AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐ ಹೊಸ ವ್ಯವಸ್ಥೆ: ಚೆಕ್ ಡೆಪಾಸಿಟ್ ಆಗಲು 2 ದಿನ ಕಾಯಬೇಕಿಲ್ಲ; ಕೆಲವೇ ಗಂಟೆಯಲ್ಲಿ ಹಣ ಬರುತ್ತೆ

New mechanism for fast disposal of cheques: ನೀವು ಬ್ಯಾಂಕಿಗೆ ಚೆಕ್ ಪ್ರೆಸೆಂಟ್ ಮಾಡಿದಾಗ ಅದು ಕ್ಲಿಯರ್ ಆಗಲು ಒಂದು ಅಥವಾ ಎರಡು ದಿನ ಆಗುತ್ತದೆ. ಅಕ್ಟೋಬರ್ 4ರಿಂದ ಹೊಸ ವ್ಯವಸ್ಥೆ ಜಾರಿಗೆ ಬರುತ್ತಿದ್ದು, ಚೆಕ್ ಕೆಲವೇ ಗಂಟೆಗಳಲ್ಲಿ ಕ್ಲಿಯರೆನ್ಸ್ ಆಗುತ್ತದೆ. ಚೆಕ್ ಸಲ್ಲಿಸಿದ ತಕ್ಷಣ ಅದನ್ನು ಸ್ಕ್ಯಾನ್ ಮಾಡಿ ಕಳುಹಿಸಲಾಗುತ್ತದೆ. ಮೂರು ಗಂಟೆಯೊಳಗೆ ಚೆಕ್ ಪರಿಶೀಲನೆ ಆಗಿ ಅನುಮೋದನೆ ಆಗಬೇಕು. ಅಥವಾ ತಿರಸ್ಕೃತ ಆಗಬೇಕು.

ಆರ್​ಬಿಐ ಹೊಸ ವ್ಯವಸ್ಥೆ: ಚೆಕ್ ಡೆಪಾಸಿಟ್ ಆಗಲು 2 ದಿನ ಕಾಯಬೇಕಿಲ್ಲ; ಕೆಲವೇ ಗಂಟೆಯಲ್ಲಿ ಹಣ ಬರುತ್ತೆ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 14, 2025 | 3:29 PM

Share

ಮುಂಬೈ, ಆಗಸ್ಟ್ 14: ಬ್ಯಾಂಕುಗಳಲ್ಲಿ ನೀವು ಚೆಕ್ ಹಾಕಿದರೆ ಅದು ಪ್ರೋಸಸ್ (cheque clearance) ಆಗಿ ನಿಮ್ಮ ಅಕೌಂಟ್​​ಗೆ ಹಣ ಜಮೆ ಆಗಲು ಒಂದು ಅಥವಾ ಎರಡು ಕಾರ್ಯ ದಿನಗಳಾಗುತ್ತವೆ. ಈ ಅವಧಿಯನ್ನು ಕಡಿಮೆ ಮಾಡಲು ಆರ್​ಬಿಐ (RBI) ಹೊಸ ಕ್ರಮ ತೆಗೆದುಕೊಳ್ಳುತ್ತಿದೆ. ಅದಕ್ಕಾಗಿ ಹೊಸ ವ್ಯವಸ್ಥೆ ರೂಪಿಸಿದೆ. ಕೆಲವೇ ಗಂಟೆಗಳೊಳಗೆ ಚೆಕ್ ಕ್ಲಿಯರೆನ್ಸ್ ಆಗುವಂತಹ ವ್ಯವಸ್ಥೆ ಅಕ್ಟೋಬರ್ 4ರಿಂದ ಜಾರಿಗೆ ಬರಲಿದೆ.

ಸದ್ಯ ಇರುವ ವ್ಯವಸ್ಥೆಯಲ್ಲಿ ಚೆಕ್ ಕ್ಲಿಯರೆನ್ಸ್ ಸೈಕಲ್ ಟಿ+1 ದಿನವಾಗಿದೆ. ಚೆಕ್​ಗಳನ್ನು ಪ್ರೋಸಸ್ ಮಾಡಲು ಚೆಕ್ ಟ್ರುಂಕೇಶ್ ಸಿಸ್ಟಂ ಇದೆ. ಬ್ಯಾಚ್ ಪ್ರೋಸಸಿಂಗ್ ವಿಧಾನದಲ್ಲಿ ಚೆಕ್ ಕ್ಲಿಯರ್ ಆಗಲು ಎರಡು ಕಾರ್ಯದಿನಗಳು ಆಗುತ್ತವೆ.

ಹೊಸ ವ್ಯವಸ್ಥೆಯಲ್ಲಿ, ಚೆಕ್​ಗಳನ್ನು ಸ್ಕ್ಯಾನ್ ಮಾಡಿ ಕೆಲವೇ ಗಂಟೆಗಳಲ್ಲಿ ಪಾಸ್ ಮಾಡಲಾಗುತ್ತದೆ. ಈ ಪ್ರಕ್ರಿಯೆಯು ವರ್ಕಿಂಗ್ ದಿನಗಳಲ್ಲಿ ನಿರಂತರವಾಗಿ ಚಾಲೂ ಇರುತ್ತದೆ.

ಇದನ್ನೂ ಓದಿ: ಐಸಿಐಸಿಐ ಬ್ಯಾಂಕ್​ನಲ್ಲಿ ಮಿನಿಮಮ್ ಅಕೌಂಟ್ ಬ್ಯಾಲನ್ಸ್ 50,000 ರೂ ಅಲ್ಲ, 15,000 ರೂ

‘ಈಗಿರುವ ಚೆಕ್ ಟ್ರಂಕೇಶನ್ ಸಿಸ್ಟಂ (ಸಿಟಿಎಸ್) ನಿಂದ ಎರಡು ಹಂತದಲ್ಲಿ ನಿರಂತರ ಕ್ಲಿಯರಿಂಗ್ ಮತ್ತು ಸೆಟಲ್ಮೆಂಟ್ ಆನ್ ರಿಯಲೈಸೇಶನ್ ವ್ಯವಸ್ಥೆಗೆ ಬದಲಾಯಿಸಲು ನಿರ್ಧರಿಸಲಾಗಿದೆ. ಮೊದಲ ಹಂತವು 2025ರ ಅಕ್ಟೋಬರ್ 4ರಿಂದ ಜಾರಿಗೆ ಬರುತ್ತದೆ. ಎರಡನೇ ಹಂತವು 2026ರ ಜನವರಿ 3ರಿಂದ ಜಾರಿಗೆ ಬರುತ್ತದೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.

ಬ್ಯಾಂಕ್ ಬ್ರ್ಯಾಂಕ್​ಗೆ ಹೋಗಿ ನೀವು ಚೆಕ್ ಸಲ್ಲಿಸಿದಾಗ, ಕೂಡಲೇ ಅದನ್ನು ಸ್ಕ್ಯಾನ್ ಮಾಡಿ ಕ್ಲಿಯರಿಂಗ್ ಹೌಸ್​ಗೆ ಕಳುಹಿಸಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಸಿಂಗಲ್ ಪ್ರೆಸೆಂಟೇಶನ್ ಸೆಷನ್​ನಲ್ಲಿ ಈ ಪ್ರಕ್ರಿಯೆ ನಿರಂತರವಾಗಿರುತ್ತದೆ. ಪ್ರತಿಯೊಂದು ಚೆಕ್ ಅನ್ನು ಸಲ್ಲಿಸಿದಾಗ, ಆ ಚೆಕ್​ನ ಬ್ಯಾಂಕ್ ಸ್ಪಂದಿಸಬೇಕು. ಸ್ವೀಕೃತವೋ ಅಥವಾ ತಿರಸ್ಕೃತವೋ ಎಂಬುದನ್ನು ಮೂರು ಗಂಟೆಯೊಳಗೆ ಅದು ಖಚಿತಪಡಿಸಬೇಕು.

ಇದನ್ನೂ ಓದಿ: ತಿಂಗಳಿಗೆ 11,000 ಹೂಡಿಕೆ; 9 ಕೋಟಿ ರೂ ಮೊತ್ತಕ್ಕೆ ಎಷ್ಟು ವರ್ಷ ಬೇಕು?

ಏನೂ ಸ್ಪಂದಿಸದೇ ಇದ್ದರೆ ಚೆಕ್ ಊರ್ಜಿತ ಎಂದು ಪರಿಗಣಿಸಲಾಗುತ್ತದೆ. ಆಗ ಆ ಚೆಕ್ ಅನ್ನು ಕ್ಲಿಯರೆನ್ಸ್ ಮಾಡಲಾಗುತ್ತದೆ. ಇಲ್ಲಿ ಡ್ರಾಯೀ ಬ್ಯಾಂಕುಗಳಿಗೆ (ಚೆಕ್ ಇರುವ ಬ್ಯಾಂಕ್) ಜವಾಬ್ದಾರಿ ಹೆಚ್ಚಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?