AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ಬೆಂಗಳೂರಿನ ಹಲವೆಡೆ ಕಾರ್ಪೊರೇಟ್​​ ಕಂಪನಿಗಳ ಮೇಲೆ ಐಟಿ ದಾಳಿ; ಪರಿಶೀಲನೆ

IT Raid; ಬೆಂಗಳೂರಿನ ಸಂಜಯನಗರ, ಹೆಬ್ಬಾಳ, ಕೊಡಿಗೇಹಳ್ಳಿ, ಬಿಡದಿ, ಚಿಕ್ಕಬಳ್ಳಾಪುರ, ರಾಮನಗರದಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ.

IT Raid: ಬೆಂಗಳೂರಿನ ಹಲವೆಡೆ ಕಾರ್ಪೊರೇಟ್​​ ಕಂಪನಿಗಳ ಮೇಲೆ ಐಟಿ ದಾಳಿ; ಪರಿಶೀಲನೆ
ಸಾಂದರ್ಭಿಕ ಚಿತ್ರImage Credit source: PTI
TV9 Web
| Updated By: Ganapathi Sharma|

Updated on:Dec 09, 2022 | 11:16 AM

Share

ಬೆಂಗಳೂರು: ತೆರಿಗೆ ವಂಚನೆ (Tax Fraud) ಆರೋಪದಲ್ಲಿ ಬೆಂಗಳೂರಿ(Bengaluru) ಹಲವೆಡೆ ಆದಾಯ ತೆರಿಗೆ ಇಲಾಖೆ (Income Tax Department) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ (IT Raid) ನಡೆದಿದ್ದಾರೆ. ಹಲವು ಕಾರ್ಪೊರೇಟ್​​ ಕಂಪನಿಗಳ ಕಚೇರಿಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕಂಪನಿಗಳ ಮಾಲೀಕರ ಮನೆಗಳ ಮೇಲೂ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆ ಪ್ರಗತಿಯಲ್ಲಿದೆ. ಬೆಂಗಳೂರಿನ ಸಂಜಯನಗರ, ಹೆಬ್ಬಾಳ, ಕೊಡಿಗೇಹಳ್ಳಿ, ಬಿಡದಿ, ಚಿಕ್ಕಬಳ್ಳಾಪುರ, ರಾಮನಗರದ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಕೊಡಿಗೇಹಳ್ಳಿಯ ಬ್ರಿಗೇಡ್ ಓಪಸ್ ನಲ್ಲಿರುವ ಕಂಪನಿಯೊಂದರ ಮೇಲೆ ದಾಳಿ ನಡೆದಿದೆ.

ರಾಜ್ಯದ ಹಲವೆಡೆ ನಡೆದಿತ್ತು ಐಟಿ ದಾಳಿ

ಕರ್ನಾಟಕದ ಹಲವೆಡೆ ಕೆಲವು ದಿನಗಳ ಹಿಂದೆಯೂ ಸರಣಿ ಐಟಿ ದಾಳಿ ನಡೆದಿತ್ತು. ಚಿಕ್ಕಮಗಳೂರಿನ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ನವೆಂಬರ್ 17ರಂದು ಐಟಿ ದಾಳಿ ನಡೆದಿತ್ತು. ಗಾಯತ್ರಿ ಅವರ ಪತಿ ಶಾಂತೇಗೌಡ ಮಾಲೀಕತ್ವದ ಕ್ರಷರ್ ಮೇಲೆಯೂ ದಾಳಿ ನಡೆಸಿದ್ದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಅದಕ್ಕೂ ಕೆಲವು ದಿನಗಳ ಮುನ್ನ ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಬಾಮೈದನ ನಿವಾಸದ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿ ಶೋಧ ಕೈಗೊಂಡಿದ್ದರು.

ಇದನ್ನೂ ಓದಿ: ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಐಟಿ ದಾಳಿ; ವಂಶಿರಾಂ ಬಿಲ್ಡರ್ಸ್ ಸುಬ್ಬಾರೆಡ್ಡಿ ಮನೆಯಲ್ಲಿ ಶೋಧ

ಡಿಸೆಂಬರ್ 6ರಂದು ತೆಲಂಗಾಣ ಹಾಗೂ ಆಂಧ್ರಪ್ರದೇಶಗಳ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ ನಡೆದಿತ್ತು. ರಾಜಕಾರಣಿಗಳು, ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿತ್ತು. ವಂಶಿರಾಂ ಬಿಲ್ಡರ್ಸ್‌ನ ಕಚೇರಿಗಳು ಮತ್ತು ನಿರ್ದೇಶಕರ ಮನೆಯಲ್ಲಿಯೂ ಶೋಧ ನಡೆದಿತ್ತು. ವಿಜಯವಾಡದಲ್ಲಿರುವ ವೈಎಸ್‌ಆರ್‌ಸಿಪಿ ನಾಯಕ ದೇವಿನೇನಿ ಅವಿನಾಶ್ ಅವರ ಮನೆಯಲ್ಲಿಯೂ ಐಟಿ ಅಧಿಕಾರಿಗಳು ಶೋಧ ನಡೆಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:44 am, Fri, 9 December 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್