AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ, ಚೀನಾ ಗಡಿಭಾಗದಲ್ಲಿ ದೇಶದ ರಕ್ಷಣೆಗೆ ಅನಂತ್ ಶಸ್ತ್ರ ಕ್ಷಿಪಣಿ: ಬಿಇಎಲ್​ಗೆ ಗುತ್ತಿಗೆ

Anant Shastra air defence systems by BEL: ಆಪರೇಷನ್ ಸಿಂದೂರ್​ನಲ್ಲಿ ದೇಶೀಯ ನಿರ್ಮಿತ ಶಸ್ತ್ರಾಸ್ತ್ರಗಳು ಅದೆಷ್ಟು ಮಹತ್ವದ್ದು ಎಂದು ಸಾಬೀತಾಗಿತ್ತು. ಈಗ ದೇಶೀಯ ಶಸ್ತ್ರಾಸ್ತ್ರಗಳ ಸಾಲಿಗೆ ಅನಂತ ಶಸ್ತ್ರ ಸೇರ್ಪಡೆಯಾಗಿದೆ. ಡಿಆರ್​ಡಿಒ ಅಭಿವೃದ್ಧಿಪಡಿಸಿದ ಅನಂತ ಶಸ್ತ್ರದ ಖರೀದಿಗಾಗಿ ಬಿಇಎಲ್ ಸಂಸ್ಥೆಗೆ ವಾಯುಸೇನೆ ಗುತ್ತಿಗೆ ಕೊಟ್ಟಿದೆ.

ಪಾಕಿಸ್ತಾನ, ಚೀನಾ ಗಡಿಭಾಗದಲ್ಲಿ ದೇಶದ ರಕ್ಷಣೆಗೆ ಅನಂತ್ ಶಸ್ತ್ರ ಕ್ಷಿಪಣಿ: ಬಿಇಎಲ್​ಗೆ ಗುತ್ತಿಗೆ
ಅನಂತ ಶಸ್ತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 28, 2025 | 5:48 PM

Share

ನವದೆಹಲಿ, ಸೆಪ್ಟೆಂಬರ್ 28: ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸ್ವಾವಲಂಬನೆ ದಿನೇ ದಿನೇ ಹೆಚ್ಚುತ್ತಿದೆ. ಹೆಚ್ಚಿನ ಶಸ್ತ್ರಾಸ್ತ್ರಗಳನ್ನು ದೇಶೀಯವಾಗಿ ನಿರ್ಮಾಣ ಮಾಡುವ ಪ್ರಯತ್ನಗಳು ಹೆಚ್ಚುತ್ತಿವೆ. ಪಾಕಿಸ್ತಾನ ಮತ್ತು ಚೀನಾ ಗಡಿಭಾಗದುದ್ದಕ್ಕೂ ವಾಯು ರಕ್ಷಣೆ ಬಲಪಡಿಸಲು ಅನಂತ್ ಶಸ್ತ್ರ ಎನ್ನುವ ಏರ್ ಮಿಸೈಲ್ ಸಿಸ್ಟಂಗಳನ್ನು ಖರೀದಿಸುತ್ತಿದೆ ಭಾರತೀಯ ಸೇನೆ (Indian Army). ಐದರಿಂದ ಆರು ರೆಜಿಮೆಂಟ್​ಗಳ ಅನಂತ ಶಸ್ತ್ರ ಕ್ಷಿಪಣಿ ಸಿಸ್ಟಂಗಳ ಖರೀದಿಗೆ ಗುತ್ತಿಗೆ ನೀಡಲಾಗಿದೆ.

ಬೆಂಗಳೂರು ಮೂಲದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕಂಪನಿಗೆ ಅನಂತ ಶಸ್ತ್ರ ಕ್ಷಿಪಣಿ ಗುತ್ತಿಗೆ ಸಿಕ್ಕಿದೆ. ಇದು 30,000 ಕೋಟಿ ರೂ ಮೌಲ್ಯದ ಬೃಹತ್ ಪ್ರಾಜೆಕ್ಟ್ ಆಗಿದೆ. ಡಿಆರ್​ಡಿಒ ಅಭಿವೃದ್ಧಿಪಡಿಸಿರುವ ಅನಂತ ಶಸ್ತ್ರವು ಕ್ವಿಕ್ ರಿಯಾಕ್ಷನ್ ಸರ್ಫೇಸ್ ಟು ಏರ್ ಮಿಸೈಲ್ ಸಿಸ್ಟಂ ಆಗಿದೆ.

ಇದನ್ನೂ ಓದಿ: ಈ ಯುದ್ಧದಲ್ಲಿ ಗೆದ್ದವರಿಂದ ಜಗತ್ತಿನ ಮುಂದಿನ ಅಧಿಪತ್ಯ: ರೇ ಡಾಲಿಯೋ

ಅನಂತ ಶಸ್ತ್ರ ಏರ್ ಡಿಫೆನ್ಸ್ ಸಿಸ್ಟಂ ಹೇಗಿದೆ?

ಅನಂತ ಶಸ್ತ್ರ ಏರ್ ಡಿಫೆನ್ಸ್ ಸಿಸ್ಟಂಗಳು ಬಹಳ ನಿಖರವಾಗಿ ಗುರಿಗಳಿಗೆ ಹೊಡೆಯಲು ಸಮರ್ಥವಾಗಿವೆ. ಇವುಗಳ ಶ್ರೇಣಿ 30 ಕಿಮೀ ಇದೆ.

ಭಾರತದಲ್ಲಿ ಈಗಾಗಲೇ ದೇಶೀಯ ನಿರ್ಮಿತ ಉತ್ತಮ ಏರ್ ಡಿಫೆನ್ಸ್ ಸಿಸ್ಟಂಗಳಿವೆ. ಎಂಆರ್​ಎಸ್​ಎಎಂ, ಆಕಾಶ್ ಸಿಸ್ಟಂಗಳಿವೆ. ಪಾಕಿಸ್ತಾನ ವಿರುದ್ಧದ ಆಪರೇಷನ್ ಸಿಂದೂರ್​ನಲ್ಲಿ ಭಾರತದ ದೇಶೀಯ ಶಸ್ತ್ರಾಸ್ತ್ರಗಳು ಗಮನಾರ್ಹ ಪಾತ್ರ ವಹಿಸಿದ್ದವು.

ಎಂಆರ್​ಎಸ್​ಎಎಂ, ಆಕಾಶ್ ಅಷ್ಟೇ ಅಲ್ಲದೆ, ಸ್ಪೈಡರ್, ಸುದರ್ಶನ್ ಎಸ್-400 ಏರ್ ಡಿಫೆನ್ಸ್ ಸಿಸ್ಟಂಗಳು ಆಪರೇಷನ್ ಸಿಂದೂರ್​ನಲ್ಲಿ ಮಿಂಚಿದ್ದವು. ಎಲ್-70, ಝಡ್​ಯು-23 ಏರ್ ಡಿಫೆನ್ಸ್ ಗನ್ ಮೊದಲಾದವು ಕೂಡ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ: ಹೊಸ ತಲೆಮಾರಿನ ಯುದ್ಧವಿಮಾನ ನಿರ್ಮಾಣಕ್ಕೆ ಜೊತೆಯಾದ ಬಿಇಎಲ್ ಮತ್ತು ಎಲ್ ಅಂಡ್ ಟಿ

ಈ ಸಮರ್ಥ ಏರ್ ಡಿಫೆನ್ಸ್ ವ್ಯವಸ್ಥೆಗೆ ಈಗ ಅನಂತ ಶಸ್ತ್ರ ಮತ್ತಷ್ಟು ಬಲ ಒದಗಿಸಲಿದೆ. ಹಾಗೆಯೇ, ಹೊಸ ರಾಡಾರ್​ಗಳು, ಬಹಳ ಕಿರು ಶ್ರೇಣಿಯ ಏರ್ ಡಿಫೆನ್ಸ್ ಸಿಸ್ಟಂಗಳು, ಜಾಮರ್​ಗಳು, ಲೇಸರ್ ಆಧಾರಿತ ಸಿಸ್ಟಂಗಳು ಇವೇ ಮುಂತಾದವನ್ನು ಭಾರತ ತನ್ನ ಬತ್ತಳಿಕೆಗೆ ಸೇರಿಸಿಕೊಳ್ಳಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?