AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ಕೊಡುತ್ತಾ ಆರ್​ಬಿಐ?; ಸ್ಟಡಿ ಲೋನ್ ನಿಯಮವೊಂದರ ಬದಲಾವಣೆಗೆ ಬ್ಯಾಂಕುಗಳ ಪ್ರಸ್ತಾಪಕ್ಕೆ ಸಮ್ಮತಿ ಸಿಗುತ್ತಾ?

Study Loan topup: ಪಾವತಿಯಾಗದ ವಿದ್ಯಾರ್ಥಿಗಳ ಮೊದಲ ಶಿಕ್ಷಣ ಸಾಲವನ್ನು ‘ಸ್ಟ್ಯಾಂಡರ್ಡ್’ ಎಂದು ಮರುವಿಂಗಡಣೆ ಮಾಡಬೇಕು, ಮತ್ತು ಮರುಪಾವತಿ ಅವಧಿಯನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಬ್ಯಾಂಕುಗಳ ನಿಯೋಗವೊಂದು ಸೆಪ್ಟೆಂಬರ್ ತಿಂಗಳಲ್ಲಿ ಆರ್​ಬಿಐ ಬಳಿ ಮನವಿ ಮಾಡಿತ್ತು. ಇದಕ್ಕೆ ಸಮ್ಮತಿ ಸಿಕ್ಕಲ್ಲಿ, ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಟಾಪ್ ಅಪ್ ಲೋನ್​ ಪಡೆಯುವುದು, ಅಥವಾ ಅದೇ ಬಡ್ಡಿದರಲ್ಲಿ ಹೊಸ ಸಾಲ ಪಡೆಯುವುದು ಸುಲಭವಾಗುತ್ತದೆ.

ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ಕೊಡುತ್ತಾ ಆರ್​ಬಿಐ?; ಸ್ಟಡಿ ಲೋನ್ ನಿಯಮವೊಂದರ ಬದಲಾವಣೆಗೆ ಬ್ಯಾಂಕುಗಳ ಪ್ರಸ್ತಾಪಕ್ಕೆ ಸಮ್ಮತಿ ಸಿಗುತ್ತಾ?
ಶಿಕ್ಷಣ ಸಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 03, 2023 | 1:11 PM

Share

ನವದೆಹಲಿ, ಅಕ್ಟೋಬರ್ 3: ಈಗಾಗಲೇ ಶಿಕ್ಷಣ ಸಾಲ ಪಡೆದ ವಿದ್ಯಾರ್ಥಿಗಳು ಅದೇ ದರದಲ್ಲಿ ಹೆಚ್ಚುವರಿ ಸಾಲ ಪಡೆಯಲು (loan topups) ಅನುವಾಗುವ ರೀತಿಯಲ್ಲಿ ನಿಯಮ ಬದಲಾವಣೆ ಮಾಡಲು ಆರ್​ಬಿಐ ಮುಂದೆ ಪ್ರಸ್ತಾಪವೊಂದು ಇದೆ. ವಿದ್ಯಾರ್ಥಿಗಳಿಗೆ ತುಸು ನಿರಾಳತೆ ತರುವ ಈ ಪ್ರಸ್ತಾಪವನ್ನು ಬ್ಯಾಂಕುಗಳು ಆರ್​ಬಿಐ ಮುಂದಿಟ್ಟಿವೆ. ಇನ್ನೂ ಪಾವತಿಯಾಗದ ವಿದ್ಯಾರ್ಥಿಗಳ ಮೊದಲ ಶಿಕ್ಷಣ ಸಾಲವನ್ನು ‘ಸ್ಟ್ಯಾಂಡರ್ಡ್’ ಎಂದು ಮರುವಿಂಗಡಣೆ (reclassify) ಮಾಡಬೇಕು, ಮತ್ತು ಮರುಪಾವತಿ ಅವಧಿಯನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಬ್ಯಾಂಕುಗಳ ನಿಯೋಗವೊಂದು ಸೆಪ್ಟೆಂಬರ್ ತಿಂಗಳಲ್ಲಿ ಆರ್​ಬಿಐ ಬಳಿ ಮನವಿ ಮಾಡಿತ್ತು. ಅಕ್ಟೋಬರ್ 4ರಿಂದ ನಡೆಯುವ ಆರ್​ಬಿಐನ ಎಂಪಿಸಿ ಸಭೆಯಲ್ಲಿ ಈ ಬಗ್ಗೆ ನಿಷ್ಕರ್ಷೆಯಾಗುವ ಸಾಧ್ಯತೆ ಇದ್ದು, ಶುಕ್ರವಾರ ನಿರ್ಧಾರ ಪ್ರಕಟವಾಗಬಹುದು.

ಶಿಕ್ಷಣ ಸಾಲದಲ್ಲಿ ಈಗ ಹೇಗಿದೆ ನಿಯಮ?

ಶಿಕ್ಷಣ ವೆಚ್ಚಕ್ಕಾಗಿ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ. ವಿದ್ಯಾಭ್ಯಾಸ ಮುಗಿದು ಕೆಲ ತಿಂಗಳವರೆಗೂ ಅಥವಾ ಉದ್ಯೋಗ ಸಿಗುವವರೆಗೂ ಸಾಲ ಮರುಪಾವತಿಗೆ ವಿನಾಯಿತಿ (loan moratorium) ಇರುತ್ತದೆ. ಅದಾದ ಬಳಿಕ ಕಂತುಗಳನ್ನು ಕಟ್ಟುತ್ತಾ ಹೋಗಬೇಕಾಗುತ್ತದೆ.

ಒಂದು ವೇಳೆ ಸಾಲದ ಕಂತು ಕಟ್ಟಲು ತೊಡಗಿದ ಬಳಿಕ ಆ ಶಿಕ್ಷಣ ಸಾಲವನ್ನು ‘ಮರುರಚಿತ’ (restructured loan) ಎಂದು ವರ್ಗೀಕರಿಸಲಾಗುತ್ತದೆ. ಹೀಗಾದ ಬಳಿಕ ವಿದ್ಯಾರ್ಥಿಗಳು ಹೊಸ ಶಿಕ್ಷಣ ಸಾಲ ಪಡೆಯಲು ಬರುವುದಿಲ್ಲ. ಸಾಲ ಪಡೆದರೂ ಬಡ್ಡಿದರ ಹೆಚ್ಚಿರುತ್ತದೆ.

ಇದನ್ನೂ ಓದಿ: RBI MPC Meet October 2023: ಅಕ್ಟೋಬರ್ 4ರಿಂದ ಮೂರು ದಿನ ಆರ್​ಬಿಐ ಎಂಪಿಸಿ ಸಭೆ; ಬಡ್ಡಿದರ ನಿರ್ಧಾರ ಶುಕ್ರವಾರ ಪ್ರಕಟ

ಬ್ಯಾಂಕ್​ಗಳು ಮಾಡಿರುವ ಪ್ರಸ್ತಾವದಿಂದ ಏನು ಲಾಭ?

ವಿದ್ಯಾರ್ಥಿಗಳ ಸಾಲವನ್ನು ರೀಸ್ಟ್ರಕ್ಚರ್ಡ್ ಬದಲು ಸ್ಟ್ಯಾಂಡರ್ಡ್ ಎಂದು ವರ್ಗೀಕರಿಸಿದಾಗ ಅವರು ಹೆಚ್ಚುವರಿ ಸಾಲ ಪಡೆಯಲು ಅವಕಾಶ ಸಿಗುತ್ತದೆ. ಅದೇ ಕಡಿಮೆ ಬಡ್ಡಿದರಲ್ಲಿ ಲೋನ್ ಟಾಪ್ ಅಪ್ ಪಡೆಯಬಹುದು.

ಪದವಿ ಮುಗಿಸಿ, ಕೆಲಸಕ್ಕೆ ಸೇರಿಕೊಂಡು ಬಳಿಕ ಉನ್ನತ ವ್ಯಾಸಂಗ ಮಾಡಲು ನಿರ್ಧರಿಸುವ ಮಂದಿಗೆ ಈ ನಿಯಮ ಅನುಕೂಲ ಮಾಡಿಕೊಡುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ