AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೂಮ್​ ವಿಡಿಯೋ ಕಾಲ್​ನಲ್ಲಿ 900ಕ್ಕೂ ಹೆಚ್ಚು ಮಂದಿಯನ್ನು ವಜಾ ಮಾಡಿದ ವಿಧಾನಕ್ಕೆ ವಿಶಾಲ್​ ಗರ್ಗ್ ಕ್ಷಮೆ

900ಕ್ಕೂ ಹೆಚ್ಚು ಸಿಬ್ಬಂದಿಯನ್ನು ಉದ್ಯೋಗದಿಂದ ತೆಗೆಯುವ ಬಗ್ಗೆ ಝೂಮ್ ಮೀಟಿಂಗ್​ ಮೂಲಕ ತಿಳಿಸಿದ್ದಕ್ಕೆ ಬೆಟರ್​.ಕಾಮ್ ಸಿಇಒ ವಿಶಾಲ್ ಗರ್ಗ್ ಕ್ಷಮೆ ಯಾಚಿಸುತ್ತಿದ್ದಾರೆ. ಇದು ಸರಿಯಾದ ಕ್ರಮ ಆಗಿರಲಿಲ್ಲ ಎಂದು ಹೇಳಿದ್ದಾರೆ.

ಝೂಮ್​ ವಿಡಿಯೋ ಕಾಲ್​ನಲ್ಲಿ 900ಕ್ಕೂ ಹೆಚ್ಚು ಮಂದಿಯನ್ನು ವಜಾ ಮಾಡಿದ ವಿಧಾನಕ್ಕೆ ವಿಶಾಲ್​ ಗರ್ಗ್ ಕ್ಷಮೆ
ವಿಶಾಲ್ ಗರ್ಗ್
Follow us
TV9 Web
| Updated By: Srinivas Mata

Updated on: Dec 09, 2021 | 2:01 PM

900ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದ ರೀತಿಗೆ Better.comನ ಸಿಇಒ ವಿಶಾಲ್ ಗರ್ಗ್ ಕ್ಷಮೆಯನ್ನು ಯಾಚಿಸಿದ್ದಾರೆ. ಕಳೆದ ವಾರ ಝೂಮ್ ಕರೆ ಮೂಲಕ 900 ಜನರನ್ನು ವಜಾಗೊಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಆ ಕ್ರಮವನ್ನು ಕೈಗೊಂಡ ರೀತಿಗೆ ಕ್ಷಮೆ ಯಾಚಿಸಿದ್ದಾರೆ. ಸಾಫ್ಟ್‌ಬ್ಯಾಂಕ್ ಬೆಂಬಲಿತ ಈ ಕಂಪೆನಿಯು ವಿಡಿಯೋ ಕರೆಯಲ್ಲಿ ಸುಮಾರು ಶೇ 9ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ತೀವ್ರ ಟೀಕೆಗೆ ಒಳಗಾದ ವಿಶಾಲ್ ಗರ್ಗ್, ವಜಾ ಮಾಡುವ ಸುದ್ದಿಯನ್ನು ತಿಳಿಸಿದ ರೀತಿಯಲ್ಲಿ ಪ್ರಮಾದ ಆಗಿದೆ ಎಂದು ಹೇಳಿದ್ದಾರೆ.

“ಈ ಸುದ್ದಿಯನ್ನು ತಿಳಿಸಿದ ವಿಧಾನವು ಕಠಿಣ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ,” ಎಂದು ಗಾರ್ಗ್ ಮಂಗಳವಾರದ ಪತ್ರದಲ್ಲಿ ತಿಳಿಸಿದ್ದಾರೆ. ಅಮೆರಿಕ ಮತ್ತು ಭಾರತದಲ್ಲಿನ ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರದ ಹಿಂದಿನ ಕಾರಣಗಳು ಮಾರುಕಟ್ಟೆ, ಕಾರ್ಯಕ್ಷಮತೆ ಮತ್ತು ಉತ್ಪಾದಕತೆ ಎಂದು ಅವರು ಉಲ್ಲೇಖಿಸಿದ್ದಾರೆ.

Better.com ಮೇ ತಿಂಗಳಲ್ಲಿ ಬ್ಲಾಂಕ್-ಚೆಕ್ ಫರ್ಮ್ ಅರೋರಾ ಅಕ್ವಿಸಿಷನ್ ಕಾರ್ಪ್‌ನೊಂದಿಗಿನ ವಿಲೀನದ ಮೂಲಕ ಐಪಿಒಗೆ ಹೋಗುವುದಾಗಿ ಹೇಳಿತು. ಈ ಮೂಲಕ ಮೌಲ್ಯವು 7.7 ಶತಕೋಟಿ ಡಾಲರ್ ಆಗಿದೆ. ಈ ತಿಂಗಳ ಆರಂಭದಲ್ಲಿ, ಸಾಫ್ಟ್​ಬ್ಯಾಂಕ್​ ನೀಡಿದ ಮಾತಿನಂತೆಯೇ 1.5 ಬಿಲಿಯನ್​ ಡಾಲರ್​ನ ಅರ್ಧದಷ್ಟನ್ನು Better.comಗೆ ಒದಗಿಸಲು ನಿಯಮಗಳನ್ನು ತಿದ್ದುಪಡಿ ಮಾಡಲಾಯಿತು. ಬೇರೆ ಕಂಪೆನಿಯ ಜತೆಗೆ ವ್ಯವಹಾರ ಮುಗಿಯುವ ತನಕ ಕಾಯದೆ ತಕ್ಷಣವೇ ಒದಗಿಸುವುದಾಗಿ ಹೇಳಿದೆ. Better.com 2016ರಲ್ಲಿ ಸ್ಥಾಪನೆಯಾಯಿತು. ನ್ಯೂಯಾರ್ಕ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಮನೆಮಾಲೀಕರಿಗೆ ಅಡಮಾನ ಮತ್ತು ವಿಮಾ ಉತ್ಪನ್ನಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Job Loss: ಝೂಮ್​ ಮೀಟಿಂಗ್​ನಲ್ಲೇ 900ಕ್ಕೂ ಹೆಚ್ಚು ಜನರ ಕೆಲಸ ಹೋಗುವ ಸುದ್ದಿ ಹೇಳಿದ ಸಿಇಒ; ಹೇಗಿದೆ ಉದ್ಯೋಗ ಮಾರುಕಟ್ಟೆ?

ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ