AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Strike Today: ಇಂದು ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಬಂದ್, ಕಾರಣ ಇಲ್ಲಿದೆ ನೋಡಿ

ಇಂದು ರಾಷ್ಟ್ರವ್ಯಾಪಿ ಬ್ಯಾಂಕ್​​​ ಸೇವೆಗಳು ಬಂದ್​​​​ ಮಾಡಲಾಗಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಮತ್ತು ವಹಿವಾಟುಗಳು ಮೇಲೆ ಪರಿಣಾಮ ಉಂಟು ಮಾಡಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಎಕ್ಸ್​​​ನಲ್ಲಿ ಮಾಹಿತಿ ನೀಡಿದ್ದಾರೆ. ಈ ಬ್ಯಾಂಕ್ ​​​ಮುಷ್ಕರ ಯಾಕೆ? ಕಾರಣ ಇಲ್ಲಿದೆ ನೋಡಿ.

Bank Strike Today: ಇಂದು ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಬಂದ್, ಕಾರಣ ಇಲ್ಲಿದೆ ನೋಡಿ
ಬ್ಯಾಂಕ್​​ ಮುಷ್ಕರ
ಅಕ್ಷಯ್​ ಪಲ್ಲಮಜಲು​​
|

Updated on:Aug 28, 2024 | 10:09 AM

Share

ಇಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಆ ಕಾರಣಕ್ಕೆ ಇಂದು (ಆಗಸ್ಟ್ 28) ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಮತ್ತು ವಹಿವಾಟುಗಳು ಮೇಲೆ ಪರಿಣಾಮ ಉಂಟು ಮಾಡಲಿದೆ. ಬ್ಯಾಂಕ್ ಸಿಬ್ಬಂದಿ ಸಂಘದ ಹದಿಮೂರು ಪದಾಧಿಕಾರಿಗಳನ್ನು ಚಾರ್ಜ್ ಶೀಟ್ ಮಾಡಿರುವ ಬ್ಯಾಂಕ್ ಆಫ್ ಇಂಡಿಯಾದ ಕ್ರಮವನ್ನು ವಿರೋಧಿಸಿ ಇಂದು ಎಐಬಿಇಎ ರಾಷ್ಟ್ರವ್ಯಾಪಿ ಮುಷ್ಕರವನ್ನು ಕೈಗೊಳ್ಳಲಾಗಿದೆ.

ಇನ್ನು ಈ ಬಗ್ಗೆ ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿಎಚ್ ವೆಂಕಟಾಚಲಂ ಅವರು ಪ್ರತಿಕಾ ಪ್ರಕಟನೆಯನ್ನು ಎಕ್ಸ್​​​​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಗಾಗಲೇ ಮುಷ್ಕರದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು. ಸರ್ಕಾರಕ್ಕೆ ತನ್ನ ಎಲ್ಲ ಬೇಡಿಕೆಗಳನ್ನು ಪ್ರಸ್ತಾಪಿಸಿದ್ದೇವೆ ಎಂದು ತಾವು ಹಂಚಿಕೊಂಡಿರುವ ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇಂದು ಎಐಬಿಇಎ ಮುಷ್ಕರಕ್ಕೆ ಕರೆ ನೀಡಿದ್ದು, ಟ್ರೇಡ್ ಯೂನಿಯನ್ AIBOC-NCBE-BEFI-AIBOA-INBOC-INBEF ಮೇಲಿನ ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಈ ಮುಷ್ಕರ ಮಾಡಲಾಗುತ್ತಿದೆ ಎಂದು ವೆಂಕಟಾಚಲಂ ಹೇಳಿದ್ದಾರೆ. ಇಂದಿನ ಬ್ಯಾಂಕ್ ಮುಷ್ಕರದಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ಬ್ಯಾಂಕ್ ಉದ್ಯೋಗಿಗಳ ರಾಷ್ಟ್ರೀಯ ಒಕ್ಕೂಟ, ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ ಸೇರಿದಂತೆ ಸುಮಾರು ಐದು ಬ್ಯಾಂಕ್ ಯೂನಿಯನ್‌ಗಳ ಸದಸ್ಯರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಪೇಟಿಎಂ ಸಿಇಒಗೆ ಶೋಕಾಸ್ ನೋಟೀಸ್ ಕೊಟ್ಟ ಸೆಬಿ ಮೇಲೆ ಪ್ರಶ್ನಾರ್ಥಕ ಚಿಹ್ನೆ? ತಪ್ಪುಗಳಾಗಿರುವುದು ಎಲ್ಲಿ?

ಬ್ಯಾಂಕ್ ಮುಷ್ಕರ ಯಾಕೆ?

ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಯೂನಿಯನ್-ಕೇರಳದ 23 ನೇ ದ್ವೈವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದಕ್ಕಾಗಿ ತನ್ನ ಹದಿಮೂರು ಅಧಿಕಾರಿಗಳ ವಿರುದ್ಧ ಬ್ಯಾಂಕ್ ಆಫ್ ಇಂಡಿಯಾ ನೋಟಿಸ್​​​ ನೀಡಿ, ಕ್ರಮ ತೆಗೆದುಕೊಂಡು ಚಾರ್ಜ್ ಶೀಟ್ ಸಲ್ಲಿಸಿದೆ. ಈ ಕಾರಣಕ್ಕೆ ಇಂದು ಬ್ಯಾಂಕ್​​ಗಳು ಮುಷ್ಕರ್​​​ವನ್ನು ಮಾಡುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:04 am, Wed, 28 August 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ