AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank strike: ಬ್ಯಾಂಕ್ ಕೆಲಸಗಳನ್ನು ತಿಂಗಳ ಕೊನೆಗೆ ಇಟ್ಟುಕೊಳ್ಳಬೇಡಿ; ಮಾಸಾಂತ್ಯದಲ್ಲಿ ಬ್ಯಾಂಕ್ ಮುಷ್ಕರ

ವಾರಕ್ಕೆ ಐದೇ ದಿನ ಕೆಲಸ, ಬ್ಯಾಂಕ್ ನೌಕರರ ಪಿಂಚಣಿ ವ್ಯವಸ್ಥೆ ನವೀಕರಣ, ವೇತನ ಪರಿಷ್ಕರಣೆ, ಎನ್​ಪಿಎಸ್ ರದ್ದತಿ ಸೇರಿದಂತೆ ಹಲವು ಬೇಡಿಕೆಗಳನ್ನು ಬ್ಯಾಂಕ್ ನೌಕರರು ಮುಂದಿಟ್ಟಿದ್ದಾರೆ.

Bank strike: ಬ್ಯಾಂಕ್ ಕೆಲಸಗಳನ್ನು ತಿಂಗಳ ಕೊನೆಗೆ ಇಟ್ಟುಕೊಳ್ಳಬೇಡಿ; ಮಾಸಾಂತ್ಯದಲ್ಲಿ ಬ್ಯಾಂಕ್ ಮುಷ್ಕರ
ಸಾಂದರ್ಭಿಕ ಚಿತ್ರImage Credit source: PTI
TV9 Web
| Edited By: |

Updated on: Jan 14, 2023 | 1:39 PM

Share

ನವದೆಹಲಿ: ವಾರದಲ್ಲಿ ಐದು ದಿನ ಮಾತ್ರ ಕೆಲಸ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್​ ಒಕ್ಕೂಟಗಳ ಸಂಘಟನೆ ‘ಯುನೈಟೆಡ್ ಫೋರಮ್​ ಆಫ್ ಬ್ಯಾಂಕ್ ಯೂನಿಯನ್ಸ್ (UFBU)’ ಇದೇ ತಿಂಗಳ 30 ಮತ್ತು 31ರಂದು ದೇಶದಾದ್ಯಂತ ಬ್ಯಾಂಕ್ ಮುಷ್ಕರಕ್ಕೆ (Bank strike) ಕರೆ ನೀಡಿದೆ. ನಮ್ಮ ಬೇಡಿಕೆಗಳಿಗೆ ಸಂಬಂದಿಸಿದ ಪತ್ರಗಳಿಗೆ ‘ಇಂಡಿಯನ್ ಬ್ಯಾಂಕರ್ಸ್ ಅಸೋಸಿಯೇಷನ್​ನಿಂದ (Indian Banks’ Association) ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಜನವರಿ 30 ಮತ್ತು 31ರಂದು ಮುಷ್ಕರ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಕಟಾಚಲಂ ತಿಳಿಸಿದ್ದಾರೆ. ಮುಂಬೈಯಲ್ಲಿ ನಡೆದ ಸಭೆಯ ಬಳಿಕ ಮುಷ್ಕರ ನಡೆಸುವ ತೀರ್ಮಾನಕ್ಕೆ ಬರಲಾಯಿತು ಎಂದು ಅವರು ಹೇಳಿದ್ದಾರೆ.

ವಾರಕ್ಕೆ ಐದೇ ದಿನ ಕೆಲಸ, ಬ್ಯಾಂಕ್ ನೌಕರರ ಪಿಂಚಣಿ ವ್ಯವಸ್ಥೆ ನವೀಕರಣ, ವೇತನ ಪರಿಷ್ಕರಣೆ, ಎನ್​ಪಿಎಸ್ ರದ್ದತಿ ಸೇರಿದಂತೆ ಹಲವು ಬೇಡಿಕೆಗಳನ್ನು ಬ್ಯಾಂಕ್ ನೌಕರರು ಮುಂದಿಟ್ಟಿದ್ದಾರೆ.

ಸತತ ನಾಲ್ಕು ದಿನ ಕಾರ್ಯನಿರ್ವಹಿಸಲ್ಲ ಬ್ಯಾಂಕ್​ಗಳು

ಬ್ಯಾಂಕ್ ನೌಕರರ ಮುಷ್ಕರದಿಂದಾಗಿ ತಿಂಗಳ ಕೊನೆಯಲ್ಲಿ ಬ್ಯಾಂಕಿಂಗ್ ವಹಿವಾಟುಗಳಿಗೆ ತೊಡಕು ಉಂಟಾಗುವ ಸಾಧ್ಯತೆ ಇದೆ. ಜನವರಿ 28 ನಾಲ್ಕನೇ ಶನಿವಾರ ಆಗಿರುವುದರಿಂದ ಬ್ಯಾಂಕ್​ ರಜೆ ಇರುತ್ತದೆ. ಮರುದಿನ ಭಾನುವಾರ ಹೇಗೂ ರಜೆ. 30 ಮತ್ತು 31ರಂದು ಮುಷ್ಕರ ನಡೆದರೆ ಒಟ್ಟು ನಾಲ್ಕು ದಿನ ಬ್ಯಾಂಕಿಂಗ್ ವಹಿವಾಟು ಸ್ಥಗಿತಗೊಳ್ಳಲಿದೆ. ಪರಿಣಾಮವಾಗಿ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯಗೊಳ್ಳಳಿದೆ. ಇಂಟರ್​ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಇತ್ಯಾದಿ ಆನ್​ಲೈನ್ ವಹಿವಾಟುಗಳ ಮೇಲೆ ದೊಡ್ಡ ಪರಿಣಾಮವಾಗದು.

ಈ ಹಿಂದೆ 2022ರ ನವೆಂಬರ್​​ 19ರಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘವು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ, ಬಳಿಕ ಮುಷ್ಕರ ನಿರ್ಧಾರವನ್ನು ಹಿಂಪಡೆದಿತ್ತು. ಕೈಗಾರಿಕಾ ವಿವಾದ ಕಾಯ್ದೆ ಉಲ್ಲಂಘನೆ, ವರ್ಗಾವಣೆ ಮೂಲಕ ನೌಕರರಿಗೆ ಕಿರುಕುಳ, ಕಾರ್ಮಿಕ ಸಂಘಟನೆಗಳ ಮೇಲೆ ದಾಳಿ ಹೆಚ್ಚಳ ಮತ್ತು ಸಿಎಸ್‌ಬಿ ಬ್ಯಾಂಕ್‌ನಲ್ಲಿ ವೇತನ ಪರಿಷ್ಕರಣೆ ನಿರಾಕರಣೆ ಸೇರಿದಂತೆ ಹಲವು ವಿಷಯಗಳ ಕುರಿತ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಲಾಗಿಗತ್ತು. ಬ್ಯಾಂಕ್ ಉದ್ಯೋಗಿಗಳ ಸಂಘ ಮತ್ತು ಬ್ಯಾಂಕ್‌ಗಳು ದ್ವಿಪಕ್ಷೀಯವಾಗಿ ಸಮಸ್ಯೆಗಳನ್ನು ಪರಿಹರಿಸಲು ಒಪ್ಪಿಕೊಂಡಿದ್ದರಿಂದ ಮುಷ್ಕರ ಹಿಂಪಡೆಯಲಾಗಿತ್ತು. ಇದೀಗ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಬ್ಯಾಂಕ್ ನೌಕರರು ಪಟ್ಟುಹಿಡಿದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?