AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBC: 40 ಕೋಟಿ ಆದಾಯ ಮುಚ್ಚಿಟ್ಟಿದ್ದು ಹೌದೆಂದು ತಪ್ಪೊಪ್ಪಿಕೊಂಡ ಬಿಬಿಸಿ; ಪರಿಷ್ಕೃತ ಐಟಿಆರ್ ಸಲ್ಲಿಸುವಂತೆ ಐಟಿ ಇಲಾಖೆ ಸೂಚನೆ

Tax Evasion Truth of BBC: ಬಿಬಿಸಿಯ ಭಾರತೀಯ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ ಘಟನೆ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎನ್ನುವ ಆರೋಪ ನಿರಾಧಾರ ಎಂಬುದಕ್ಕೆ ಸಾಕ್ಷಿಯಾಗಿ ಸ್ವತಃ ಬಿಬಿಸಿಯೇ ಇದೀಗ ತನ್ನಿಂದ ತೆರಿಗೆ ವಂಚನೆ ಆಗಿರುವುದಾಗಿ ತಪ್ಪೊಪ್ಪಿಕೊಂಡಿದೆ.

BBC: 40 ಕೋಟಿ ಆದಾಯ ಮುಚ್ಚಿಟ್ಟಿದ್ದು ಹೌದೆಂದು ತಪ್ಪೊಪ್ಪಿಕೊಂಡ ಬಿಬಿಸಿ; ಪರಿಷ್ಕೃತ ಐಟಿಆರ್ ಸಲ್ಲಿಸುವಂತೆ ಐಟಿ ಇಲಾಖೆ ಸೂಚನೆ
ಬಿಬಿಸಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 06, 2023 | 12:46 PM

ನವದೆಹಲಿ: ಬಿಬಿಸಿ ತಾನು 40 ಕೋಟಿ ರೂನಷ್ಟು ಆದಾಯವನ್ನು ಮುಚ್ಚಿಟ್ಟಿದ್ದು ಹೌದು ಎಂಬ ವಿಚಾರವನ್ನು ಒಪ್ಪಿಕೊಂಡಿದ್ದು ಈ ಬಗ್ಗೆ ಕೇಂದ್ರೀಯ ನೇರ ತೆರಿಗೆ ಮಂಡಳಿಗೆ (ಸಿಬಿಡಿಟಿ) ಇಮೇಲ್ ಮೂಲಕ ತಿಳಿಸಿದೆ. ಈ ಬಗ್ಗೆ ತಮಗೆ ಇಬ್ಬರು ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾಗಿ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಕೆಲ ತಿಂಗಳ ಹಿಂದೆ ಬಿಬಿಸಿಯ ಭಾರತೀಯ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ ಘಟನೆ ಹಿಂದೆ ರಾಜಕೀಯ ಷಡ್ಯಂತ್ರ ಇದೆ ಎನ್ನುವ ಆರೋಪ ನಿರಾಧಾರ ಎಂಬುದು ಈ ಬೆಳವಣಿಗೆಯಿಂದ ಸಾಬೀತಾಗಿದೆ. ಬಿಬಿಸಿ ವಿರುದ್ಧ ತೆರಿಗೆ ವಂಚನೆ ನಡೆದಿರುವ ಬಗ್ಗೆ ಐಟಿಗೆ ಬಲವಾದ ಮಾಹಿತಿ ಇದ್ದದ್ದರಿಂದಲೇ ರೇಡ್ ನಡೆದಿತ್ತು ಎಂದು ಹೇಳಲಾಗಿದೆ.

40 ಕೋಟಿ ರೂನಷ್ಟು ಆದಾಯ ಮುಚ್ಚಿಟ್ಟಿರುವ ಬಗ್ಗೆ ಇಮೇಲೆ ಬರೆದಿರುವ ಬಿಬಿಸಿಗೆ ಐಟಿ ಇಲಾಖೆ ಉತ್ತರಿಸಿದ್ದು, ಇಮೇಲ್ ಕಳುಹಿಸಿದರೆ ಅದು ಕಾನೂನಾತ್ಮಕ ಎನಿಸುವುದಿಲ್ಲ. ಪರಿಷ್ಕೃತ ಐಟಿ ರಿಟರ್ನ್ಸ್ ಅರ್ಜಿ ಸಲ್ಲಿಸಬೇಕು. ಎಲ್ಲಾ ಬಾಕಿ ತೆರಿಗೆ, ಬಡ್ಡಿ, ದಂಡ ಇತ್ಯಾದಿ ಹಲವು ಕೋಟಿ ರೂ ಮೊತ್ತವನ್ನು ಪಾವತಿಸಬೇಕಾಗುತ್ತದೆ ಎಂದು ಆ ಪತ್ರಿಕಾ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿByju’s vs Lenders: ಸಾಲಗಾರರಿಂದ ಹಿಂಸೆ; ಅಮೆರಿಕದ ಕೋರ್ಟ್ ಮೆಟ್ಟಿಲೇರಿದ ಬೆಂಗಳೂರಿನ ಬೈಜೂಸ್

ದೇಶದ ಕಾನೂನು ಎಲ್ಲರಿಗೂ ಒಂದೇ. ಮಾಧ್ಯಮ ಸಂಸ್ಥೆ ಎಂದೋ ಅಥವಾ ವಿದೇಶೀ ಸಂಸ್ಥೆ ಎಂದೋ ವಿಶೇಷ ವಿನಾಯಿತಿ ಇರುವುದಿಲ್ಲ. ನಿಯಮದ ಪ್ರಕಾರ ಬಿಬಿಸಿ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕು. ಈ ಪ್ರಕರಣವು ತಾರ್ಕಿಕವಾಗಿ ಅಂತ್ಯಗೊಳ್ಳುವವರೆಗೂ ಐಟಿ ಇಲಾಖೆಯು ಕ್ರಮ ಕೈಗೊಳ್ಳಲು ಸಿದ್ಧವಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿದೆ.

ಫೆಬ್ರುವರಿಯಲ್ಲಿ ಬಿಬಿಸಿ ಕಚೇರಿಗಳ ಮೇಲೆ ದಾಳಿ

ಬಿಬಿಸಿ ಅಥವಾ ಬ್ರಿಟಿಷ್ ಬ್ರಾಡ್​ಕ್ಯಾಸ್ಟಿಂಗ್ ಕಾರ್ಪೊರೇಷನ್ ಸಂಸ್ಥೆ ಬ್ರಿಟನ್ ಮೂಲದ್ದಾಗಿದ್ದು, ಭಾರತದಲ್ಲಿ ಕಚೇರಿ ಹೊಂದಿದೆ. 2023 ಫೆಬ್ರುವರಿ ತಿಂಗಳಲ್ಲಿ ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ತಂಡಗಳು ಸರ್ವೆ ಕೈಗೊಂಡಿದ್ದವು. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ ಎಂದು ಐಟಿ ಇಲಾಖೆ ಹೇಳಿದ್ದರೂ, ಈ ಬೆಳವಣಿಗೆಯಲ್ಲಿ ರಾಜಕೀಯ ಪಿತೂರಿ ಇದೆ ಎಂದು ವಿಪಕ್ಷಗಳು ದೂರಿದ್ದವು.

ಇದನ್ನೂ ಓದಿAir Tickets Fare: ಸುಮ್ಮನೆ ವಿಮಾನ ಟಿಕೆಟ್ ದರ ಏರಿಸದಿರಿ: ಏರ್​ಲೈನ್ಸ್ ಸಂಸ್ಥೆಗಳಿಗೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ

ಗುಜರಾತ್ ಗಲಭೆ ವಿಚಾರವಾಗಿ ಬಿಬಿಸಿ ಡಾಕ್ಯುಮೆಂಟರಿ ತಯಾರಿಸಿ ಬಿಡುಗಡೆ ಮಾಡಿದ್ದರಿಂದ ಸೇಡಿನ ಕ್ರಮವಾಗಿ ಐಟಿ ರೇಡ್ ನಡೆದಿದೆ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಬಿಬಿಸಿ ತಾನು ಯಾವುದೇ ತೆರಿಗೆ ವಂಚನೆ ಎಸಗಿಲ್ಲ ಎಂದು ಆಗ ಸಮರ್ಥಿಸಿಕೊಂಡಿತ್ತು. ಈಗ ನಾಲ್ಕೈದು ತಿಂಗಳ ಬಳಿಕ ಬಿಬಿಸಿ ತಾನು 40 ಕೋಟಿ ರೂನಷ್ಟು ಆದಾಯ ಮರೆಮಾಚಿದ್ದು ಹೌದು ಎಂಬುದಾಗಿ ತಪ್ಪೊಪ್ಪಿಕೊಂಡಿರುವುದು ಗಮನಾರ್ಹ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಚಾರಣೆ ನಂತರ ಈಡಿ ಕರೆದಿದ್ದು ಯಾಕೆ ಅಂತ ಗೊತ್ತಾಗಲಿದೆ: ಸುರೇಶ್
ವಿಚಾರಣೆ ನಂತರ ಈಡಿ ಕರೆದಿದ್ದು ಯಾಕೆ ಅಂತ ಗೊತ್ತಾಗಲಿದೆ: ಸುರೇಶ್
ರಜನಿ ಎಂಟ್ರಿಗೆ ಮೈಸೂರಿನ ಅಭಿಮಾನಿಗಳು ಫುಲ್ ಖುಷ್
ರಜನಿ ಎಂಟ್ರಿಗೆ ಮೈಸೂರಿನ ಅಭಿಮಾನಿಗಳು ಫುಲ್ ಖುಷ್
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ
ದೂದ್​ಗಂಗಾ, ವೇದಗಂಗಾ ಮತ್ತು ಹಿರಣ್ಯಕೇಶಿ ನದಿಗಳಲ್ಲೂ ಹೆಚ್ಚಿದ ನೀರು ಪ್ರಮಾಣ
VIDEO: ಕಾಂಬೊ ಕ್ಯಾಚ್​... ರವೀಂದ್ರ ಜಡೇಜಾ-ಸಾಯಿ ಸುದರ್ಶನ್ ಜುಗಲ್‌ಬಂದಿ
VIDEO: ಕಾಂಬೊ ಕ್ಯಾಚ್​... ರವೀಂದ್ರ ಜಡೇಜಾ-ಸಾಯಿ ಸುದರ್ಶನ್ ಜುಗಲ್‌ಬಂದಿ
ಕಣ್ ಹೊಡ್ಯೋದ್ರಲ್ಲಿ ರವಿಚಂದ್ರನ್​ ಮೀರಿಸಿದ ರಚಿತಾ ರಾಮ್
ಕಣ್ ಹೊಡ್ಯೋದ್ರಲ್ಲಿ ರವಿಚಂದ್ರನ್​ ಮೀರಿಸಿದ ರಚಿತಾ ರಾಮ್
ನಗರದಲ್ಲಿ ರಾರಾಜಿಸುತ್ತಿವೆ ದೈತ್ಯಗಾತ್ರದ ಕಟೌಟ್ ಮತ್ತು ಫ್ಲೆಕ್ಸ್​ಗಳು
ನಗರದಲ್ಲಿ ರಾರಾಜಿಸುತ್ತಿವೆ ದೈತ್ಯಗಾತ್ರದ ಕಟೌಟ್ ಮತ್ತು ಫ್ಲೆಕ್ಸ್​ಗಳು
ಕೃಷ್ಣಾ ನದಿ ಪ್ರವಾಹಕ್ಕೆ ಚಿಕ್ಕೋಡಿ ಸುತ್ತಮುತ್ತ 7 ಸೇತುವೆಗಳು ಜಲಾವೃತ
ಕೃಷ್ಣಾ ನದಿ ಪ್ರವಾಹಕ್ಕೆ ಚಿಕ್ಕೋಡಿ ಸುತ್ತಮುತ್ತ 7 ಸೇತುವೆಗಳು ಜಲಾವೃತ
ಮಂಗಳೂರಿನಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿವೆ ಜಾನುವಾರುಗಳು
ಮಂಗಳೂರಿನಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿವೆ ಜಾನುವಾರುಗಳು
ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?