Banks & Dravid: ಬ್ಯಾಂಕುಗಳು ರಾಹುಲ್ ದ್ರಾವಿಡ್​ರಂತೆ ಆಡಬೇಕು: ಆರ್​ಬಿಐ ಗವರ್ನರ್ ಕರೆ; ಕ್ರಿಕೆಟಿಗನಿಗೂ ಬ್ಯಾಂಕಿಗೂ ಏನು ಸಂಬಂಧ?

RBI Governor Shaktikanta Das Speaks: ಭಾರತದ ಹಣಕಾಸು ವಲಯದ ಎಲ್ಲರೂ ಕೂಡ ರಾಹುಲ್ ದ್ರಾವಿಡ್ ಅವರಂತೆ ಆಡಬೇಕು ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಕರೆ ನೀಡಿದ್ದಾರೆ. ಬ್ಯಾಂಕುಗಳು ಕೇವಲ ಕಾರ್ಪೊರೇಟ್ ಲೋನ್ ಮತ್ತು ಅನ್​ಸೆಕ್ಯೂರ್ಡ್ ಲೋನ್ ಮೇಲೆ ಅವಲಂಬಿತವಾಗಿರುವುದು ಅಪಾಯಕಾರಿ ಎಂದಿದ್ದಾರೆ. ಮುಂಬೈನಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ಇತ್ತೀಚೆಗೆ ಆಯೋಜಿಸಿದ್ದ ಬಿಎಫ್​ಎಸ್​ಐ ಸಮಿಟ್​ನಲ್ಲಿ ಶಕ್ತಿಕಾಂತ ದಾಸ್ ಮಾತನಾಡುತ್ತಿದ್ದರು.

Banks & Dravid: ಬ್ಯಾಂಕುಗಳು ರಾಹುಲ್ ದ್ರಾವಿಡ್​ರಂತೆ ಆಡಬೇಕು: ಆರ್​ಬಿಐ ಗವರ್ನರ್ ಕರೆ; ಕ್ರಿಕೆಟಿಗನಿಗೂ ಬ್ಯಾಂಕಿಗೂ ಏನು ಸಂಬಂಧ?
ಶಕ್ತಿಕಾಂತ ದಾಸ್
Follow us
|

Updated on: Jan 21, 2024 | 2:17 PM

ಮುಂಬೈ, ಜನವರಿ 21: ರಾಹುಲ್ ದ್ರಾವಿಡ್ (Rahul Dravid) ಹೆಸರನ್ನು ಕ್ರಿಕೆಟ್ ಪ್ರೇಮಿಗಳಲ್ಲದವರೂ ಕೇಳಿದ್ದೇ ಇರುತ್ತಾರೆ. ಭಾರತ ಕಂಡ ಅತ್ಯುತ್ತಮ ಕ್ರಿಕೆಟಿಗರಲ್ಲಿ ಅವರೂ ಒಬ್ಬರು. ದಿ ವಾಲ್, ಮಿಸ್ಟರ್ ಡಿಪೆಂಡಬಲ್ ಇತ್ಯಾದಿ ಬಿರುದಾಂಕಿತ ಬ್ಯಾಟರ್ ಅವರು. ಇನ್ನಿಂಗ್ಸ್ ಕಟ್ಟುವುದರಲ್ಲಿ ನಿಸ್ಸೀಮ. ರಕ್ಷಣಾತ್ಮಕವಾಗಿ ಆಡಿ ಎದುರಾಳಿ ಬೌಲರ್​ಗಳನ್ನು ನಿಸ್ತೇಜಗೊಳಿಸಬಲ್ಲ ಚಾಣಾಕ್ಷ್ಯ ಆಟಗಾರ. ಆಟದ ಮೈದಾನದಲ್ಲಿ, ಅದರಲ್ಲೂ ಬ್ಯಾಟಿಂಗ್ ಮಾಡುವಾಗ ಅವರದ್ದು ಅತಿ ವಿರಳದ ಏಕಾಗ್ರತೆ. ಎಂಥ ಒತ್ತಡದಲ್ಲೂ ಸಂಯಮ ಕಳೆದುಕೊಳ್ಳುವುದಿಲ್ಲ, ಉದ್ವೇಗಗೊಳ್ಳುವುದಿಲ್ಲ. ಬಿಸಿನೆಸ್ ಸುದ್ದಿಯಲ್ಲಿ ರಾಹುಲ್ ದ್ರಾವಿಡ್ ಗುಣಗಾನ ಯಾಕೆ ಎಂದು ಕೇಳಬಹುದು. ಅದಕ್ಕೆ ಕಾರಣ, ಇತ್ತೀಚೆಗೆ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ (RBI Governor Shaktikanta Das) ಅವರು ಬ್ಯಾಂಕುಗಳಿಗೆ ರಾಹುಲ್ ದ್ರಾವಿಡ್​ರ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದ್ದರು. ಬ್ಯಾಂಕ್ ಮಾತ್ರವಲ್ಲ, ಎನ್​ಬಿಎಫ್​ಸಿ ಮತ್ತಿತರ ಹಣಕ್ಷೇತ್ರದ ಸರ್ವರಿಗೂ ಅನ್ವಯಿಸಿ ಅವರು ಸಲಹೆ ನೀಡಿದ್ದಾರೆ.

ಮುಂಬೈನಲ್ಲಿ ಕೆಲ ದಿನಗಳ ಹಿಂದೆ ನಡೆದ ಬಿಸಿನೆಸ್ ಸ್ಟ್ಯಾಂಡರ್ಡ್​ನ ಬಿಎಫ್​ಎಸ್​ಐ ಸಮಿಟ್​ನಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಾತನಾಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಬ್ಯಾಂಕುಗಳು ರಾಹುಲ್ ದ್ರಾವಿಡ್ ಬ್ಯಾಟಿಂಗ್​ನಂತೆ ದೀರ್ಘಾವಧಿ ಆಡಬೇಕು ಎಂದಿದ್ದಾರೆ. ಅಂದಹಾಗೆ ಶಕ್ತಿಕಾಂತ ದಾಸ್ ಕ್ರಿಕೆಟ್ ಅಭಿಮಾನಿಯಾಗಿದ್ದು, ಸಾಮಾನ್ಯವಾಗಿ ತಮ್ಮ ಭಾಷಣದ ವೇಳೆ ಕ್ರಿಕೆಟ್​ನ ನಿದರ್ಶನ ನೀಡುತ್ತಿರುತ್ತಿರುವುದುಂಟು.

ಇದನ್ನೂ ಓದಿ: Great Return: ಒಂದು ಲಕ್ಷ ಹಣ ಆರು ತಿಂಗಳಲ್ಲಿ 12 ಲಕ್ಷ ರೂ; ಇದು ಈ ಮಲ್ಟಿಬ್ಯಾಗರ್ ಮ್ಯಾಜಿಕ್

ಸಾಲದ ಮಿಶ್ರಣ ಸಮರ್ಪಕವಾಗಿರಬೇಕು

ಬ್ಯಾಂಕುಗಳು ಕೇವಲ ಕಾರ್ಪೊರೇಟ್ ಲೋನ್ ಮತ್ತು ಅನ್​ಸೆಕ್ಯೂರ್ಡ್ ಲೋನ್​ಗಳ ಮೇಲೆಯೇ ಹೆಚ್ಚು ಅವಲಂಬಿತವಾಗಿವೆ. ಈ ಪರಿಸ್ಥಿತಿ ಅಪಾಯಕಾರಿಯಾಗಿರುತ್ತದೆ. ಇದು ನಿಯಂತ್ರಣವಾಗಬೇಕು. ಗೃಹಸಾಲ, ವಾಹನ ಸಾಲ ಇತ್ಯಾದಿ ಎಲ್ಲಾ ರೀತಿಯ ಲೋನ್ ಪ್ರಾಡಕ್ಟ್​ಗಳ ಮಿಶ್ರಣವನ್ನು ಬ್ಯಾಂಕುಗಳು ಹೊಂದಿರಬೇಕು ಎಂದು ಆರ್​ಬಿಐ ಗವರ್ನರ್ ಸಲಹೆ ನೀಡಿದ್ದಾರೆ.

ಸರ್ಕಾರಿ ಬ್ಯಾಂಕುಗಳಲ್ಲಿನ ಉದ್ಯೋಗಿಗಳು, ಅದರಲ್ಲೂ ಉನ್ನತ ಹಂತದ ಅಧಿಕಾರಿಗಳ ಸಂಬಳ ಕಡಿಮೆ ಇದೆ. ಆರ್​ಬಿಐ ಒಂದು ನಿಯಮ ಹಾಕಬೇಕು ಎನ್ನುವ ಕೂಗನ್ನು ಆರ್​ಬಿಐ ಗವರ್ನರ್ ಇದೇ ವೇಳೆ ತಳ್ಳಿಹಾಕಿದ್ದಾರೆ.

ಇದನ್ನೂ ಓದಿ: Inspiring: ರೋಲೆಕ್ಸ್ ವಾಚ್ ಗೊತ್ತೆ? ಇದನ್ನು ಸ್ಥಾಪಿಸಿದವ ಕಡುಬಡವ, ನಿರ್ಗತಿಕ; ಇದು ವ್ಯವಹಾರ ಜಗತ್ತಿನ ಕೌತುಕ

ಪಬ್ಲಿಸ್ ಸೆಕ್ಟರ್ ಬ್ಯಾಂಕ್​ನ ಉದ್ಯೋಗಿಯ ಸಂಬಳವನ್ನು ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಮಧ್ಯಸ್ಥಿಕೆಯಿಂದ ತೀರ್ಮಾನಿತವಾಗುತ್ತದೆ. ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್​ಗಳ ವೇತನಕ್ಕೆ ಸರ್ಕಾರದ ನಿಯಮ ಅನ್ವಯ ಆಗುತ್ತದೆ. ಇದರಲ್ಲಿ ಆರ್​ಬಿಐನ ಪಾತ್ರವೇನೂ ಇರುವುದಿಲ್ಲ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ