AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays: ಈ ನಗರಗಳಲ್ಲಿ ಈ ವಾರ 5 ದಿನಗಳ ಕಾಲ ಬ್ಯಾಂಕ್​ಗಳಿಗೆ ರಜಾ

ಈ ನಗರಗಳಲ್ಲಿ ಈ ವಾರ 5 ದಿನಗಳ ಕಾಲ ಬ್ಯಾಂಕ್​ಗಳಿಗೆ ರಜಾ ಇರುತ್ತದೆ. ಯಾವುವು ಆ ನಗರಗಳು ಮತ್ತು ಯಾವ ಕಾರಣಕ್ಕೆ ರಜಾ ಎಂಬ ವಿವರ ಇಲ್ಲಿದೆ.

Bank Holidays: ಈ ನಗರಗಳಲ್ಲಿ ಈ ವಾರ 5 ದಿನಗಳ ಕಾಲ ಬ್ಯಾಂಕ್​ಗಳಿಗೆ ರಜಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 06, 2021 | 2:21 PM

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (RBI) ಬ್ಯಾಂಕ್ ರಜಾ ಕ್ಯಾಲೆಂಡರ್ ಪ್ರಕಾರ, ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 12 ರಜಾ ದಿನಗಳಿವೆ. ಅದರಲ್ಲೂ ಈ ವಾರವೇ ವಿವಿಧ ಹಬ್ಬಗಳಿಗೂ ಸೇರಿ 5 ದಿನ ರಜಾ ಇರುತ್ತದೆ ಎಂಬುದನ್ನು ಬ್ಯಾಂಕ್ ಗ್ರಾಹಕರು ತಿಳಿದಿರಬೇಕು. ಇವುಗಳಲ್ಲಿ ಎರಡನೇ ಶನಿವಾರ ಮತ್ತು ಭಾನುವಾರವೂ ಸೇರಿವೆ. ಕೆಲವು ನಗರಗಳಲ್ಲಿ ಬ್ಯಾಂಕ್​ಗಳು ಸತತವಾಗಿ ಐದು ದಿನಗಳವರೆಗೆ ಮುಚ್ಚಿರುತ್ತವೆ. ಆದ್ದರಿಂದ ನೀವು ಯಾವುದೇ ನಗರಗಳಲ್ಲಿ ವಾಸಿಸುತ್ತಿದ್ದರೂ ಬ್ಯಾಂಕ್ ಶಾಖೆಗೆ ಭೇಟಿ ನೀಡಲು ಬಯಸಿದರೆ ದಯವಿಟ್ಟು ಎಲ್ಲ ರಜಾ ದಿನಗಳನ್ನು ಗಮನಿಸಿ ಮತ್ತು ಅದಕ್ಕೆ ತಕ್ಕಂತೆ ನಿಮ್ಮ ಬ್ಯಾಂಕಿಂಗ್ ವಹಿವಾಟನ್ನು ಮಾಡಿ.

8 ಸೆಪ್ಟೆಂಬರ್ 2021- ಶ್ರೀಮಂತ ಸಂಕರದೇವರ ತಿಥಿ: ಗುವಾಹತಿಯಲ್ಲಿ ಬ್ಯಾಂಕ್ ಅನ್ನು ಮುಚ್ಚಲಾಗುವುದು. 9 ಸೆಪ್ಟೆಂಬರ್ 2021 – ತೀಜ್ (ಹರಿತಾಳಿಕ): ಗ್ಯಾಂಗ್ಟಕ್‌ನಲ್ಲಿ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 10 ರಂದು ಕ್ರಮವಾಗಿ ತೀಜ್ (ಹರಿತಾಳಿಕಾ) ಮತ್ತು ಇಂದ್ರಜಾತ್ರಾದಲ್ಲಿ ಬ್ಯಾಂಕ್‌ಗಳನ್ನು ಮುಚ್ಚಲಾಗುವುದು. 10 ಸೆಪ್ಟೆಂಬರ್ 2021- ಈ ತಿಂಗಳ ಪ್ರಮುಖ ರಜಾದಿನವೆಂದರೆ ಗಣೇಶ ಚತುರ್ಥಿ (ಸೆಪ್ಟೆಂಬರ್ 10). ಈ ದಿನ ಅಹಮದಾಬಾದ್, ಬೇಲಾಪುರ, ಬೆಂಗಳೂರು, ಭುವನೇಶ್ವರ, ಚೆನ್ನೈ, ಹೈದರಾಬಾದ್, ಮುಂಬೈ, ನಾಗ್ಪುರ ಮತ್ತು ಪಣಜಿಯಲ್ಲಿ ಬ್ಯಾಂಕ್​ಗಳು ಕಾರ್ಯ ನಿರ್ವಹಿಸಲ್ಲ. 11 ಸೆಪ್ಟೆಂಬರ್ 2021- ಗಣೇಶ್ ಚತುರ್ಥಿ (2ನೇ ದಿನ) (ಎರಡನೇ ಶನಿವಾರ): ಗಣೇಶ ಚತುರ್ಥಿಯ ಎರಡನೇ ದಿನವಾದ ಶನಿವಾರದಂದು ಬ್ಯಾಂಕ್​ಗಳು ಮುಚ್ಚಿರುತ್ತವೆ. 12 ಸೆಪ್ಟೆಂಬರ್ 2021- ಭಾನುವಾರ ರಜೆ

ಎಲ್ಲ ಬ್ಯಾಂಕ್​ಗಳು ಸಾರ್ವಜನಿಕ ರಜಾ ದಿನಗಳಲ್ಲಿ ಮುಚ್ಚಿರುತ್ತವೆ ಮತ್ತು ಕೆಲವು ರಜಾ ದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಆದರೆ ಬ್ಯಾಂಕ್​ಗಳು ರಜಾ ಇದ್ದರೂ ಎಟಿಎಂಗಳು, ಇಂಟರ್​ನೆಟ್ ಬ್ಯಾಂಕಿಂಗ್ ಮತ್ತಿತರ ಡಿಜಿಟಲ್ ವ್ಯವಹಾರಗಳು ನಡೆಯುವುದಕ್ಕೆ ಏನೂ ಸಮಸ್ಯೆ ಆಗಲ್ಲ.

ಇದನ್ನೂ ಓದಿ: Bank Holidays: ನಿಮ್ಮ ವ್ಯವಹಾರ ಮಾಡುವಾಗ ಈ ದಿನಗಳನ್ನು ಗಮನಿಸಿ; ಸೆಪ್ಟೆಂಬರ್​ ತಿಂಗಳಲ್ಲಿ 12 ದಿನ ಬ್ಯಾಂಕ್ ರಜಾ

(Banking Holidays Banks In These Cities Will Shut For 5 Days This Week)

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ