Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ತಿಂಗಳು ಸತತ ನಾಲ್ಕು ದಿನ ಬ್ಯಾಂಕ್ ಬಂದ್; ಮಾರ್ಚ್ 24, 25ಕ್ಕೆ ರಾಷ್ಟ್ರವ್ಯಾಪಿ ಮುಷ್ಕರ; ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳೇನು?

Public sector banks may closed on March 24th and 25th: ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳ ಉದ್ಯೋಗಿಗಳು ಮಾರ್ಚ್ 24 ಮತ್ತು 25ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವ ಸಾಧ್ಯತೆ ಇದೆ. ಉದ್ಯೋಗಿಗಳ ಕೆಲ ಪ್ರಮುಖ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆಯು ಮುಷ್ಕರದ ನಿರ್ಧಾರ ಕೈಬಿಡದಿರಲು ನಿರ್ಧರಿಸಿದೆ. ಮಾರ್ಚ್ 22 ಮತ್ತು 23ರಂದು ನಾಲ್ಕನೇ ಶನಿವಾರ ಮತ್ತು ಭಾನುವಾರದ ಪ್ರಯುಕ್ತ ರಜೆ ಇದೆ. ಈಗ 24 ಮತ್ತು 25 ಕೂಡ ಸರ್ಕಾರಿ ಬ್ಯಾಂಕುಗಳು ಬಂದ್ ಆಗಬಹುದು.

ಈ ತಿಂಗಳು ಸತತ ನಾಲ್ಕು ದಿನ ಬ್ಯಾಂಕ್ ಬಂದ್; ಮಾರ್ಚ್ 24, 25ಕ್ಕೆ ರಾಷ್ಟ್ರವ್ಯಾಪಿ ಮುಷ್ಕರ; ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳೇನು?
ಬ್ಯಾಂಕು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 17, 2025 | 4:34 PM

ನವದೆಹಲಿ, ಮಾರ್ಚ್ 17: ಮುಂದಿನ ವಾರ ಎರಡು ದಿನ ಸರ್ಕಾರಿ ಬ್ಯಾಂಕ್ ಉದ್ಯೋಗಿಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ. ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಮಾರ್ಚ್ 24 ಮತ್ತು 25ರಂದು ಮುಷ್ಕರ ನಡೆಯುವ ಸಾಧ್ಯತೆ ದಟ್ಟವಾಗಿದೆ. ಭಾರತೀಯ ಬ್ಯಾಂಕುಗಳ ಸಂಘಟನೆಯಾದ ಐಬಿಎ ಜೊತೆ ನಡೆದ ಮಾತುಕತೆಯಲ್ಲಿ ಯಾವುದೇ ಭರವಸೆ ಮೂಡದ ಹಿನ್ನೆಲೆಯಲ್ಲಿ ಬ್ಯಾಂಕ್ ಯೂನಿಯನ್​​ಗಳ ಸಂಯುಕ್ತ ವೇದಿಕೆಯು (UFBU- United Forum for Bank Unions) ರಾಷ್ಟ್ರವ್ಯಾಪಿ ಮುಷ್ಕರದ ನಿರ್ಧಾರವನ್ನು ಬದಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಎಸ್​​ಬಿಐ, ಕರ್ಣಾಟಕ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಇತ್ಯಾದಿ ಸರ್ಕಾರಿ ಬ್ಯಾಂಕುಗಳ ಉದ್ಯೋಗಿಗಳು ಮಾತ್ರವೇ ಮುಷ್ಕರದಲ್ಲಿ ಭಾಗಿಯಾಗಿರುತ್ತಾರೆ.

ಒಂಬತ್ತು ಸರ್ಕಾರಿ ಬ್ಯಾಂಕ್ ಕಾರ್ಮಿಕರ ಒಕ್ಕೂಟಗಳು ಸೇರಿ ರಚಿಸಲಾಗಿರುವ ಯುನೈಟೆಡ್ ಫೋರಂ ತಮ್ಮ ಮುಷ್ಕರದ ನಿರ್ಧಾರ ಹಿಂಪಡೆಯಲಾಗುವುದಿಲ್ಲ ಎಂದು ಮಾರ್ಚ್ 13ರಂದು ಹೇಳಿತ್ತು. ಐಬಿಎ ಜೊತೆ ಅದು ಎರಡು ದಿನ ಮಾತುಕತೆ ನಡೆಸಿತ್ತು. ಆದರೆ, ಬ್ಯಾಂಕ್ ಕಾರ್ಮಿಕರ ಪ್ರಮುಖ ಬೇಡಿಕೆಗಳಿಗೆ ಪರಿಹಾರ ಸಿಗುವ ಯಾವ ಭರವಸೆಯೂ ಮಾತುಕತೆಯಲ್ಲಿ ಬರಲಿಲ್ಲ ಎಂದು ಬ್ಯಾಂಕ್ ಯೂನಿಯನ್​​ಗಳ ಮಹಾ ಒಕ್ಕೂಟವು ಹೇಳಿದೆ.

ಇದನ್ನೂ ಓದಿ: ಫೆಬ್ರುವರಿಯಲ್ಲಿ ಹೋಲ್​ಸೇಲ್ ಹಣದುಬ್ಬರ ಶೇ. 2.38; ಜನವರಿಗೆ ಹೋಲಿಸಿದರೆ ಅಲ್ಪ ಹೆಚ್ಚಳ

ಇದನ್ನೂ ಓದಿ
Image
ಏಪ್ರಿಲ್ 1ರಿಂದ ಹೊಸ ಟಿಡಿಎಸ್ ನಿಯಮಗಳು ಜಾರಿಗೆ
Image
ಆ್ಯಪಲ್ ಏರ್​​ಪೋಡ್​​ಗಳು ಭಾರತದಿಂದ ಅಮೆರಿಕ, ಯೂರೋಪ್​ಗೆ ರಫ್ತು
Image
ಏಪ್ರಿಲ್​ನಲ್ಲೂ ಬಡ್ಡಿದರ ಕಟ್; 2025ರಲ್ಲಿ 4 ಬಾರಿ ಬಡ್ಡಿಕಡಿತ?
Image
ಬಡತನ ನಿವಾರಣೆಗೆ ಇನ್ಫೋಸಿಸ್ ಮೂರ್ತಿಗಳ ಸಲಹೆ ಇದು

ಬ್ಯಾಂಕುಗಳಿಗೆ ನಾಲ್ಕು ದಿನ ಸಾಲು ಸಾಲು ರಜೆ…

ಮಾರ್ಚ್ 22 ನಾಲ್ಕನೇ ಶನಿವಾರವಾಗಿದೆ. ಮಾರ್ಚ್ 23 ಭಾನುವಾರವಾಗಿದೆ. ಈ ಎರಡು ದಿನ ಬ್ಯಾಂಕುಗಳಿಗೆ ರೆಗ್ಯುಲರ್ ರಜೆ. ಈಗ ಮಾರ್ಚ್ 24 ಮತ್ತು 25ರಂದು ಉದ್ಯೋಗಿಗಳು ಮುಷ್ಕರ ನಡೆಸಲಿರುವುದರಿಂದ ಸರ್ಕಾರಿ ಬ್ಯಾಂಕುಗಳು ಬಂದ್ ಆಗಿರುತ್ತವೆ. ಹೀಗಾಗಿ, ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮುಗಿಸಿಕೊಳ್ಳುವುದು ಉತ್ತಮ. ಎಚ್​​ಡಿಎಫ್​​ಸಿ ಬ್ಯಾಂಕು, ಎಕ್ಸಿಸ್ ಬ್ಯಾಂಕು ಇತ್ಯಾದಿ ಖಾಸಗಿ ಬ್ಯಾಂಕುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿರುತ್ತವೆ.

ಬ್ಯಾಂಕ್ ಉದ್ಯೋಗಿಗಳ ಬೇಡಿಕೆಗಳೇನು?

  1. ವಾರದಲ್ಲಿ ಎರಡು ದಿನ ವೀಕಾಫ್ ಬೇಕು. ಐದು ವರ್ಕ್ ಡೇ ವೀಕ್ ನೀತಿ ಜಾರಿಗೆ ತರಬೇಕು.
  2. ಸರ್ಕಾರಿ ಬ್ಯಾಂಕುಗಳಲ್ಲಿ ವಿವಿಧ ಸ್ತರಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಬೇಕು.
  3. ಗ್ರಾಜುಟಿ ಹಣಕ್ಕೆ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 25 ಲಕ್ಷ ರೂಗೆ ಹೆಚ್ಚಿಸುವಂತೆ ಗ್ರಾಜುಟಿ ಕಾಯ್ದೆಗೆ ತಿದ್ದುಪಡಿ ತರಬೇಕು.
  4. ಉದ್ಯೋಗಿಗಳ ಪರ್ಫಾರ್ಮೆನ್ಸ್ ರಿವ್ಯೂ ಮತ್ತು ಕಾರ್ಯಕ್ಷಮತೆ ಆಧಾರಿತವಾಗಿ ಭತ್ಯೆ ನೀಡುವ ಕ್ರಮದಿಂದ ಉದ್ಯೋಗಿಯ ಕೆಲಸದ ಅಭದ್ರತೆ ಹೆಚ್ಚುತ್ತದೆ, ಉದ್ಯೋಗಿಗಳ ನಡುವಿನ ಸಂಬಂಧ ದುರ್ಬಲಗೊಳ್ಳುತ್ತದೆ. ಹೀಗಾಗಿ, ನಿರ್ದೇಶನಗಳನ್ನು ಹಿಂಪಡೆಯಬೇಕು.
  5. ಕೇಂದ್ರ ಹಣಕಾಸು ಸೇವೆಗಳ ಇಲಾಖೆಯು ಸರ್ಕಾರಿ ಬ್ಯಾಂಕುಗಳ ಸಣ್ಣ ಸಣ್ಣ ವ್ಯವಹಾರದಲ್ಲೂ ಮಧ್ಯಪ್ರವೇಶಿಸುವುದನ್ನು ನಿಲ್ಲಿಸಬೇಕು. ಬ್ಯಾಂಕ್ ಮಂಡಳಿಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಬೇಕು.

ಇದನ್ನೂ ಓದಿ: ಠೇವಣಿ, ಡಿವಿಡೆಂಡ್, ಬಾಡಿಗೆ ಇತ್ಯಾದಿ ಆದಾಯಗಳಿಗೆ ಹೊಸ ಟಿಡಿಎಸ್ ದರ; ಏಪ್ರಿಲ್ 1ರಿಂದ ಜಾರಿ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Mon, 17 March 25

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್