Banking Frauds: ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಹೆಸರಲ್ಲಿ ವಂಚನೆ; ಎಚ್ಚರ ವಹಿಸಿ

ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಹೆಸರಲ್ಲಿ ವಂಚಕರು ಹೇಗೆ ನಿಮ್ಮ ಕ್ರೆಡಿಟ್ ಕಾರ್ಡ್ ಖಾತೆಯಿಂದ ಹಣ ಎಗರಿಸಬಹುದು? ಅದನ್ನ ತಡೆಯಲು ನೀವು ಏನು ಮುನ್ನಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

Banking Frauds: ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಹೆಸರಲ್ಲಿ ವಂಚನೆ; ಎಚ್ಚರ ವಹಿಸಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Oct 27, 2022 | 5:09 PM

ಬ್ಯಾಂಕಿಂಗ್ (Banking) ವ್ಯವಸ್ಥೆ ಹೆಚ್ಚೆಚ್ಚು ಡಿಜಿಟಲೈಸ್ ಆದಂತೆ, ಪಾರದರ್ಶಕವಾದಂತೆ ವಂಚಕರೂ ಸಹ ಗ್ರಾಹಕರನ್ನು ಮೋಸಗೊಳಿಸಲು ಹೊಸ ಹೊಸ ತಂತ್ರಗಳನ್ನು ಹೂಡುತ್ತಾರೆ. ಅಕ್ರಮಗಳನ್ನು ತಡೆಯುವುದಕ್ಕಾಗಿ ಬ್ಯಾಂಕ್​ಗಳೂ ಸಹ ಪದೇಪದೇ ಗ್ರಾಹಕರನ್ನು ಎಚ್ಚರಿಸುವ, ಅವರಲ್ಲಿ ಜಾಗೃತಿ ಮೂಡಿಸುವ ಕೆಲಸಗಳನ್ನು ಮಾಡುತ್ತವೆ. ಆದಾಗ್ಯೂ, ವಂಚನೆ ಜಾಲಕ್ಕೆ ಸಿಲುಕುವವರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಬ್ಯಾಂಕಿಂಗ್​ ಮತ್ತು ಹಣಕಾಸು ಅಕ್ರಮಗಳಿಗೆ (Banking Frauds) ಸಂಬಂಧಿಸಿ ಜಾಗೃತಿ ಮೂಡಿಸುವ ಸಲುವಾಗಿ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಂಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಚಿತ್ರಕಥೆ ಮೂಲಕ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಪುಸ್ತಕವೊಂದನ್ನು ಕೆಲ ಸಮಯ ಹಿಂದೆ ಹೊರತಂದಿದೆ. ವಂಚನೆಯ ನಲವತ್ತು ಮುಖಗಳನ್ನು ಅದರಲ್ಲಿ ಪರಿಚಯಿಸಿ ‘ರಾಜು ಮತ್ತು ನಲ್ವತ್ತು ಕಳ್ಳರು (Raju and the forty thieves)’ ಎಂಬ ಶೀರ್ಷಿಕೆಯಡಿ ಜಾಗೃತಿ ಮೂಡಿಸುವ ಯತ್ನವನ್ನು ಅದರಲ್ಲಿ ಮಾಡಲಾಗಿದೆ.

ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಹೆಸರಲ್ಲಿ ವಂಚಕರು ಹೇಗೆ ನಿಮ್ಮ ಕ್ರೆಡಿಟ್ ಕಾರ್ಡ್ ಖಾತೆಯಿಂದ ಹಣ ಎಗರಿಸಬಹುದು? ಅದನ್ನ ತಡೆಯಲು ನೀವು ಏನು ಮುನ್ನಚ್ಚರಿಕೆ ವಹಿಸಬೇಕು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Banking Frauds: ಆನ್​ಲೈನ್ ಮಾರುಕಟ್ಟೆಯಲ್ಲಿ ವ್ಯವಹರಿಸುವಾಗ ಹೀಗೆ ಮೋಸ ಹೋಗಬೇಡಿ

ಇದನ್ನೂ ಓದಿ
Image
Salary Hike Survey: ವೇತನ ಹೆಚ್ಚಳಕ್ಕೆ ಕಾಯುತ್ತಿದ್ದೀರಾ? ಸಿಹಿ ಸುದ್ದಿ ನೀಡಿದೆ ಹೊಸ ಸಮೀಕ್ಷೆ
Image
Petrol Price on October 27: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
Image
Gold Price Today: ಚಿನ್ನ, ಬೆಳ್ಳಿ ದರ ತುಸು ಹೆಚ್ಚಳ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ? ಇಲ್ಲಿದೆ ವಿವರ
Image
Fake Currency: ಎಟಿಎಂನಲ್ಲಿ ಬಂದ 200 ರೂ. ನಕಲಿ ನೋಟುಗಳು, ಗ್ರಾಹಕರು ತಬ್ಬಿಬ್ಬು

ರಾಜು ಮತ್ತು ನಲ್ವತ್ತು ಕಳ್ಳರು ಭಾಗ – 4

ರಾಜು ಎಂಬವರಿಗೆ ಒಮ್ಮೆ ಅಪರಿಚಿತ ಮೊಬೈಲ್ ಸಂಖ್ಯೆಯೊಂದರಿಂದ ಕರೆ ಬರುತ್ತದೆ.

ಅಪರಿಚಿತ: ಗುಡ್ ಮಾರ್ನಿಂಗ್ ರಾಜು ಅವರೇ. ನಾನು ನಿಮ್ಮ ಬ್ಯಾಂಕ್​ನಿಂದ ರೋಹಿತ್ ಕುಮಾರ್ ಮಾತನಾಡುತ್ತಿದ್ದೇನೆ. ನೀವು ನಮ್ಮ ಉತ್ತಮ ಗ್ರಾಹಕರಾಗಿದ್ದು, ನಿಮ್ಮ ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಮಾಡಿರುವುದನ್ನು ನಿಮಗೆ ತಿಳಿಸಲು ಸಂತಸವಾಗುತ್ತಿದೆ.

ರಾಜು: ಒಹ್, ಒಳ್ಳೆಯ ಸುದ್ದಿ

ಅಪರಿಚಿತ: ಶುಲ್ಕ ಮನ್ನಾ ಪ್ರಕ್ರಿಯೆ ಮುಂದುವರಿಸುವ ಮುನ್ನ ಕೆಲವು ವಿವರಗಳನ್ನು ಖಚಿತಪಡಿಸಿ. ನಿಮ್ಮ ಕ್ರೆಡಿಟ್ ಕಾರ್ಡ್ ಸಂಖ್ಯೆ 42781234XXX ಅಲ್ಲವೇ? ಪೂರ್ತಿ ಹೆಸರು ರಾಜು ದೇಶಪಾಂಡೆ ಅಲ್ಲವೇ?

ಅಪರಿಚಿತ ವಂಚಕ ಅದಾಗಲೇ ರಾಜು ಅವರ ಕ್ರೆಡಿಟ್ ಕಾರ್ಡ್ ವಿವರಗಳನ್ನು ಕಲೆಹಾಕಿಕೊಂಡಿದ್ದ.

ರಾಜು: ಹೌದು, ನೀವು ಹೇಳಿದ್ದು ಸರಿಯಾಗಿದೆ.

ಅಪರಿಚಿತ: ರಾಜು ಅವರೇ, ನಿಮ್ಮ ಮೊಬೈಲ್​ಗೆ ಬಂದಿರುವ ಒಟಿಪಿ ಸಂಖ್ಯೆಯನ್ನು ತಿಳಿಸಿ. ನಂತರ ನಾವು ನಿಮ್ಮ ಶುಲ್ಕ ಮನ್ನಾ ಪ್ರಕ್ರಿಯೆ ಮುಂದುವರಿಸಲು ಸಾಧ್ಯವಾಗುತ್ತದೆ.

ತಮ್ಮ ಕ್ರೆಡಿಟ್ ಕಾರ್ಡ್​ನ ಎಲ್ಲ ವಿವರ ಅಪರಿಚಿತ ವ್ಯಕ್ತಿಗೆ ತಿಳಿದಿರುವುದರಿಂದ ಆತ ಕರೆ ಮಾಡಿರುವುದು ಬ್ಯಾಂಕ್​ನಿಂದಲೇ ಆಗಿರಬಹುದೆಂದು ಭಾವಿಸಿದ ರಾಜು ಒಟಿಪಿಯನ್ನು ಆತನಿಗೆ ತಿಳಿಸುತ್ತಾರೆ.

ಅಪರಿಚಿತ: ಧನ್ಯವಾದಗಳು ರಾಜು ಅವರೇ. ನಿಮ್ಮ ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಆಗಿರುತ್ತದೆ. ಶುಭ ದಿನ.

ಕರೆ ಕಟ್ ಆದ ಕೂಡಲೇ ರಾಜು ಕ್ರೆಡಿಟ್ ಕಾರ್ಡ್ ಖಾತೆಯಿಂದ 12,000 ರೂ. ಕಡಿತವಾಗುತ್ತದೆ. ರಾಜು ಕೂಡಲೇ ಅಪರಿಚಿತನ ಮೊಬೈಲ್ ಸಂಖ್ಯೆಗೆ ಕರೆ ಮಾಡುತ್ತಾರೆ. ಆದರೆ ಅದು ಸ್ವಿಚ್ಡ್ ಆಫ್ ಆಗಿರುತ್ತದೆ. ರಾಜುಗೆ ತಾನು ಮೋಸ ಹೋಗಿರುವುದು ಅರಿವಾಗುತ್ತದೆ. ಒಟಿಪಿಯನ್ನು ಆತನ ಜತೆ ಹಂಚಿಕೊಳ್ಳಬಾರದಿತ್ತು ಎಂಬುದು ಮನವರಿಕೆಯಾಗುತ್ತದೆ.

ಎಚ್ಚರವಿರಲಿ:

ಯಾರ ಜತೆಗೂ ಒಟಿಪಿ ಹಂಚಿಕೊಳ್ಳಬೇಡಿ. ಅಪರಿಚಿತ ವಂಚಕರು ಹೇಗೋ ಮಾಡಿ ನಿಮ್ಮ ಬ್ಯಾಂಕ್ ಖಾತೆ, ಕ್ರೆಡಿಟ್ ಕಾರ್ಡ್ ವಿವರಗಳನ್ನು ಪಡೆದಿರುತ್ತಾರೆ. ಆದರೆ, ನೀವು ಒಟಿಪಿ ಹಂಚಿಕೊಂಡರೆ ಮಾತ್ರ ಅವರಿಗೆ ವಹಿವಾಟು ನಡೆಸಲು ಮತ್ತು ನಿಮ್ಮ ಖಾತೆಯಿಂದ ಹಣ ಎಗರಿಸಲು ಸಾಧ್ಯವಾಗುತ್ತದೆ ಎಂಬುದು ನೆನಪಿರಲಿ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು