AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೂಮ್​ ವಿಡಿಯೋ ಕಾಲ್​ನಲ್ಲಿ 900ಕ್ಕೂ ಹೆಚ್ಚು ಮಂದಿಯನ್ನು ವಜಾ ಮಾಡಿದ ವಿಧಾನಕ್ಕೆ ವಿಶಾಲ್​ ಗರ್ಗ್ ಕ್ಷಮೆ

900ಕ್ಕೂ ಹೆಚ್ಚು ಸಿಬ್ಬಂದಿಯನ್ನು ಉದ್ಯೋಗದಿಂದ ತೆಗೆಯುವ ಬಗ್ಗೆ ಝೂಮ್ ಮೀಟಿಂಗ್​ ಮೂಲಕ ತಿಳಿಸಿದ್ದಕ್ಕೆ ಬೆಟರ್​.ಕಾಮ್ ಸಿಇಒ ವಿಶಾಲ್ ಗರ್ಗ್ ಕ್ಷಮೆ ಯಾಚಿಸುತ್ತಿದ್ದಾರೆ. ಇದು ಸರಿಯಾದ ಕ್ರಮ ಆಗಿರಲಿಲ್ಲ ಎಂದು ಹೇಳಿದ್ದಾರೆ.

ಝೂಮ್​ ವಿಡಿಯೋ ಕಾಲ್​ನಲ್ಲಿ 900ಕ್ಕೂ ಹೆಚ್ಚು ಮಂದಿಯನ್ನು ವಜಾ ಮಾಡಿದ ವಿಧಾನಕ್ಕೆ ವಿಶಾಲ್​ ಗರ್ಗ್ ಕ್ಷಮೆ
ವಿಶಾಲ್ ಗರ್ಗ್
TV9 Web
| Edited By: |

Updated on: Dec 09, 2021 | 2:01 PM

Share

900ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಿದ ರೀತಿಗೆ Better.comನ ಸಿಇಒ ವಿಶಾಲ್ ಗರ್ಗ್ ಕ್ಷಮೆಯನ್ನು ಯಾಚಿಸಿದ್ದಾರೆ. ಕಳೆದ ವಾರ ಝೂಮ್ ಕರೆ ಮೂಲಕ 900 ಜನರನ್ನು ವಜಾಗೊಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಆ ಕ್ರಮವನ್ನು ಕೈಗೊಂಡ ರೀತಿಗೆ ಕ್ಷಮೆ ಯಾಚಿಸಿದ್ದಾರೆ. ಸಾಫ್ಟ್‌ಬ್ಯಾಂಕ್ ಬೆಂಬಲಿತ ಈ ಕಂಪೆನಿಯು ವಿಡಿಯೋ ಕರೆಯಲ್ಲಿ ಸುಮಾರು ಶೇ 9ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ತೀವ್ರ ಟೀಕೆಗೆ ಒಳಗಾದ ವಿಶಾಲ್ ಗರ್ಗ್, ವಜಾ ಮಾಡುವ ಸುದ್ದಿಯನ್ನು ತಿಳಿಸಿದ ರೀತಿಯಲ್ಲಿ ಪ್ರಮಾದ ಆಗಿದೆ ಎಂದು ಹೇಳಿದ್ದಾರೆ.

“ಈ ಸುದ್ದಿಯನ್ನು ತಿಳಿಸಿದ ವಿಧಾನವು ಕಠಿಣ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ,” ಎಂದು ಗಾರ್ಗ್ ಮಂಗಳವಾರದ ಪತ್ರದಲ್ಲಿ ತಿಳಿಸಿದ್ದಾರೆ. ಅಮೆರಿಕ ಮತ್ತು ಭಾರತದಲ್ಲಿನ ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರದ ಹಿಂದಿನ ಕಾರಣಗಳು ಮಾರುಕಟ್ಟೆ, ಕಾರ್ಯಕ್ಷಮತೆ ಮತ್ತು ಉತ್ಪಾದಕತೆ ಎಂದು ಅವರು ಉಲ್ಲೇಖಿಸಿದ್ದಾರೆ.

Better.com ಮೇ ತಿಂಗಳಲ್ಲಿ ಬ್ಲಾಂಕ್-ಚೆಕ್ ಫರ್ಮ್ ಅರೋರಾ ಅಕ್ವಿಸಿಷನ್ ಕಾರ್ಪ್‌ನೊಂದಿಗಿನ ವಿಲೀನದ ಮೂಲಕ ಐಪಿಒಗೆ ಹೋಗುವುದಾಗಿ ಹೇಳಿತು. ಈ ಮೂಲಕ ಮೌಲ್ಯವು 7.7 ಶತಕೋಟಿ ಡಾಲರ್ ಆಗಿದೆ. ಈ ತಿಂಗಳ ಆರಂಭದಲ್ಲಿ, ಸಾಫ್ಟ್​ಬ್ಯಾಂಕ್​ ನೀಡಿದ ಮಾತಿನಂತೆಯೇ 1.5 ಬಿಲಿಯನ್​ ಡಾಲರ್​ನ ಅರ್ಧದಷ್ಟನ್ನು Better.comಗೆ ಒದಗಿಸಲು ನಿಯಮಗಳನ್ನು ತಿದ್ದುಪಡಿ ಮಾಡಲಾಯಿತು. ಬೇರೆ ಕಂಪೆನಿಯ ಜತೆಗೆ ವ್ಯವಹಾರ ಮುಗಿಯುವ ತನಕ ಕಾಯದೆ ತಕ್ಷಣವೇ ಒದಗಿಸುವುದಾಗಿ ಹೇಳಿದೆ. Better.com 2016ರಲ್ಲಿ ಸ್ಥಾಪನೆಯಾಯಿತು. ನ್ಯೂಯಾರ್ಕ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಮನೆಮಾಲೀಕರಿಗೆ ಅಡಮಾನ ಮತ್ತು ವಿಮಾ ಉತ್ಪನ್ನಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Job Loss: ಝೂಮ್​ ಮೀಟಿಂಗ್​ನಲ್ಲೇ 900ಕ್ಕೂ ಹೆಚ್ಚು ಜನರ ಕೆಲಸ ಹೋಗುವ ಸುದ್ದಿ ಹೇಳಿದ ಸಿಇಒ; ಹೇಗಿದೆ ಉದ್ಯೋಗ ಮಾರುಕಟ್ಟೆ?

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ