AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Of India Q3 Profit: ಬ್ಯಾಂಕ್ ಆಫ್ ಇಂಡಿಯಾ ಮೂರನೇ ತ್ರೈಮಾಸಿಕ ಲಾಭ ಶೇ 90ರಷ್ಟು ಹೆಚ್ಚಳ

2021-22ನೇ ಸಾಲಿನ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಲಾಭವು ಶೇ 90ರಷ್ಟು ಹೆಚ್ಚಾಗಿದೆ. ಆ ಬಗ್ಗೆ ಇನ್ನಷ್ಟು ವಿವರ ಇಲ್ಲಿದೆ.

Bank Of India Q3 Profit: ಬ್ಯಾಂಕ್ ಆಫ್ ಇಂಡಿಯಾ ಮೂರನೇ ತ್ರೈಮಾಸಿಕ ಲಾಭ ಶೇ 90ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Feb 04, 2022 | 5:08 PM

2021-22ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕವಾದ ಅಕ್ಟೋಬರ್​ನಿಂದ ಡಿಸೆಂಬರ್​ ಅವಧಿಯಲ್ಲಿ ಬ್ಯಾಂಕ್​ ಆಫ್ ಇಂಡಿಯಾದ (Bank Of India) ಏಕೀಕೃತ ಲಾಭವು ಕಳೆದ ವರ್ಷದ ಇದೇ ಅವಧಿಗಿಂತ ಶೇ 90ರಷ್ಟು ಹೆಚ್ಚಾಗಿ, 1,027 ಕೋಟಿ ರೂಪಾಯಿ ಮುಟ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಲಾಭವು 541 ಕೋಟಿ ರೂಪಾಯಿ ಇತ್ತು. ಬ್ಯಾಂಕ್​ ಆಫ್ ಇಂಡಿಯಾದ ಕಾರ್ಯಾಚರಣೆಯ ಲಾಭವು ಈ ಅವಧಿಯಲ್ಲಿ 2,096 ಕೋಟಿ ಆಗಿದೆ. 2020-21ರ ಮೂರನೇ ತ್ರೈಮಾಸಿಕದಲ್ಲಿ 2665 ಕೋಟಿ ರೂಪಾಯಿ ಇತ್ತು. ಬಡ್ಡಿಯಿಂದ ಗಳಿಸಿದ ಆದಾಯದಲ್ಲಿ ಬಡ್ಡಿಯ ಪಾವತಿಯನ್ನು ಕಳೆದ ಮೇಲೆ ಉಳಿದಂಥದ್ದಕ್ಕೆ ನಿವ್ವಳ ಬಡ್ಡಿ ಆದಾಯ ಎನ್ನಲಾಗುತ್ತದೆ. ಅದು ಕಳೆದ ವರ್ಷಕ್ಕಿಂತ ಶೇ 8ರಷ್ಟು ಕುಸಿದು 3,408 ಕೋಟಿ ಮುಟ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3,739 ಕೋಟಿ ರೂಪಾಯಿಯನ್ನು ವರದಿ ಮಾಡಿತ್ತು.

ಈ ಮಧ್ಯೆ, ಬಡ್ಡಿಯೇತರ ಆದಾಯವಾಗಿ ಪ್ರಸಕ್ತ ತ್ರೈಮಾಸಿಕದಲ್ಲಿ 1835 ಕೋಟಿ ರೂಪಾಯಿ ಬಂದಿದೆ. ಶುಕ್ರವಾರದ ದಿನಾಂತ್ಯಕ್ಕೆ ಎನ್​ಎಸ್​ಇಯಲ್ಲಿ ಬ್ಯಾಂಕ್​ ಆಫ್ ಇಂಡಿಯಾದ ಷೇರಿನ ಬೆಲೆ ಶೇ 3.34ರಷ್ಟು ಕುಸಿದು, 56.50 ರೂಪಾಯಿ ಇತ್ತು. ಬ್ಯಾಂಕ್ ಆಫ್ ಇಂಡಿಯಾದ ಮೂರನೇ ತ್ರೈಮಾಸಿಕ ಫಲಿತಾಂಶದ ಪ್ರಮುಖಾಂಶಗಳು ಇಲ್ಲಿವೆ.

– 2022-23ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ಎನ್​ಐಎಂ (ಜಾಗತಿಕ) ಶೇ 2.27 ಮತ್ತು ಎನ್​ಐಎಂ (ದೇಶೀಯ) ಶೇ 2.51 ಇದೆ

– ರಿಟರ್ನ್ ಆನ್ ಅಸೆಟ್ಸ್ (RoA) ಶೇ 0.51ರಷ್ಟಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 0.28ರಷ್ಟು ಸುಧಾರಣೆ ಆಗಿದೆ.

– ಸಗಟು ಎನ್​ಪಿಎ ಕಳೆದ ತ್ರೈಮಾಸಿಕಕ್ಕಿಂತ ಈ ತ್ರೈಮಾಸಿಕಕ್ಕೆ ಶೇ 8.97ರಷ್ಟು ಕುಸಿದಿದ್ದು, 2021ರ ಸೆಪ್ಟೆಂಬರ್​ನಲ್ಲಿ 50,270 ಕೋಟಿ ರೂಪಾಯಿ ಇದ್ದದ್ದು ಡಿಸೆಂಬರ್​ ಕೊನೆಗೆ 45,760 ಕೋಟಿಗೆ ಇಳಿದಿದೆ.

– ನಿವ್ವಳ ಎನ್​ಪಿಎ ಡಿಸೆಂಬರ್​ನಲ್ಲಿ 10,708 ಕೋಟಿ ರೂಪಾಯಿ ಇದ್ದು, ಸೆಪ್ಟೆಂಬರ್​ ತ್ರೈಮಾಸಿಕದಲ್ಲಿ 10,576 ಕೋಟಿ ರೂ. ಇತ್ತು.

– ನಿವ್ವಳ ಎನ್​ಪಿಎ ಅನುಪಾತವು ಸೆಪ್ಟೆಂಬರ್​ ಶೇ 2.79ರಷ್ಟು ಇದ್ದದ್ದು ಡಿಸೆಂಬರ್​ಗೆ ಶೇ 2.66 ಆಗಿದೆ.

– ಸಗಟು ಎನ್​ಪಿಎ ಅನುಪಾತವು ಡಿಸೆಂಬರ್​ನಲ್ಲಿ ಶೇ 10.46 ತಲುಪಿದ್ದು, ಸೆಪ್ಟೆಂಬರ್​ನಲ್ಲಿ ಶೇ 12ರಷ್ಟಿತ್ತು.

ಇದನ್ನೂ ಓದಿ: Note exchange: ಛಿದ್ರವಾದ, ವಿರೂಪಗೊಂಡ ನೋಟನ್ನು ಏನು ಮಾಡಬೇಕು? ಇಲ್ಲಿದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉತ್ತರ

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​