AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ಟೋಬರ್ 11-12ಕ್ಕೆ ಉದ್ಯಮಿಯಾಗು-ಉದ್ಯೋಗ ಕೊಡು, ಕೈಗಾರಿಕಾ ಅದಾಲತ್‍ಗೆ ಚಾಲನೆ

ಉದ್ಯಮಿಯಾಗು ಹಾಗೂ ಉದ್ಯಮ ಕೊಡು ಎಂಬ ಅಭಿಯಾನವನ್ನು ಅಕ್ಟೋಬರ್ 11, 12ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಅಕ್ಟೋಬರ್ 11-12ಕ್ಕೆ ಉದ್ಯಮಿಯಾಗು-ಉದ್ಯೋಗ ಕೊಡು, ಕೈಗಾರಿಕಾ ಅದಾಲತ್‍ಗೆ ಚಾಲನೆ
ಸಚಿವ ಮುರುಗೇಶ್​ ನಿರಾಣಿಯವರು ಭಾಗವಹಿಸಿದ್ದ ಸಭೆ
TV9 Web
| Edited By: |

Updated on: Sep 28, 2021 | 5:47 PM

Share

ಬೆಂಗಳೂರು: ವಿದ್ಯಾವಂತ ಯುವಕರನ್ನು ಉದ್ಯಮದತ್ತ ಆಕರ್ಷಿಸಿ, ಸ್ವಯಂ ಉದ್ಯಮಿಗಳಾಗಿ ಮಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಮ್ಮಿಕೊಂಡಿರುವ “ಉದ್ಯಮಿಯಾಗು ಉದ್ಯೋಗ ಕೊಡು ಹಾಗೂ ಕೈಗಾರಿಕಾ ಅದಾಲತ್” ಯೋಜನೆಗೆ ಅಕ್ಟೋಬರ್ 11ರಂದು ವಿಧ್ಯುಕ್ತ ಚಾಲನೆ ದೊರೆಯಲಿದೆ. ಅ.11 ಮತ್ತು 12ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೊದಲ ದಿನ, ಉದ್ಯಮಿಯಾಗು ಉದ್ಯೋಗ ಕೊಡು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. 12ರಂದು ಕೈಗಾರಿಕಾ ಅದಾಲತ್ ನಡೆಯಲಿದ್ದು, ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ವಿನೂತನ ಕಾರ್ಯಕ್ರಮ ಇದಾಗಿದೆ. ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅಧ್ಯಕ್ಷತೆಯಲ್ಲಿ ಬೆಂಗಳೂರು ಕಂದಾಯ ವಿಭಾಗದ ಕೈಗಾರಿಕಾ ಸಂಸ್ಥೆಗಳ ಮುಖಂಡರ ಜೊತೆ ನಡೆಸಿದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಯಿತು.

ಬೆಂಗಳೂರು ಕಂದಾಯ ವಿಭಾಗದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಉದ್ಯಮಿಗಳು ಭಾಗವಹಿಸಲಿದ್ದಾರೆ. ಮೊದಲ ದಿನ, “ಉದ್ಯಮಿಯಾಗು ಉದ್ಯೋಗ ಕೊಡು” ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉದ್ಯಮಿಗಳು ಕೈಗಾರಿಕಾ ಕ್ಷೇತ್ರದಲ್ಲಿ ಯಶಸ್ವಿ ಸಾಧಿಸಿರುವ ಕನ್ನಡಿಗರೇ ಆದ ಕೋ ರಾಧಾಕೃಷ್ಣ, ಜಿರೋದಾ ನಿತನ್, ನಿಖಿಲ್ ಕಾಮತ್, ಪಡ್ಕೆ ಸೇರಿದಂತೆ ಮತ್ತಿತರ ಉದ್ಯಮಿಗಳನ್ನು ಆಹ್ವಾನಿಸಿ, ನೂತನ ಉದ್ಯಮಿಗಳಿಗೆ ವಿಶೇಷ ಉಪನ್ಯಾಸ, ಮಾರ್ಗದರ್ಶನ, ಸಲಹೆ ನೀಡಲಿದ್ದಾರೆ. ಬೆಂಗಳೂರು ಕಂದಾಯ ವಿಭಾಗದ ವಿವಿಧ ಜಿಲ್ಲೆಗಳಿಂದ ಒಟ್ಟು 10 ಸಾವಿರ ಜನರು ಆಗಮಿಸಲಿದ್ದು, ವೈಮಾನಿಕ ಕ್ಷೇತ್ರ, ರಕ್ಷಣಾ ಕ್ಷೇತ್ರದಲ್ಲಿ ಉದ್ಯೋಗಗಳು, ಹೂಡಿಕೆಗಿರುವ ಅವಕಾಶಗಳ ಬಗ್ಗೆ ಚರ್ಚೆ ನಡೆಯಲಿದೆ. ಸ್ಮಾರ್ಟ್ ಆಪ್ ಉದ್ಯೋಗ ಸೃಷ್ಟಿಸುವುದು, ಆರೋಗ್ಯ ಕ್ಷೇತ್ರ, ಶಿಕ್ಷಣ, ಎಜು ಟೆಕ್ನಾಲಜಿ, ಹೂಡಿಕೆ ಮಾಡುವುದು, ಬ್ಯಾಂಕಿಂಗ್ ವಲಯದಿಂದ ಸಾಲಸೌಲಭ್ಯ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳು ನಡೆಯಲಿವೆ.

ಜಿಲ್ಲಾವಾರು ವರ್ಗೀಕರಣ ಎರಡನೇ ದಿನದ ಕೈಗಾರಿಕಾ ಅದಾಲತ್‍ನಲ್ಲಿ ಪ್ರಮುಖವಾಗಿ ಕೈಗಾರಿಕಾ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ಬಗ್ಗೆ ಸಚಿವರು, ಇಲಾಖೆ ಅಧಿಕಾರಿಗಳು ಪರಿಹರಿಸಲು ಆದ್ಯತೆ ನೀಡುವರು. ಕೈಗಾರಿಕಾ ಅದಾಲತ್ ನಡೆಸುವ ಸಂಬಂಧ ಜಿಲ್ಲಾವಾರು ವರ್ಗೀಕರಣ ಮಾಡಿ, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೊತೆಗೆ ಕೈಗಾರಿಕಾ ಸಂಘ- ಸಂಸ್ಥೆಗಳು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತಂದರೆ ಸ್ಥಳದಲ್ಲಿಯೇ ಇತ್ಯರ್ಥಪಡಿಸಲಿದ್ದಾರೆ. ಸಭೆಯಲ್ಲಿ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಅದಾಲತ್, ಕಾರ್ಯಾಗಾರವನ್ನು 6 ವಿಭಾಗಗಳಲ್ಲಿ ನಡೆಸಲಾಗುವುದು. ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ, ಉದ್ಯಮಿದಾರರ ಮನವೊಲಿಸಲಿದೆ ಎಂದು ಹೇಳಿದರು.

ಸಮಸ್ಯೆಗಳ ಇತ್ಯರ್ಥ ಇನ್ನು ಸಭೆಯಲ್ಲಿ ಬಹುತೇಕ ಸಂಘ- ಸಂಸ್ಥೆಯ ಮುಖ್ಯಸ್ಥರು ಪ್ರಮುಖವಾಗಿ ವಿದ್ಯುತ್ ಸೇರಿದಂತೆ ಪ್ರಮುಖ ಮೂಲಸೌಲಭ್ಯಗಳ ಬಗ್ಗೆ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಥಳದಲ್ಲೇ ಸ್ಪಂದಿಸಿದ ಸಚಿವ ನಿರಾಣಿಯವರು, ಉದ್ಯಮಿಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರ ಬದ್ದವಾಗಿದೆ. ಇದರ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ. ಇದಕ್ಕೆ ಯಾರೂ ಆತಂಕಪಡುವುದು ಬೇಡ. ಇದಕ್ಕೆ ನಾವು ಬದ್ದ ಎಂದು ವಾಗ್ದಾನ ಮಾಡಿದರು. ಯಾರಿಗೆ ಎಷ್ಟು ವಿದ್ಯುತ್ ಬೇಕು ಎಂದು ಅಂದಾಜಿಸಲಾಗುವುದು. ಈ ಸಂಬಂಧ ಇಂಧನ ಸಚಿವರ ಜೊತೆ ಖುದ್ದು ನಾನೇ ಸಭೆ ಕರೆಯಲಿದ್ದೇನೆ. ನೀವು ಆತಂಕಕ್ಕೆ ಒಳಗಾಗಬೇಡಿ ಎಂದು ಸಲಹೆ ಮಾಡಿದರು.

ಭೂಮಿ, ನೀರು, ವಿದ್ಯುತ್ ಮತ್ತು ನುರಿತ ಕೆಲಸಗಾರರನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ. ಹೆಚ್ಚು ಕೈಗಾರಿಕೆಗಳು ಬರಬೇಕು, ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Jobs: 2013ರಿಂದ ಈಚೆಗೆ ಶೇ 29ರಷ್ಟು ಉದ್ಯೋಗ ಹೆಚ್ಚಳವಾಗಿದೆ ಎನ್ನುತ್ತಿದೆ ಈ ಸಮೀಕ್ಷೆ

(Become A Entrepreneur And Offer A Job Campaign At Bengaluru On October 11th And 12th)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್