AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Strike: ನವೆಂಬರ್ 19ಕ್ಕೆ ಬ್ಯಾಂಕ್ ಮುಷ್ಕರ; ಎಟಿಎಂ ಸೇವೆಯಲ್ಲೂ ವ್ಯತ್ಯಯ ಸಾಧ್ಯತೆ

Bank Strike; ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (AIBEA) ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ (Bank strike) ಕರೆ ನೀಡಿದೆ.

Bank Strike: ನವೆಂಬರ್ 19ಕ್ಕೆ ಬ್ಯಾಂಕ್ ಮುಷ್ಕರ; ಎಟಿಎಂ ಸೇವೆಯಲ್ಲೂ ವ್ಯತ್ಯಯ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 08, 2022 | 2:33 PM

Share

ನವದೆಹಲಿ: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (AIBEA) ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ (Bank strike) ಕರೆ ನೀಡಿದೆ. ಪರಿಣಾಮವಾಗಿ ಎಟಿಎಂ ಸೇರಿದಂತೆ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 19ರಂದು ಮುಷ್ಕರದಲ್ಲಿ ಭಾಗಿಯಾಗುವಂತೆ ಎಐಬಿಇಎ ತನ್ನ ಸದಸ್ಯರಿಗೆ ಕರೆ ನೀಡಿರುವುದು ಗಮನಕ್ಕೆ ಬಂದಿದೆ ಎಂದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ ತಿಳಿಸಿದೆ.

ಕಚೇರಿಗಳು ಮತ್ತು ಶಾಖೆಗಳಲ್ಲಿ ಬ್ಯಾಂಕಿಂಗ್ ಸೇವೆಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುತ್ತೇವೆ. ಆದಾಗ್ಯೂ, ಮುಷ್ಕರ ತೀವ್ರಗೊಂಡಲ್ಲಿ ಸೇವೆಗಳಲ್ಲಿ ವ್ಯತ್ಯಯವಾಗಬಹುದು ಎಂದು ಬ್ಯಾಂಕ್ ಆಫ್ ಬರೋಡ ಹೇಳಿದೆ.

ಸೇವಾ ಭದ್ರತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಮತ್ತು ಒಕ್ಕೂಟದಲ್ಲಿ ಸಕ್ರಿಯರಾಗಿರುವ ಬ್ಯಾಂಕ್ ಉದ್ಯೋಗಿಗಳ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ಖಂಡಿಸಿ ನವೆಂಬರ್ 19ರಂದು ಮುಷ್ಕರ ಹಮ್ಮಿಕೊಳ್ಳುವುದಾಗಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಈ ಹಿಂದೆ ಅಕ್ಟೋಬರ್​ನಲ್ಲಿ ತಿಳಿಸಿದ್ದರು.

ಇದನ್ನೂ ಓದಿ
Image
ನಿಮ್ಮ ಪಿಎಫ್​ ಖಾತೆಗೂ ಬಂತೇ ಇಪಿಎಫ್​ ಬಡ್ಡಿ ಹಣ, ಪರಿಶೀಲಿಸುವುದು ಹೇಗೆ? ಇಲ್ಲಿದೆ ನೋಡಿ
Image
Stock Market: ಷೇರುಪೇಟೆ ವಹಿವಾಟಿಗೆ ಇಂದು ಬಿಡುವು; ಕಾರಣವೇನು?
Image
Petrol Price on November 8: ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತ; ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಡೀಸೆಲ್ ದರ ಹೀಗಿದೆ
Image
2 ಲಕ್ಷ ರೂ. ಕವರೇಜ್​; ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮೆ ಬಗ್ಗೆ ನೀವು ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

ಒಕ್ಕೂಟದ ಸದಸ್ಯರ ಮೇಲಿನ ದಾಳಿಗೆ ಖಂಡನೆ

ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ಮತ್ತು ಸಕ್ರಿಯರಾಗಿರುವ ಬ್ಯಾಂಕ್ ಉದ್ಯೋಗಿಗಳ ಮೇಲೆ ಇತ್ತೀಚಿನ ದಿನಗಳಲ್ಲಿ ದಾಳಿಗಳು ಹೆಚ್ಚುತ್ತಿವೆ. ಇವುಗಳ ಹಿಂದೆ ಬಲವಾದ ಕಾರಣವಿದೆ. ಇವುಗಳು ವ್ಯವಸ್ಥಿತ ಮತ್ತು ಹುಚ್ಚುತನದಿಂದ ಕೂಡಿದ ದಾಳಿಗಳು. ಈ ದಾಳಿಗಳ ವಿರುದ್ಧ ನಾವು ಪ್ರತಿಭಟಿಸಬೇಕಿದೆ. ಒಟ್ಟಾರೆಯಾಗಿ ಈ ಉದ್ದೇಶಿತ ದಾಳಿಗಳನ್ನು ತಡೆಯಲು ಬ್ಯಾಂಕ್ ಉದ್ಯೋಗಿಗಳ ಸಂಘದ ಮಟ್ಟದಲ್ಲಿ ನಾವು ಪ್ರಯತ್ನಿಸಬೇಕಿದೆ. ನಾವು ಈ ದಾಳಿಗಳನ್ನು ಒಗ್ಗಟ್ಟಿನಿಂದ ವಿರೋಧಿಸಬೇಕು, ಹಿಮ್ಮೆಟ್ಟಿಸಬೇಕು ಎಂದು ಸಿ.ಎಚ್. ವೆಂಕಟಾಚಲಂ ಹೇಳಿರುವುದಾಗಿ ‘ಐಎಎನ್​ಎಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: ನಿಮ್ಮ ಪಿಎಫ್​ ಖಾತೆಗೂ ಬಂತೇ ಇಪಿಎಫ್​ ಬಡ್ಡಿ ಹಣ, ಪರಿಶೀಲಿಸುವುದು ಹೇಗೆ? ಇಲ್ಲಿದೆ ನೋಡಿ

ಒಕ್ಕೂಟದ ನಾಯಕರನ್ನು ಸೊನಾಲಿ ಬ್ಯಾಂಕ್, ಎಂಯುಎಫ್​ಜಿ ಬ್ಯಾಂಕ್, ಫೆಡೆರಲ್ ಬ್ಯಾಂಕ್ ಹಾಗೂ ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್​ಗಳಿಂದ ವಜಾಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ 3,300 ಗುಮಾಸ್ತರನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.

ಬ್ಯಾಂಕ್ ಉದ್ಯೋಗಿಗಳಿಂದ ಪ್ರತಿಭಟನೆ

ಮುಷ್ಕರದಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಸದಸ್ಯರು ವಿವಿಧ ರೀತಿಯ ಪ್ರತಿಭಟನೆಗಳನ್ನೂ ನಡೆಸಲಿದ್ದಾರೆ ಎಂದು ವೆಂಕಟಾಚಲಂ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ