AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Airport: ಹೆಚ್ಚಿನ ಭಾರತೀಯ ವಿಮಾನ ನಿಲ್ದಾಣಗಳು ನಷ್ಟದಲ್ಲಿ; ಬೆಂಗಳೂರು ಏರ್ಪೋರ್ಟ್ ಅತಿಹೆಚ್ಚು ಲಾಭದಾಯಕ

Loss Making Indian Airports: ದೇಶದ 125 ವಿಮಾನ ನಿಲ್ದಾಣಗಳ ಪೈಕಿ 93 ಏರ್ಪೋರ್ಟ್​ಗಳು ನಷ್ಟದಲ್ಲಿವೆ ಎಂದು ಕೇಂದ್ರ ಸಚಿವ ಜನರಲ್ ವಿ.ಕೆ. ಸಿಂಗ್ ಮಾಹಿತಿ ನೀಡಿದ್ದಾರೆ. ಪಿಪಿಪಿ ಮಾದರಿಯಲ್ಲಿ ನಿರ್ವಹಣೆ ಆಗುತ್ತಿರುವ 14 ಏರ್ಪೋರ್ಟ್​ಗಳಲ್ಲಿ 11 ನಿಲ್ದಾಣಗಳು ನಷ್ಟದಲ್ಲಿವೆ. ಲಾಭ ಮಾಡಿರುವ ಕೆಲವೇ ಏರ್​ಪೋರ್ಟ್​ಗಳಲ್ಲಿ ಬೆಂಗಳೂರು ಇದೆ. 2022-23ರಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ 528 ಕೋಟಿ ರೂ ಲಾಭ ಮಾಡಿತ್ತು.

Bengaluru Airport: ಹೆಚ್ಚಿನ ಭಾರತೀಯ ವಿಮಾನ ನಿಲ್ದಾಣಗಳು ನಷ್ಟದಲ್ಲಿ; ಬೆಂಗಳೂರು ಏರ್ಪೋರ್ಟ್ ಅತಿಹೆಚ್ಚು ಲಾಭದಾಯಕ
ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 05, 2023 | 12:30 PM

Share

ನವದೆಹಲಿ, ಡಿಸೆಂಬರ್ 5: ಭಾರತದಲ್ಲಿ ಅತ್ಯಂತ ಜಟಿಲವಾದ ವಲಯವೆಂದರೆ ವೈಮಾನಿಕ ಕ್ಷೇತ್ರದ್ದು. ಲಭ ಗಳಿಸುವ ಏರ್ಲೈನ್ಸ್ ಕಂಪನಿಗಳು ವಿರಳ. ಹಾಗೆಯೇ, ಏರ್ಪೋರ್ಟ್​ಗಳೂ ಕೂಡ ಲಾಭಕ್ಕಾಗಿ ತಡಕಾಡಬೇಕಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಜನರಲ್ ಡಾ. ವಿ.ಕೆ. ಸಿಂಗ್ (General Dr. V.K. Singh) ಇಂದು ಮಂಗಳವಾರ ಸಂಸತ್​ಗೆ ನೀಡಿರುವ ಮಾಹಿತಿ ಪ್ರಕಾರ, ಭಾರತದ ಹೆಚ್ಚಿನ ವಿಮಾನ ನಿಲ್ದಾಣಗಳು ನಷ್ಟದಲ್ಲಿವೆಯಂತೆ. ಕಳೆದ ಮೂರು ಹಣಕಾಸು ವರ್ಷಗಳ ವರದಿಗಳನ್ನು ಆಧರಿಸಿ ಸಚಿವರು ಈ ಮಾಹಿತಿ ನೀಡಿದ್ದಾರೆ. ದೇಶದ 125 ಏರ್ಪೋರ್ಟ್​ಗಳ ಪೈಕಿ 93 ವಿಮಾನ ನಿಲ್ದಾಣಗಳು (Airports) 2022-23ರಲ್ಲಿ ನಷ್ಟ ಅನುಭವಿಸಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಕೆಲವೇ ಏರ್ಪೋರ್ಟ್​ಗಳು ಲಾಭ ಮಾಡಿವೆ. ಅತಿ ಹೆಚ್ಚು ಲಾಭ ಕಂಡಿರುವುದು ಬೆಂಗಳೂರಿನ ವಿಮಾನ ನಿಲ್ದಾಣವೇ.

ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2022-23ರ ಹಣಕಾಸು ವರ್ಷದಲ್ಲಿ 528 ಕೋಟಿ ರೂನಷ್ಟು ಲಾಭ ಗಳಿಸಿರುವುದು ತಿಳಿದುಬಂದಿದೆ. ಲಾಭ ಮಾಡಿರುವ ಇತರ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಕೊಚ್ಚಿ ಮತ್ತು ಹೈದರಾಬಾದ್ ಏರ್​ಪೋರ್ಟ್​ಗಳೂ ಸೇರಿವೆ ಎಂದು ಸಚಿವ ಜನರಲ್ ವಿ.ಕೆ. ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಅದಾನಿ ಗ್ರೂಪ್​ಗೆ ಧನಸಹಾಯ ಕೊಡುವ ಮುನ್ನ ಹಿಂಡನ್ಬರ್ಗ್ ವರದಿ ಅವಲೋಕಿಸಿದ್ದ ಅಮೆರಿಕದ ಸರ್ಕಾರ

ಅತಿಹೆಚ್ಚು ನಷ್ಟ ಕಂಡಿರುವುದು ಅಹ್ಮಾದಾಬಾದ್​ನ ವಿಮಾನ ನಿಲ್ದಾಣ. ಇದು 2022-23ರಲ್ಲಿ 408.51 ಕೋಟಿ ರೂ ನಷ್ಟ ಕಂಡಿತ್ತು. ದೆಹಲಿ ಏರ್​ಪೋರ್ಟ್ ಕೂಡ ನಷ್ಟದಲ್ಲಿ ಎರಡನೇ ಸ್ಥಾನದಲ್ಲಿದೆ. ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಷ್ಟ ಅನುಭವಿಸಿದೆಯಾದರೂ 2021-22ಕ್ಕೆ ಹೋಲಿಸಿದರೆ 2022-23ರಲ್ಲಿ ಕಡಿಮೆ ನಷ್ಟ ಕಂಡಿದೆ. 2022ರ ಹಣಕಾಸು ವರ್ಷದಲ್ಲಿ ಅದು 182.58 ಕೋಟಿ ರೂ ನಷ್ಟ ಕಂಡಿತ್ತು. 2023ರ ಹಣಕಾಸು ವರ್ಷದಲ್ಲಿ ನಷ್ಟವು 1.04 ಕೋಟಿ ರೂಗೆ ಇಳಿದಿದೆ. ಮಂಗಳೂರು ವಿಮಾನ ನಿಲ್ದಾಣ ಕೂಡ ನಷ್ಟ ಕಂಡಿದೆ.

ನಷ್ಟ ಕಂಡ ಪ್ರಮುಖ ಏರ್ಪೋರ್ಟ್​ಗಳು

ದೇಶದಲ್ಲಿ ಪಬ್ಲಿಕ್ ಪ್ರೈವೇಟ್ ಪಾರ್ಟ್ನರ್​ಶಿಪ್ ಮಾದರಿಯಲ್ಲಿ 14 ಏರ್ಪೋರ್ಟ್​ಗಳ ನಿರ್ವಹಣೆ ಆಗುತ್ತಿದೆ. ಈ ಪೈಕಿ 11 ಏರ್ಪೋರ್ಟ್​ಗಳು ನಷ್ಟ ಕಂಡಿವೆ. ಬೆಂಗಳೂರು, ಕೊಚ್ಚಿ ಮತ್ತು ಹೈದರಾಬಾದ್ ಏರ್ಪೋರ್ಟ್​ಗಳು ಮಾತ್ರವೇ ಲಾಭ ಮಾಡಿರುವುದು.

ಇದನ್ನೂ ಓದಿ: Corporate Bond: ಆರು ವರ್ಷದಲ್ಲಿ ದ್ವಿಗುಣಗೊಳ್ಳಲಿದೆ ಭಾರತದ ಕಾರ್ಪೊರೇಟ್ ಬಾಂಡ್ ಮಾರುಕಟ್ಟೆ; ಏನಿದು ಬಾಂಡ್?

ಅಹ್ಮದಾಬಾದ್, ದೆಹಲಿ, ಮುಂಬೈ, ಲಕ್ನೋ, ಜೈಪುರ್, ದುರ್ಗಾಪುರ್, ಮಂಗಳೂರು, ತಿರುವನಂತಪುರಂ, ಗುವಾಹತಿ, ಮೋಪಾ ಮೊದಲಾದ ಏರ್ಪೋರ್ಟ್​ಗಳು ನಷ್ಟ ಕಂಡಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Tue, 5 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!