AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank strike: ಸೇವಾ ಭದ್ರತೆಗೆ ಆಗ್ರಹಿಸಿ ನವೆಂಬರ್ 19ಕ್ಕೆ ಬ್ಯಾಂಕ್​ ನೌಕರರ ಮುಷ್ಕರ

ಸೇವಾ ಭದ್ರತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.

Bank strike: ಸೇವಾ ಭದ್ರತೆಗೆ ಆಗ್ರಹಿಸಿ ನವೆಂಬರ್ 19ಕ್ಕೆ ಬ್ಯಾಂಕ್​ ನೌಕರರ ಮುಷ್ಕರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Oct 25, 2022 | 2:43 PM

ನವದೆಹಲಿ: ಸೇವಾ ಭದ್ರತೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (AIBEA) ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ (Bank strike) ಕರೆ ನೀಡಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಸೇವಾ ಭದ್ರತೆಗೆ ಆಗ್ರಹಿಸಿ ಮತ್ತು ಒಕ್ಕೂಟದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿರುವ ಉದ್ಯೋಗಿಗಳನ್ನು ಗುರಿಯಾಗಿಸುವುದನ್ನು ವಿರೋಧಿಸಿ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಉದ್ಯೋಗಿಗಳ ಮೇಲೆ ದಾಳಿಗಳು ಹೆಚ್ಚುತ್ತಿವೆ. ಇವುಗಳ ಹಿಂದೆ ಬಲವಾದ ಕಾರಣವಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ಹೇಳಿದ್ದಾರೆ.

‘ಈ ದಾಳಿಗಳ ಹಿಂದೆ ಎಳೆಯೊಂದಿದೆ, ಹುಚ್ಚುತನವಿದೆ. ಇದನ್ನು ನಾವು ಪ್ರತಿಭಟಿಸಬೇಕಿದೆ. ಒಟ್ಟಾರೆಯಾಗಿ ಈ ಉದ್ದೇಶಿತ ದಾಳಿಗಳನ್ನು ತಡೆಯಲು ಬ್ಯಾಂಕ್ ಉದ್ಯೋಗಿಗಳ ಸಂಘದ ಮಟ್ಟದಲ್ಲಿ ನಾವು ಪ್ರಯತ್ನಿಸಬೇಕಿದೆ’ ಎಂದು ವೆಂಕಟಾಚಲಂ ಹೇಳಿದ್ದಾರೆ.

ಇದನ್ನೂ ಓದಿ
Image
Rishi Sunak: ರಿಷಿ ಸುನಕ್​ರ​ ಸಿರಿವಂತ ಪತ್ನಿ ಮತ್ತು ಅತ್ತೆ-ಮಾವ ಬಗ್ಗೆ ಇಲ್ಲಿದೆ ವಿವರ
Image
Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ
Image
Muhurat Trading: ಉತ್ತಮ ಗಳಿಕೆಯೊಂದಿಗೆ ಮುಹೂರ್ತ ಟ್ರೇಡಿಂಗ್ ಮುಗಿಸಿದ ನಿಫ್ಟಿ, ಸೆನ್ಸೆಕ್ಸ್, ಇಲ್ಲಿದೆ ಗಳಿಕೆ ವಿವರ
Image
Festive Season: ಹಬ್ಬದ ಅವಧಿಯಲ್ಲಿ ಮಿತಿಮೀರಿದ ಖರ್ಚಾಗುತ್ತಿದೆಯೇ? ತಡೆಯಲು ಇಲ್ಲಿದೆ 5 ಟಿಪ್ಸ್

ಇದನ್ನೂ ಓದಿ: WhatsApp Down: ಭಾರತದ ಹಲವು ಭಾಗಗಳಲ್ಲಿ ವಾಟ್ಸ್​ಆ್ಯಪ್ ಡೌನ್

ಒಕ್ಕೂಟದ ನಾಯಕರನ್ನು ಸೊನಾಲಿ ಬ್ಯಾಂಕ್, ಎಂಯುಎಫ್​ಜಿ ಬ್ಯಾಂಕ್, ಫೆಡೆರಲ್ ಬ್ಯಾಂಕ್ ಹಾಗೂ ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್​ಗಳಿಂದ ವಜಾಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಬ್ಯಾಂಕ್ ಆಫ್ ಮಹಾರಾಷ್ಟ್ರದಂಥ ಬ್ಯಾಂಕ್​ಗಳು ವ್ಯಾಪಾರಿ ಒಕ್ಕೂಟದ ಹಕ್ಕುಗಳನ್ನು ನಿರಾಕರಿಸುತ್ತಿವೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಹಾಗೂ ಐಡಿಬಿಐ ಬ್ಯಾಂಕ್​ಗಳು ಅನೇಕ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆ ನೀಡುತ್ತಿವೆ ಎಂದು ಅವರು ಹೇಳಿದ್ದಾರೆ.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ‘ಜಂಗಲ್ ರಾಜ್’ ಇದ್ದು, ಅದರ ಮ್ಯಾನೇಜ್‌ಮೆಂಟ್ ವಿವೇಚನಾರಹಿತ ವರ್ಗಾವಣೆಗಳನ್ನು ಮಾಡುತ್ತಿದೆ ಎಂದು ಅವರು ಟೀಕಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ 3,300 ಕ್ಲರ್ಕ್​ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: Motor Insurance: ಮೊದಲ ಬೈಕ್ ಅಥವಾ ಕಾರು ಖರೀದಿಗೆ ಮುಂದಾಗಿದ್ದೀರಾ? ಮೋಟಾರು ವಿಮೆಗೆ ಸಂಬಂಧಿಸಿದ ಈ ಐದು ಅಂಶ ಗಮನದಲ್ಲಿರಲಿ

ರಾಷ್ಟ್ರವ್ಯಾಪಿ ಮುಷ್ಕರಕ್ಕೂ ಮುನ್ನ ಒಕ್ಕೂಟದ ಸದಸ್ಯರು ವಿವಿಧ ರೀತಿಯ ಪ್ರತಿಭಟನೆಗಳನ್ನೂ ನಡೆಸಲಿದ್ದಾರೆ ಎಂದು ವೆಂಕಟಾಚಲಂ ತಿಳಿಸಿದ್ದಾರೆ.

ಈ ಹಿಂದೆ ಖಾಸಗೀಕರಣ ವಿರೋಧಿಸಿ ಮಾರ್ಚ್ 28-29ರಂದು ವಿವಿಧ ಕಾರ್ಮಿಕ ಸಂಘಟನೆಗಳು ನಡೆಸಿದ್ದ ಮುಷ್ಕರದಲ್ಲಿ ವಿವಿಧ ಬ್ಯಾಂಕ್​ಗಳ ಸಿಬ್ಬಂದಿಯೂ ಭಾಗಿಯಾಗಿದ್ದರು. ಪರಿಣಾಮವಾಗಿ ಎಸ್​ಬಿಐ ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ ವಹಿವಾಟಿಗೆ ಸಮಸ್ಯೆಯಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ