AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banks & Dravid: ಬ್ಯಾಂಕುಗಳು ರಾಹುಲ್ ದ್ರಾವಿಡ್​ರಂತೆ ಆಡಬೇಕು: ಆರ್​ಬಿಐ ಗವರ್ನರ್ ಕರೆ; ಕ್ರಿಕೆಟಿಗನಿಗೂ ಬ್ಯಾಂಕಿಗೂ ಏನು ಸಂಬಂಧ?

RBI Governor Shaktikanta Das Speaks: ಭಾರತದ ಹಣಕಾಸು ವಲಯದ ಎಲ್ಲರೂ ಕೂಡ ರಾಹುಲ್ ದ್ರಾವಿಡ್ ಅವರಂತೆ ಆಡಬೇಕು ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಕರೆ ನೀಡಿದ್ದಾರೆ. ಬ್ಯಾಂಕುಗಳು ಕೇವಲ ಕಾರ್ಪೊರೇಟ್ ಲೋನ್ ಮತ್ತು ಅನ್​ಸೆಕ್ಯೂರ್ಡ್ ಲೋನ್ ಮೇಲೆ ಅವಲಂಬಿತವಾಗಿರುವುದು ಅಪಾಯಕಾರಿ ಎಂದಿದ್ದಾರೆ. ಮುಂಬೈನಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಇತ್ತೀಚೆಗೆ ಆಯೋಜಿಸಿದ್ದ ಬಿಎಫ್​ಎಸ್​ಐ ಸಮಿಟ್​ನಲ್ಲಿ ಶಕ್ತಿಕಾಂತ ದಾಸ್ ಮಾತನಾಡುತ್ತಿದ್ದರು.

Banks & Dravid: ಬ್ಯಾಂಕುಗಳು ರಾಹುಲ್ ದ್ರಾವಿಡ್​ರಂತೆ ಆಡಬೇಕು: ಆರ್​ಬಿಐ ಗವರ್ನರ್ ಕರೆ; ಕ್ರಿಕೆಟಿಗನಿಗೂ ಬ್ಯಾಂಕಿಗೂ ಏನು ಸಂಬಂಧ?
ಶಕ್ತಿಕಾಂತ ದಾಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2024 | 2:17 PM

Share

ಮುಂಬೈ, ಜನವರಿ 21: ರಾಹುಲ್ ದ್ರಾವಿಡ್ (Rahul Dravid) ಹೆಸರನ್ನು ಕ್ರಿಕೆಟ್ ಪ್ರೇಮಿಗಳಲ್ಲದವರೂ ಕೇಳಿದ್ದೇ ಇರುತ್ತಾರೆ. ಭಾರತ ಕಂಡ ಅತ್ಯುತ್ತಮ ಕ್ರಿಕೆಟಿಗರಲ್ಲಿ ಅವರೂ ಒಬ್ಬರು. ದಿ ವಾಲ್, ಮಿಸ್ಟರ್ ಡಿಪೆಂಡಬಲ್ ಇತ್ಯಾದಿ ಬಿರುದಾಂಕಿತ ಬ್ಯಾಟರ್ ಅವರು. ಇನ್ನಿಂಗ್ಸ್ ಕಟ್ಟುವುದರಲ್ಲಿ ನಿಸ್ಸೀಮ. ರಕ್ಷಣಾತ್ಮಕವಾಗಿ ಆಡಿ ಎದುರಾಳಿ ಬೌಲರ್​ಗಳನ್ನು ನಿಸ್ತೇಜಗೊಳಿಸಬಲ್ಲ ಚಾಣಾಕ್ಷ್ಯ ಆಟಗಾರ. ಆಟದ ಮೈದಾನದಲ್ಲಿ, ಅದರಲ್ಲೂ ಬ್ಯಾಟಿಂಗ್ ಮಾಡುವಾಗ ಅವರದ್ದು ಅತಿ ವಿರಳದ ಏಕಾಗ್ರತೆ. ಎಂಥ ಒತ್ತಡದಲ್ಲೂ ಸಂಯಮ ಕಳೆದುಕೊಳ್ಳುವುದಿಲ್ಲ, ಉದ್ವೇಗಗೊಳ್ಳುವುದಿಲ್ಲ. ಬಿಸಿನೆಸ್ ಸುದ್ದಿಯಲ್ಲಿ ರಾಹುಲ್ ದ್ರಾವಿಡ್ ಗುಣಗಾನ ಯಾಕೆ ಎಂದು ಕೇಳಬಹುದು. ಅದಕ್ಕೆ ಕಾರಣ, ಇತ್ತೀಚೆಗೆ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ (RBI Governor Shaktikanta Das) ಅವರು ಬ್ಯಾಂಕುಗಳಿಗೆ ರಾಹುಲ್ ದ್ರಾವಿಡ್​ರ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದರು. ಬ್ಯಾಂಕ್ ಮಾತ್ರವಲ್ಲ, ಎನ್​ಬಿಎಫ್​ಸಿ ಮತ್ತಿತರ ಹಣಕ್ಷೇತ್ರದ ಸರ್ವರಿಗೂ ಅನ್ವಯಿಸಿ ಅವರು ಸಲಹೆ ನೀಡಿದ್ದಾರೆ.

ಮುಂಬೈನಲ್ಲಿ ಕೆಲ ದಿನಗಳ ಹಿಂದೆ ನಡೆದ ಬಿಸಿನೆಸ್ ಸ್ಟ್ಯಾಂಡರ್ಡ್​ನ ಬಿಎಫ್​ಎಸ್​ಐ ಸಮಿಟ್​ನಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಾತನಾಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಬ್ಯಾಂಕುಗಳು ರಾಹುಲ್ ದ್ರಾವಿಡ್ ಬ್ಯಾಟಿಂಗ್​ನಂತೆ ದೀರ್ಘಾವಧಿ ಆಡಬೇಕು ಎಂದಿದ್ದಾರೆ. ಅಂದಹಾಗೆ ಶಕ್ತಿಕಾಂತ ದಾಸ್ ಕ್ರಿಕೆಟ್ ಅಭಿಮಾನಿಯಾಗಿದ್ದು, ಸಾಮಾನ್ಯವಾಗಿ ತಮ್ಮ ಭಾಷಣದ ವೇಳೆ ಕ್ರಿಕೆಟ್​ನ ನಿದರ್ಶನ ನೀಡುತ್ತಿರುತ್ತಿರುವುದುಂಟು.

ಇದನ್ನೂ ಓದಿ: Great Return: ಒಂದು ಲಕ್ಷ ಹಣ ಆರು ತಿಂಗಳಲ್ಲಿ 12 ಲಕ್ಷ ರೂ; ಇದು ಈ ಮಲ್ಟಿಬ್ಯಾಗರ್ ಮ್ಯಾಜಿಕ್

ಸಾಲದ ಮಿಶ್ರಣ ಸಮರ್ಪಕವಾಗಿರಬೇಕು

ಬ್ಯಾಂಕುಗಳು ಕೇವಲ ಕಾರ್ಪೊರೇಟ್ ಲೋನ್ ಮತ್ತು ಅನ್​ಸೆಕ್ಯೂರ್ಡ್ ಲೋನ್​ಗಳ ಮೇಲೆಯೇ ಹೆಚ್ಚು ಅವಲಂಬಿತವಾಗಿವೆ. ಈ ಪರಿಸ್ಥಿತಿ ಅಪಾಯಕಾರಿಯಾಗಿರುತ್ತದೆ. ಇದು ನಿಯಂತ್ರಣವಾಗಬೇಕು. ಗೃಹಸಾಲ, ವಾಹನ ಸಾಲ ಇತ್ಯಾದಿ ಎಲ್ಲಾ ರೀತಿಯ ಲೋನ್ ಪ್ರಾಡಕ್ಟ್​ಗಳ ಮಿಶ್ರಣವನ್ನು ಬ್ಯಾಂಕುಗಳು ಹೊಂದಿರಬೇಕು ಎಂದು ಆರ್​ಬಿಐ ಗವರ್ನರ್ ಸಲಹೆ ನೀಡಿದ್ದಾರೆ.

ಸರ್ಕಾರಿ ಬ್ಯಾಂಕುಗಳಲ್ಲಿನ ಉದ್ಯೋಗಿಗಳು, ಅದರಲ್ಲೂ ಉನ್ನತ ಹಂತದ ಅಧಿಕಾರಿಗಳ ಸಂಬಳ ಕಡಿಮೆ ಇದೆ. ಆರ್​ಬಿಐ ಒಂದು ನಿಯಮ ಹಾಕಬೇಕು ಎನ್ನುವ ಕೂಗನ್ನು ಆರ್​ಬಿಐ ಗವರ್ನರ್ ಇದೇ ವೇಳೆ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: Inspiring: ರೋಲೆಕ್ಸ್ ವಾಚ್ ಗೊತ್ತೆ? ಇದನ್ನು ಸ್ಥಾಪಿಸಿದವ ಕಡುಬಡವ, ನಿರ್ಗತಿಕ; ಇದು ವ್ಯವಹಾರ ಜಗತ್ತಿನ ಕೌತುಕ

ಪಬ್ಲಿಸ್ ಸೆಕ್ಟರ್ ಬ್ಯಾಂಕ್​ನ ಉದ್ಯೋಗಿಯ ಸಂಬಳವನ್ನು ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಮಧ್ಯಸ್ಥಿಕೆಯಿಂದ ತೀರ್ಮಾನಿತವಾಗುತ್ತದೆ. ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್​ಗಳ ವೇತನಕ್ಕೆ ಸರ್ಕಾರದ ನಿಯಮ ಅನ್ವಯ ಆಗುತ್ತದೆ. ಇದರಲ್ಲಿ ಆರ್​ಬಿಐನ ಪಾತ್ರವೇನೂ ಇರುವುದಿಲ್ಲ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ