸಿ; ಸೆಪ್ಟೆಂಬರ್​ ತಿಂಗಳಲ್ಲಿ 12 ದಿನ ಬ್ಯಾಂಕ್ ರಜಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 01, 2021 | 12:33 PM

Share

ವಿವಿಧ ರಾಜ್ಯಗಳಲ್ಲಿ ರಜಾದಿನಗಳ ಕಾರಣದಿಂದಾಗಿ 2021ರ ಸೆಪ್ಟೆಂಬರ್​ನಲ್ಲಿ 12 ದಿನಗಳವರೆಗೆ ಬ್ಯಾಂಕ್​ಗಳು ಕಾರ್ಯ ನಿರ್ವಹಿಸುವುದಿಲ್ಲ. ಈ ಪಟ್ಟಿಯಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರಗಳ ಅಧಿಕೃತ ರಜಾದಿನಗಳು ಒಳಗೊಂಡಿವೆ. ಕೆಲವು ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಆದರೆ ಎಲ್ಲ ಬ್ಯಾಂಕ್​ಗಳು ಸಾರ್ವಜನಿಕ ರಜಾದಿನಗಳಲ್ಲಿ ಕಾರ್ಯ ನಿರ್ವಹಿಸುವುದಿಲ್ಲ. ದೇಶದಾದ್ಯಂತ ಬ್ಯಾಂಕ್​ಗಳು ಗೆಜೆಟೆಡ್ ರಜಾದಿನಗಳನ್ನು ಅನುರಿಸುತ್ತವೆ. ಮೂರು ಬ್ರಾಕೆಟ್​ ಅಡಿಯಲ್ಲಿ ಆರ್​ಬಿಐ ರಜಾದಿನಗಳನ್ನು ವಿಭಾಗ ಮಾಡಿದೆ – ನೆಗೋಷಿಯಬಲ್ ಇನ್​ಸ್ಟ್ರುಮೆಂಟ್ಸ್ ಕಾಯ್ದೆ ಅಡಿಯಲ್ಲಿ ರಜಾದಿನ; ನೆಗೋಷಿಯಬಲ್ ಇನ್​ಸ್ಟ್ರುಮೆಂಟ್ಸ್ ಕಾಯ್ದೆ ಮತ್ತು ರಿಯಲ್-ಟೈಮ್ ಗ್ರಾಸ್ ಸೆಟಲ್​ಮೆಂಟ್ ರಜಾ ಅಡಿಯಲ್ಲಿ ರಜೆ; ಮತ್ತು ಬ್ಯಾಂಕ್​ಗಳ ಖಾತೆಗಳ ಮುಕ್ತಾಯ.

ಸೆಪ್ಟೆಂಬರ್ 8ನೇ ತಾರೀಕಿನಂದು ಶ್ರೀಮಂತ ಶಂಕರದೇವರ ತಿಥಿಯಂದು ಗುವಾಹತಿಯಲ್ಲಿ ಬ್ಯಾಂಕ್​ಗೆ ರಜಾ. ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 20ರಂದು ಕ್ರಮವಾಗಿ ಗ್ಯಾಂಗ್ಟಕ್‌ನಲ್ಲಿ ತೀಜ್ (ಹರಿತಾಳಿಕಾ) ಮತ್ತು ಇಂದ್ರಜಾತ್ರಾದಲ್ಲಿ ಬ್ಯಾಂಕ್‌ಗಳನ್ನು ಮುಚ್ಚಲಾಗುವುದು. ಈ ತಿಂಗಳ ಪ್ರಮುಖ ರಜಾದಿನವೆಂದರೆ ಗಣೇಶ ಚತುರ್ಥಿ ಸೆಪ್ಟೆಂಬರ್ 10ರಿಂದ ಆರಂಭವಾಗಲಿದ್ದು, ಅಹಮದಾಬಾದ್, ಬೇಲಾಪುರ, ಬೆಂಗಳೂರು, ಭುವನೇಶ್ವರ, ಚೆನ್ನೈ, ಹೈದರಾಬಾದ್, ಮುಂಬೈ, ನಾಗ್​ಪುರ ಮತ್ತು ಪಣಜಿಯಲ್ಲಿ ಬ್ಯಾಂಕ್​ಗಳು ಮುಚ್ಚಿರುತ್ತವೆ. ಗಣೇಶ ಚತುರ್ಥಿಯ ಎರಡನೇ ದಿನ ಪಣಜಿಯಲ್ಲಿ ಮತ್ತು ಇತರ ಸ್ಥಳಗಳಲ್ಲಿ ಎರಡನೇ ಶನಿವಾರದಂದು ಬ್ಯಾಂಕ್​ಗಳು ಮುಚುತ್ತವೆ. ಸೆಪ್ಟೆಂಬರ್ 17ರಂದು ರಾಂಚಿಯಲ್ಲಿ ಕರ್ಮ ಪೂಜೆಯ ಪ್ರಯುಕ್ತ ಬ್ಯಾಂಕ್​ಗಳು ಮುಚ್ಚುತ್ತವೆ. ಸೆಪ್ಟೆಂಬರ್ 21ರಂದು ಶ್ರೀ ನಾರಾಯಣ ಗುರು ಸಮಾಧಿ ದಿನದಂದು ಕೊಚ್ಚಿ ಮತ್ತು ತಿರುವನಂತಪುರಂನಲ್ಲಿ ಬ್ಯಾಂಕ್​ಗಳು ಕಾರ್ಯ ನಿರ್ವಹಿಸಲ್ಲ. ಬ್ಯಾಂಕ್ ರಜಾ ದಿನಗಳ ಪಟ್ಟಿ ಇಲ್ಲಿದೆ.

ಸೆಪ್ಟೆಂಬರ್ 5: ಭಾನುವಾರ ಸೆಪ್ಟೆಂಬರ್ 8: ಶ್ರೀಮಂತ ಸಂಕರದೇವರ ತಿಥಿ ಸೆಪ್ಟೆಂಬರ್ 9: ತೀಜ್ (ಹರಿತಾಳಿಕ) ಸೆಪ್ಟೆಂಬರ್ 10: ಗಣೇಶ ಚತುರ್ಥಿ/ಸಂವತ್ಸರಿ (ಚತುರ್ಥಿ ಪಕ್ಷ)/ವಿನಾಯಕರ್ ಚತುರ್ಥಿ/ವರಸಿದ್ಧಿ ವಿನಾಯಕ ವ್ರತ ಸೆಪ್ಟೆಂಬರ್ 11: ಎರಡನೇ ಶನಿವಾರ/ಗಣೇಶ ಚತುರ್ಥಿ (2ನೇ ದಿನ) ಸೆಪ್ಟೆಂಬರ್ 12: ಭಾನುವಾರ ಸೆಪ್ಟೆಂಬರ್ 17: ಕರ್ಮ ಪೂಜೆ ಸೆಪ್ಟೆಂಬರ್ 19: ಭಾನುವಾರ ಸೆಪ್ಟೆಂಬರ್ 20: ಇಂದ್ರಜಾತ್ರೆ ಸೆಪ್ಟೆಂಬರ್ 21: ಶ್ರೀ ನಾರಾಯಣ ಗುರು ಸಮಾಧಿ ದಿನ ಸೆಪ್ಟೆಂಬರ್ 25: ನಾಲ್ಕನೇ ಶನಿವಾರ ಸೆಪ್ಟೆಂಬರ್ 26: ಭಾನುವಾರ

ಈ ದಿನಗಳಲ್ಲಿ ಬ್ಯಾಂಕ್ ಶಾಖೆಗಳು ಮುಚ್ಚಿರುತ್ತವೆ. ಮೊಬೈಲ್ ಮತ್ತು ಇಂಟರ್​ನೆಟ್ ಬ್ಯಾಂಕಿಂಗ್ ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಗ್ರಾಹಕರು ಆನ್‌ಲೈನ್ ಮೋಡ್‌ ಮೂಲಕ ವಹಿವಾಟು ನಡೆಸಬಹುದು.

ಇದನ್ನೂ ಓದಿ: Financial Changes: ಪಿಎಫ್​ನಿಂದ ಎಲ್​ಪಿಜಿ ದರದ ತನಕ ಸೆಪ್ಟೆಂಬರ್ 1ರಿಂದ 5 ಪ್ರಮುಖ ಬದಲಾವಣೆಗಳಿವು

(Bank Holidays In September 2021 Bank Will Shut For 12 Days Here Is The Details)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ