AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3D Printed Post Office: ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಗೆ ಎಷ್ಟು ವೆಚ್ಚ? ಇದನ್ನು ನಿರ್ಮಾಣ ಹೇಗೆ? ಇಲ್ಲಿದೆ ಡೀಟೇಲ್ಸ್

3D Printed Post Office Construction Expense: ಬೆಂಗಳೂರಿನ ಅಲಸೂರಿನ ಬಳಿ ನಿರ್ಮಿಸಲಾಗಿರುವ ಕೇಂಬ್ರಿಡ್ಜ್ ಲೇಔಟ್ ಪೋಸ್ಟ್ ಆಫೀಸ್ ಭಾರತದ ಮೊದಲ 3ಡಿ ಪ್ರಿಂಟೆಡ್ ಸರ್ಕಾರಿ ಕಟ್ಟಡ ಎನಿಸಿದೆ. ಈ ತಂತ್ರಜ್ಞಾನ ಬಳಕೆಯಿಂದ ಕಟ್ಟಡ ನಿರ್ಮಾಣ ವೆಚ್ಚ ಮತ್ತು ಸಮಯ ಎರಡೂ ಬಹಳ ಉಳಿತಾಯವಾಗುತ್ತದೆ.

3D Printed Post Office: ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಗೆ ಎಷ್ಟು ವೆಚ್ಚ? ಇದನ್ನು ನಿರ್ಮಾಣ ಹೇಗೆ? ಇಲ್ಲಿದೆ ಡೀಟೇಲ್ಸ್
3ಡಿ ಪ್ರಿಂಟೆಡ್ ಪೋಸ್ಟ್ ಆಫೀಸ್ ಕಟ್ಟಡ
Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: Digi Tech Desk

Updated on:Aug 18, 2023 | 11:40 AM

ಬೆಂಗಳೂರು, ಆಗಸ್ಟ್ 18: ಅಲಸೂರು ಸಮೀಪದ ಜೋಗುಪಾಳ್ಯದ ಬಳಿ ನಿರ್ಮಿಸಲಾಗಿರುವ ಹೊಸ ಅಂಚೆ ಕಚೇರಿಗೆ 3ಡಿ ಮುದ್ರಿತ ತಂತ್ರಜ್ಞಾನ (3D Printed Building) ಬಳಸಲಾಗಿದೆ. ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ ಸಚಿವ ಅಶ್ವಿನಿ ವೈಷ್ಣವ್ (Union IT Minister Ashwini Vaishnaw) ಅವರು ಇಂದು ಆಗಸ್ಟ್ 18ರಂದು ಈ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಕೇಂಬ್ರಿಡ್ಜ್ ಲೇಔಟ್ ಪೋಸ್ಟ್ ಆಫೀಸ್ ಎಂದು ಕರೆಯಲಾಗಿರುವ ಇದು ಭಾರತದ ಮೊದಲ 3ಡಿ ಮುದ್ರಿತ ಸರ್ಕಾರಿ ಕಟ್ಟಡ ಎನಿಸಿದೆ. ಗುಣಮಟ್ಟದ ಕಾಮಗಾರಿಗೆ ಹೆಸರುವಾಸಿಯಾದ ಎಲ್ ಅಂಡ್ ಟಿ (L&T- Larsen and Toubro) ಸಂಸ್ಥೆ ಈ ಕಟ್ಟಡದ ನಿರ್ಮಾಣ ಮಾಡಿದೆ. ವರದಿಗಳ ಪ್ರಕಾರ 1,100 ಚದರಡಿ ಅಂಗಳದಲ್ಲಿ ನಿರ್ಮಿಸಲಾಗಿರುವ ಈ ಕಟ್ಟಡಕ್ಕೆ ತೆರಿಗೆ ಸೇರಿ 26 ಲಕ್ಷ ರೂ ವೆಚ್ಚವಾಗಿದೆ. ನೀರು, ಒಳಚರಂಡಿ ಇತ್ಯಾದಿಗಳಿಗೆ ಹೆಚ್ಚುವರಿ 40 ಲಕ್ಷ ರೂ ವೆಚ್ಚವಾಗಿರುವುದು ತಿಳಿದುಬಂದಿದೆ.

3ಡಿ ಮುದ್ರಿತ ಕಟ್ಟಡ ನಿರ್ಮಾಣ ವೆಚ್ಚ ಬಹಳ ಕಡಿಮೆ

3ಡಿ ಪ್ರಿಂಟೆಡ್ ಪೋಸ್ಟ್ ಆಫೀಸ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ 44 ದಿನ ಮಾತ್ರ ಆಗಿದ್ದು. ಮಾರ್ಚ್ 21ರಂದು ಕಾಮಕಾರಿ ಶುರುವಾಗಿ ಮೇ 3ಕ್ಕೆ ಮುಗಿದಿತ್ತು. ಆದರೆ, ಚರಂಡಿ ಮತ್ತು ನೀರಿನ ವ್ಯವಸ್ಥೆ ಮಾಡಲು ಎರಡು ತಿಂಗಳು ಹಿಡಿದಿದೆ. ಕಟ್ಟಡ ನಿರ್ಮಾಣಕ್ಕೆ 3ಡಿ ಪ್ರಿಂಟಿಂಗ್ ತಂತ್ರಜ್ಞಾನ ಬಳಸಿರುವುದರಿಂದ ನಿರ್ಮಾಣ ವೆಚ್ಚ ಶೇ. 30ರಿಂದ 40ರಷ್ಟು ಮಿಗುತ್ತದೆ. ವೆಚ್ಚ ಮಾತ್ರವಲ್ಲ, ಸಮಯವೂ ಸಾಕಷ್ಟು ಉಳಿತಾಯವಾಗುತ್ತದೆ.

ಇದನ್ನೂ ಓದಿ: 3D Printed Post Office Building: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‌ಅಂಚೆ ಕಚೇರಿ; ಇಂದು ಲೋಕಾರ್ಪಣೆ

ಮೊದಲ 3ಡಿ ಮುದ್ರಿತ ಕಟ್ಟಡವಲ್ಲ…

ಭಾರತದಲ್ಲಿ 3ಡಿ ಪ್ರಿಂಟೆಡ್ ಟೆಕ್ನಾಲಜಿಯಲ್ಲಿ ಕಟ್ಟಡಗಳ ನಿರ್ಮಾಣ ಆಗಿದ್ದಿವೆ. 2020ರಲ್ಲಿ ಎಲ್ ಅಂಡ್ ಟಿ ಮೊದಲ ಬಾರಿಗೆ ಈ ತಂತ್ರಜ್ಞಾನದಲ್ಲಿ ಕಟ್ಟಡ ಕಟ್ಟಿತ್ತು. ಆದರೆ, ಸಾರ್ವಜನಿಕ ಕಟ್ಟಡವೊಂದನ್ನು 3ಡಿ ಪ್ರಿಂಟಿಂಗ್​ನಲ್ಲಿ ತಯಾರಿಸಿದ್ದು ಇದೇ ಮೊದಲು. ಅಂತೆಯೇ, ಕೇಂಬ್ರಿಡ್ಜ್ ಲೇಔಟ್ ಪೋಸ್ಟ್ ಆಫೀಸ್ ಭಾರತದ ಮೊದಲ ಥ್ರೀಡಿ ಮುದ್ರಿತ ಸರ್ಕಾರಿ ಕಟ್ಟಡವೆಂಬ ದಾಖಲೆಗೆ ಬಾಜನವಾಗಿದೆ.

ಹೇಗಿರುತ್ತೆ 3ಡಿ ಪ್ರಿಂಟೆಡ್ ಕಟ್ಟಡ?

ಇದರ ಎಲ್ಲಾ ನಿರ್ಮಾಣ ಕಾರ್ಯವೂ ಕಂಪ್ಯೂಟರ್ ನಿಯಂತ್ರಿತವಾಗಿರುತ್ತದೆ. ಎಂಥ ಸಂಕೀರ್ಣ ವಿನ್ಯಾಸದಲ್ಲೂ ಕಟ್ಟಡ ನಿರ್ಮಿಸಲು ಇದರಿಂದ ಸಾಧ್ಯ. ಕ್ಯಾಡ್ ಮಾಡೆಲ್ ಅಥವಾ ಡಿಜಿಟಲ್ 3ಡಿ ಮಾಡಲ್ ರೂಪಿಸಿ ಕಂಪ್ಯೂಟರ್ ನಿರ್ದೇಶನದಲ್ಲಿ ಕಾಂಕ್ರೀಟ್ ಇತ್ಯಾದಿ ಸಾಮಗ್ರಿಗಳನ್ನು ಸೇರಿಸಲಾಗುತ್ತದೆ.

ಇದನ್ನೂ ಓದಿ: ಸ್ಟಾರ್ಟಪ್ ಮಾತ್ರವಲ್ಲ, ಉದ್ಯೋಗ ಸೃಷ್ಟಿಯಲ್ಲಿಯೂ ಮುಂಚೂಣಿಯಲ್ಲಿದೆ ಬೆಂಗಳೂರು; ಅಧ್ಯಯನ ವರದಿ

ಎಲ್ ಅಂಡ್ ಸಂಸ್ಥೆ ತಮಿಳುನಾಡಿನ ಕಾಂಚಿಪುರಂನಲ್ಲಿ 3ಡಿ ಮುದ್ರಿತ ಕಟ್ಟಡ ನಿರ್ಮಾಣ ಘಟಕ ಹೊಂದಿದೆ. ಪೋಸ್ಟ್ ಆಫೀಸ್ ಕಟ್ಟಡದ ವಿವಿಧ ಭಾಗಗಳನ್ನು ಕಾಂಚಿಪುರಂನಲ್ಲೇ ತಯಾರಿಸಿ, ಬಳಿಕ ಅವುಗಳನ್ನು ಬೆಂಗಳೂರಿಗೆ ತಂದು ಅಸೆಂಬಲ್ ಮಾಡಿ ಅಂತಿಮ ಕಟ್ಟಡ ನಿರ್ಮಿಸಲಾಗಿದೆ.

ಕೈಯಿಂದ ನಿರ್ಮಿಸಲು ಕಷ್ಟವಾದ ಆಕಾರವನ್ನು 3ಡಿ ಪ್ರಿಂಟಿಂಗ್ ಮೂಲಕ ಸುಲಭವಾಗಿ ಮಾಡಬಹುದು. ಬೇರೆ ಬೇರೆ ದೇಶಗಳಲ್ಲಿ ಹಲವೆಡೆ ಈ ರೀತಿ ತ್ರೀಡಿ ಮುದ್ರಿತ ಹಲವು ಕಟ್ಟಡಗಳ ನಿರ್ಮಾಣವಾಗಿದೆ. ಮಂಗಳ ಇತ್ಯಾದಿ ಅನ್ಯ ಗ್ರಹಗಳನ್ನು ಮನುಷ್ಯ ವಸಾಹತು ಸ್ಥಾಪಿಸುವುದಾದರೆ ಅಲ್ಲಿ ವಾಸಸ್ಥಳ ನಿರ್ಮಾಣಕ್ಕೆ 3ಡಿ ಪ್ರಿಂಟೆಡ್ ಟೆಕ್ನಾಲಜಿ ಬಳಕೆ ಮಾಡುವ ಆಲೋಚನೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Fri, 18 August 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು