AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Of India Q3 Profit: ಬ್ಯಾಂಕ್ ಆಫ್ ಇಂಡಿಯಾ ಮೂರನೇ ತ್ರೈಮಾಸಿಕ ಲಾಭ ಶೇ 90ರಷ್ಟು ಹೆಚ್ಚಳ

2021-22ನೇ ಸಾಲಿನ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಬ್ಯಾಂಕ್ ಆಫ್ ಇಂಡಿಯಾದ ಲಾಭವು ಶೇ 90ರಷ್ಟು ಹೆಚ್ಚಾಗಿದೆ. ಆ ಬಗ್ಗೆ ಇನ್ನಷ್ಟು ವಿವರ ಇಲ್ಲಿದೆ.

Bank Of India Q3 Profit: ಬ್ಯಾಂಕ್ ಆಫ್ ಇಂಡಿಯಾ ಮೂರನೇ ತ್ರೈಮಾಸಿಕ ಲಾಭ ಶೇ 90ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 04, 2022 | 5:08 PM

Share

2021-22ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕವಾದ ಅಕ್ಟೋಬರ್​ನಿಂದ ಡಿಸೆಂಬರ್​ ಅವಧಿಯಲ್ಲಿ ಬ್ಯಾಂಕ್​ ಆಫ್ ಇಂಡಿಯಾದ (Bank Of India) ಏಕೀಕೃತ ಲಾಭವು ಕಳೆದ ವರ್ಷದ ಇದೇ ಅವಧಿಗಿಂತ ಶೇ 90ರಷ್ಟು ಹೆಚ್ಚಾಗಿ, 1,027 ಕೋಟಿ ರೂಪಾಯಿ ಮುಟ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಲಾಭವು 541 ಕೋಟಿ ರೂಪಾಯಿ ಇತ್ತು. ಬ್ಯಾಂಕ್​ ಆಫ್ ಇಂಡಿಯಾದ ಕಾರ್ಯಾಚರಣೆಯ ಲಾಭವು ಈ ಅವಧಿಯಲ್ಲಿ 2,096 ಕೋಟಿ ಆಗಿದೆ. 2020-21ರ ಮೂರನೇ ತ್ರೈಮಾಸಿಕದಲ್ಲಿ 2665 ಕೋಟಿ ರೂಪಾಯಿ ಇತ್ತು. ಬಡ್ಡಿಯಿಂದ ಗಳಿಸಿದ ಆದಾಯದಲ್ಲಿ ಬಡ್ಡಿಯ ಪಾವತಿಯನ್ನು ಕಳೆದ ಮೇಲೆ ಉಳಿದಂಥದ್ದಕ್ಕೆ ನಿವ್ವಳ ಬಡ್ಡಿ ಆದಾಯ ಎನ್ನಲಾಗುತ್ತದೆ. ಅದು ಕಳೆದ ವರ್ಷಕ್ಕಿಂತ ಶೇ 8ರಷ್ಟು ಕುಸಿದು 3,408 ಕೋಟಿ ಮುಟ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3,739 ಕೋಟಿ ರೂಪಾಯಿಯನ್ನು ವರದಿ ಮಾಡಿತ್ತು.

ಈ ಮಧ್ಯೆ, ಬಡ್ಡಿಯೇತರ ಆದಾಯವಾಗಿ ಪ್ರಸಕ್ತ ತ್ರೈಮಾಸಿಕದಲ್ಲಿ 1835 ಕೋಟಿ ರೂಪಾಯಿ ಬಂದಿದೆ. ಶುಕ್ರವಾರದ ದಿನಾಂತ್ಯಕ್ಕೆ ಎನ್​ಎಸ್​ಇಯಲ್ಲಿ ಬ್ಯಾಂಕ್​ ಆಫ್ ಇಂಡಿಯಾದ ಷೇರಿನ ಬೆಲೆ ಶೇ 3.34ರಷ್ಟು ಕುಸಿದು, 56.50 ರೂಪಾಯಿ ಇತ್ತು. ಬ್ಯಾಂಕ್ ಆಫ್ ಇಂಡಿಯಾದ ಮೂರನೇ ತ್ರೈಮಾಸಿಕ ಫಲಿತಾಂಶದ ಪ್ರಮುಖಾಂಶಗಳು ಇಲ್ಲಿವೆ.

– 2022-23ನೇ ಸಾಲಿನ ಮೂರನೇ ತ್ರೈಮಾಸಿಕದಲ್ಲಿ ಎನ್​ಐಎಂ (ಜಾಗತಿಕ) ಶೇ 2.27 ಮತ್ತು ಎನ್​ಐಎಂ (ದೇಶೀಯ) ಶೇ 2.51 ಇದೆ

– ರಿಟರ್ನ್ ಆನ್ ಅಸೆಟ್ಸ್ (RoA) ಶೇ 0.51ರಷ್ಟಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 0.28ರಷ್ಟು ಸುಧಾರಣೆ ಆಗಿದೆ.

– ಸಗಟು ಎನ್​ಪಿಎ ಕಳೆದ ತ್ರೈಮಾಸಿಕಕ್ಕಿಂತ ಈ ತ್ರೈಮಾಸಿಕಕ್ಕೆ ಶೇ 8.97ರಷ್ಟು ಕುಸಿದಿದ್ದು, 2021ರ ಸೆಪ್ಟೆಂಬರ್​ನಲ್ಲಿ 50,270 ಕೋಟಿ ರೂಪಾಯಿ ಇದ್ದದ್ದು ಡಿಸೆಂಬರ್​ ಕೊನೆಗೆ 45,760 ಕೋಟಿಗೆ ಇಳಿದಿದೆ.

– ನಿವ್ವಳ ಎನ್​ಪಿಎ ಡಿಸೆಂಬರ್​ನಲ್ಲಿ 10,708 ಕೋಟಿ ರೂಪಾಯಿ ಇದ್ದು, ಸೆಪ್ಟೆಂಬರ್​ ತ್ರೈಮಾಸಿಕದಲ್ಲಿ 10,576 ಕೋಟಿ ರೂ. ಇತ್ತು.

– ನಿವ್ವಳ ಎನ್​ಪಿಎ ಅನುಪಾತವು ಸೆಪ್ಟೆಂಬರ್​ ಶೇ 2.79ರಷ್ಟು ಇದ್ದದ್ದು ಡಿಸೆಂಬರ್​ಗೆ ಶೇ 2.66 ಆಗಿದೆ.

– ಸಗಟು ಎನ್​ಪಿಎ ಅನುಪಾತವು ಡಿಸೆಂಬರ್​ನಲ್ಲಿ ಶೇ 10.46 ತಲುಪಿದ್ದು, ಸೆಪ್ಟೆಂಬರ್​ನಲ್ಲಿ ಶೇ 12ರಷ್ಟಿತ್ತು.

ಇದನ್ನೂ ಓದಿ: Note exchange: ಛಿದ್ರವಾದ, ವಿರೂಪಗೊಂಡ ನೋಟನ್ನು ಏನು ಮಾಡಬೇಕು? ಇಲ್ಲಿದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉತ್ತರ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು