AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Of India: ಸಿಸ್ಟಮ್​ ಅಪ್​ಡೇಟ್​ ನಂತರ ಬ್ಯಾಂಕ್ ಆಫ್ ಇಂಡಿಯಾದ ನೆಟ್​ ಬ್ಯಾಂಕಿಂಗ್​ ಸೇರಿ ಇತರ ಯಾವುದೂ ನೆಟ್ಟಗಿಲ್ಲ

ಬ್ಯಾಂಕ್ ಆಫ್ ಇಂಡಿಯಾ ಸಿಸ್ಟಮ್ ಅಪ್​ಗ್ರೇಡ್ ಆದ ನಂತರ ಗ್ರಾಹಕರು ನೆಟ್​ ಬ್ಯಾಂಕಿಂಗ್ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

Bank Of India: ಸಿಸ್ಟಮ್​ ಅಪ್​ಡೇಟ್​ ನಂತರ ಬ್ಯಾಂಕ್ ಆಫ್ ಇಂಡಿಯಾದ ನೆಟ್​ ಬ್ಯಾಂಕಿಂಗ್​ ಸೇರಿ ಇತರ ಯಾವುದೂ ನೆಟ್ಟಗಿಲ್ಲ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata

Updated on: Jan 29, 2022 | 2:56 PM

Share

ಕಳೆದ ನಾಲ್ಕು ದಿನಗಳಿಂದ ಹಲವಾರು ದೂರುಗಳು ಬಂದ ನಂತರ, ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಆಫ್ ಇಂಡಿಯಾ ತನ್ನ ಆನ್​ಲೈನ್​ ಸೇವೆಗಳು ಮತ್ತೆ ಆರಂಭಗೊಂಡಿದೆ. ಈ ವಾರದ ಆರಂಭದಲ್ಲಿ ಟ್ವಿಟರ್​ನಲ್ಲಿ ತಿಳಿಸಿದ ಪ್ರಕಾರ, ಕೋರ್ ಬ್ಯಾಂಕಿಂಗ್ ಸಿಸ್ಟಮ್​ ಅನ್ನು ಅಪ್​ಗ್ರೇಡ್​ ಮಾಡುತ್ತಿರುವುದಾಗಿ ಹೇಳಿದೆ. ಆದರೆ ಈ ಅಪ್​ಗ್ರೇಡ್​ ನಂತರ ಆನ್​ಲೈನ್​ ಸೇವೆಗಳು ಡೌನ್​ ಆಗಿದೆ ಎಂದು ಟ್ವಿಟರ್​ನಲ್ಲಿ ಗ್ರಾಹಕರು ದೂರಿದ್ದರು. ಅಚ್ಚರಿಕರ ಸಂಗತಿ ಏನೆಂದರೆ, ಈ ಸಮಸ್ಯೆಯು ನಾಲ್ಕು ದಿನಗಳ ತನಕ ಮುಂದುವರಿಯಿತು. ಬ್ಯಾಂಕ್​ನ ಎಲ್ಲ ವ್ಯವಸ್ಥೆಯು ಸರಾಗವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಬ್ಯಾಂಕ್ ಹೇಳಿಕೊಂಡಿತ್ತು. “ಆರ್​ಟಿಜಿಎಸ್​, ಎನ್​ಇಎಫ್​ಟಿ, ಇಂಟರ್​ನೆಟ್​ ಬ್ಯಾಂಕಿಂಗ್ (Internet Banking) ಮತ್ತು ಬ್ಯಾಂಕ್ ಆಫ್ ಇಂಡಿಯಾದ ಮೊಬೈಲ್ ಸೇವೆಗಳು ಅಪ್​ಗ್ರೇಡೇಷನ್​ ನಂತರ ಬಳಕೆಯಲ್ಲಿದೆ ಮತ್ತು ಸುಸ್ಥಿರವಾಗುತ್ತಿದೆ,” ಎಂದು ಆ ನಂತರ ಟ್ವಿಟರ್​ ಪೋಸ್ಟ್​ನಲ್ಲಿ ಹೇಳಲಾಗಿತ್ತು. ಗ್ರಾಹಕರಿಗೆ ನೀಡಿದ ಪ್ರತಿಕ್ರಿಯೆಯಲ್ಲೂ ಇದನ್ನೇ ಪುನರಾವರ್ತನೆ ಮಾಡಲಾಗಿದೆ. “ಸರ್, ನಿಮಗೆ ಆದ ಸಮಸ್ಯೆಗೆ ಕ್ಷಮೆ ಕೇಳುತ್ತೇವೆ. ಎಲ್ಲ ಬ್ಯಾಂಕಿಂಗ್ ಸೇವೆಗಳು ಮತ್ತೆ ಆರಂಭಗೊಂಡಿದೆ ಎಂದು ತಿಳಿಸಲು ನಾವು ಬಯಸುತ್ತೇವೆ. ಆದರೆ ಈಗಲೂ ಸಮಸ್ಯೆ ಎದುರಿಸುತ್ತಿದ್ದಲ್ಲಿ ಮತ್ತೆ ನಮ್ಮ ಗಮನಕ್ಕೆ ತನ್ನಿ,” ಎಂದು ಗ್ರಾಹಕರಿಗೆ ತಿಳಿಸಲಾಗಿದೆ.

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಆಗಿದ್ದೇನು? ಜನವರಿ 23ನೇ ತಾರೀಕಿನಂದು ಬ್ಯಾಂಕ್ ಆಫ್ ಇಂಡಿಯಾವು ಟ್ವಿಟರ್​ನಲ್ಲಿ ಹೇಳಿಕೆಯೊಂದನ್ನು ನೀಡಿ, ಜನವರಿ 21ರಿಂದ ಗ್ರಾಹಕರ ಮೈಗ್ರೇಷನ್ ಪ್ರಕ್ರಿಯೆಯನ್ನು ಕೋರ್ ಸಿಸ್ಟಮ್ ಅಪ್​ಗ್ರೆಡೇಷನ್ ಭಾಗವಾಗಿ ಸಮಯ ನಿಗದಿ ಮಾಡಲಾಗಿದೆ. ಜನವರಿ 24ಕ್ಕೆ ಸಂಪೂರ್ಣ ಆಗುತ್ತದೆ ಎಂದು ತಿಳಿಸಿತ್ತು.

ಆದರೆ, ಆ ದಿನದ ಆಚೆಗೆ ಗ್ರಾಹಕರು ದೂರನ್ನು ನೀಡಲು ಆರಂಭಿಸಿದರು. ಆನ್​ಲೈನ್ ವಹಿವಾಟುಗಳು ವಿಫಲ ಆಗುತ್ತಿರುವ ಬಗ್ಗೆ ಮಾಹಿತಿ ನೀಡಿದರು. ಟ್ವಿಟರ್​ನಲ್ಲಿ ರಾಶಿರಾಶಿ ದೂರುಗಳ ಸುರಿಮಳೆ ಆಯಿತು. ನೆಟ್ ಬ್ಯಾಂಕಿಂಗ್ ಸಮಸ್ಯೆ, ಚೆಕ್ ಕ್ಲಿಯರೆನ್ಸ್ ಆಗುತ್ತಿಲ್ಲ, ವಹಿವಾಟುಗಳು ವಿಫಲವಾಗುವುದು ಮತ್ತು ಹಲವಾರು ದೂರುಗಳು ಬರತೊಡಗಿದವು. ಸಿಎನ್​ಬಿಸಿ-ಟಿವಿ 18 ಪ್ರಕಾರ, “ಸಣ್ಣ ತಾಂತ್ರಿಕ ಸಮಸ್ಯೆಗಳು” ಅಪ್​ಗ್ರೇಡ್​ ಕಾರಣಕ್ಕೆ ಆಗಿದೆ ಎಂದು ಬ್ಯಾಂಕ್​ ತಿಳಿಸಿದೆ. ಎಲ್ಲ ದೂರುಗಳಿಗೂ ಒಂದೇ ಪ್ರತಿಕ್ರಿಯೆಯನ್ನು ನೀಡಲಾಗಿದೆ.

ಇದನ್ನೂ ಓದಿ: ಭಾರತದ ಬ್ಯಾಡ್​ ಬ್ಯಾಂಕ್​ಗೆ ನಿಯಂತ್ರಕರ ಅನುಮತಿ; ಮಾರ್ಚ್​ನೊಳಗೆ ಕನಿಷ್ಠ 50 ಸಾವಿರ ಕೋಟಿ ರೂ. ವರ್ಗಾವಣೆ

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್