AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Startup Eco System: ಸ್ಟಾರ್ಟ್​ಅಪ್​ಗಳಿಗೆ ಅತ್ಯುತ್ತಮ ರಾಜ್ಯ ಎಂಬ ಪ್ರಮಾಣಪತ್ರ ಮುಖ್ಯಮಂತ್ರಿಗೆ ಹಸ್ತಾಂತರಿಸಿದ ಸಚಿವ ಅಶ್ವತ್ಥನಾರಾಯಣ್

ಸ್ಟಾರ್ಟ್​ಅಪ್​ಗಳಿಗೆ ನೀಡುವ ಉತ್ತಮ ಎಕೋಸಿಸ್ಟಮ್ ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಸ್ಥಾನ ಪಡೆದಿದ್ದು, ಈ ಸಂಬಂಧವಾಗಿ ಅಗತ್ಯ ಮಾಹಿತಿ ಇಲ್ಲಿದೆ.

Startup Eco System: ಸ್ಟಾರ್ಟ್​ಅಪ್​ಗಳಿಗೆ ಅತ್ಯುತ್ತಮ ರಾಜ್ಯ ಎಂಬ ಪ್ರಮಾಣಪತ್ರ ಮುಖ್ಯಮಂತ್ರಿಗೆ ಹಸ್ತಾಂತರಿಸಿದ ಸಚಿವ ಅಶ್ವತ್ಥನಾರಾಯಣ್
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Jul 05, 2022 | 4:27 PM

Share

ಭಾರತ ಸರ್ಕಾರದ ಅಡಿ ಕಾರ್ಯ ನಿರ್ವಹಿಸುವ ಕೈಗಾರಿಕೆ ಮತ್ತು ಉತ್ತೇಜನ ಇಲಾಖೆಯು ಬಿಡುಗಡೆ ಮಾಡಿರುವ ಸ್ಟಾರ್ಟ್​ ಅಪ್ (Startups)  ಶ್ರೇಯಾಂಕದಲ್ಲಿ ಕರ್ನಾಟಕವು “ಎ” ವರ್ಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅಗ್ಗಳಿಕೆಗೆ ಭಾಜನ ಆಗಿದೆ. ಈ ಸಂಬಂಧವಾಗಿ ಪ್ರಮಾಣಪತ್ರವನ್ನು ಮಾಹಿತಿ ತಂತ್ರಜ್ಞಾನ/ ಜೈವಿಕ ತಂತ್ರಜ್ಞಾನ, ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಹಸ್ತಾಂತರ ಮಾಡಿದರು. ಅಂದಹಾಗೆ ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಇಲಾಖೆಯ ನಿರ್ದೇಶಕರಾದ ಮೀನಾ ನಾಗರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶ್ರೇಯಾಂಕದ ಕುರಿತು ಟ್ವೀಟ್ ಮಾಡಿದ್ದು, ಡಿಪಿಐಐಟಿ ರಾಜ್ಯಗಳ ಸ್ಟಾರ್ಟ್​ಅಪ್ ಶ್ರೇಯಾಂಕ 2021ರ ಬೆಸ್ಟ್​ ಪರ್ಫಾರ್ಮರ್ ಕೆಟಗರಿ ಎ ಬಂದಿರುವುದು ಕರ್ನಾಟಕದ ಪಾಲಿಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಮತ್ತೊಂದು ಸಲ ತನ್ನ ಹೆಸರಾದ ಭಾರತದ ಸ್ಟಾರ್ಟ್​​ಅಪ್​ಗಳ ರಾಜಧಾನಿ ಎಂಬ ಮಾತಿಗೆ ತಕ್ಕಂತೆ ಕೀರ್ತಿಗೆ ಭಾಜನವಾಗಿದೆ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ಇನ್ನೂ ಮುಂದುವರಿದು, ನೀತಿಗಳು, ಯೋಜನೆಗಳು, ಹಣಕಾಸು ಮತ್ತು ಹಣಕಾಸೇತರ ಪ್ರೋತ್ಸಾಹಕಗಳ ಮೂಲಕವಾಗಿ ಉದ್ಯಮಿಗಳಿಗೆ ಸಮಗ್ರವಾದ ಸ್ಟಾರ್ಟ್​ಅಪ್ ಎಕೋಸಿಸ್ಟಮ್ ಅನ್ನು ಒದಗಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.

ಯಾವ ರಾಜ್ಯಗಳು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ?

ಉದ್ಯಮಿಗಳಿಗಾಗಿ ಸ್ಟಾರ್ಟ್-ಅಪ್ ಎಕೋ ಸಿಸ್ಟಮ್ ಅಭಿವೃದ್ಧಿಪಡಿಸುವಲ್ಲಿ ದೆಹಲಿಯ ಎನ್‌ಸಿಟಿಯನ್ನು ಒಳಗೊಂಡಿರುವ ರಾಜ್ಯಗಳ ವಿಭಾಗದಲ್ಲಿ ಗುಜರಾತ್ ಮತ್ತು ಕರ್ನಾಟಕ ಅತ್ಯುತ್ತಮ ರಾಜ್ಯಗಳಾಗಿ ಹೊರಹೊಮ್ಮಿವೆ. ಕೇಂದ್ರಾಡಳಿತ ಪ್ರದೇಶಗಳು ಮತ್ತು ಈಶಾನ್ಯ (NE) ರಾಜ್ಯಗಳಲ್ಲಿ ಮೇಘಾಲಯವು ಉನ್ನತ ಸ್ಥಾನ ಪಡೆದಿದೆ. ಕೇರಳ, ಮಹಾರಾಷ್ಟ್ರ, ಒಡಿಶಾ ಮತ್ತು ತೆಲಂಗಾಣ ರಾಜ್ಯಗಳು ಟಾಪ್ ಪರ್ಫಾರ್ಮರ್ಸ್ ಪ್ರಶಸ್ತಿ ಪಡೆದಿವೆ. ಜಮ್ಮು ಮತ್ತು ಕಾಶ್ಮೀರವು ಕೇಂದ್ರಾಡಳಿತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಟಾಪ್ ಪರ್ಫಾರ್ಮರ್ ಆಗಿ ಹೊರಹೊಮ್ಮಿದೆ.

ರಾಜ್ಯಗಳ ಪೈಕಿ ನಾಯಕರ ವಿಭಾಗದಲ್ಲಿ ಅಸ್ಸಾಂ, ಪಂಜಾಬ್, ತಮಿಳುನಾಡು, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ವಿಜೇತರೆಂದು ಗುರುತಿಸಲಾಗಿದೆ; ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ ಮತ್ತು ಗೋವಾ- ಇವುಗಳು ಕೇಂದ್ರಾಡಳಿತ ಪ್ರದೇಶಗಳು ಮತ್ತು ಈಶಾನ್ಯ ರಾಜ್ಯಗಳಲ್ಲಿ ನಾಯಕರ ಗೌರವವನ್ನು ಪಡೆದುಕೊಂಡಿವೆ. ಛತ್ತೀಸ್‌ಗಢ, ದೆಹಲಿ, ಮಧ್ಯಪ್ರದೇಶ ಮತ್ತು ರಾಜಸ್ಥಾನವನ್ನು ರಾಜ್ಯಗಳನ್ನು ಆಸ್ಪೈರಿಂಗ್ ಲೀಡರ್ಸ್ ಎಂದು ಘೋಷಿಸಲಾಯಿತು. ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ ಮತ್ತು ಡಾಮನ್ ಮತ್ತು ದಿಯು, ಹಿಮಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್, ಪುದುಚೇರಿ ಮತ್ತು ತ್ರಿಪುರಾ ಹೀಗೆ ಕೇಂದ್ರಾಡಳಿತ ಪ್ರದೇಶಗಳು ಮತ್ತು ಈಶಾನ್ಯ ರಾಜ್ಯಗಳಿಂದ ಆಸ್ಪೈರಿಂಗ್ ಲೀಡರ್ ಆಗಿವೆ. ರಾಜ್ಯಗಳ ವರ್ಗದಿಂದ ಆಂಧ್ರಪ್ರದೇಶ ಹಾಗೂ ಬಿಹಾರ ಮತ್ತು ಕೇಂದ್ರಾಡಳಿತ ಪ್ರದೇಶ/ಈಶಾನ್ಯ ರಾಜ್ಯಗಳಿಂದ ಮಿಜೋರಾಂ ಮತ್ತು ಲಡಾಖ್ ಅನ್ನು ಉದಯೋನ್ಮುಖ ಸ್ಟಾರ್ಟ್-ಅಪ್ ಎಕೋಸಿಸ್ಟಮ್ ಅಡಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: Basavaraj Bommai Budget 2022: ಮಹಿಳಾ ಉದ್ದಿಮೆದಾರರು, ಮಹಿಳೆ ನೇತೃತ್ವದ ಸ್ಟಾರ್ಟ್​ಅಪ್​ಗಳಿಗೆ 10 ಲಕ್ಷದ ತನಕ ಸಾಲ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!