AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Patanjali: ಎಫ್​ಎಂಸಿಜಿ ಮಾರುಕಟ್ಟೆಯ ಕಿಂಗ್ ಮಾತ್ರವಲ್ಲ, ಇತರ ಕ್ಷೇತ್ರಗಳಲ್ಲೂ ಮಿಂಚುತ್ತಿದೆ ಪತಂಜಲಿ

Patanjali Beyond FMCG: ಪತಂಜಲಿ ಆರಂಭದಲ್ಲಿ ಆಯುರ್ವೇದ ಉತ್ಪನ್ನಗಳ ಮೂಲಕ ಮಾರುಕಟ್ಟೆ ಪ್ರವೇಶಿಸಿತು. ಇಂದು, FMCG ಉತ್ಪನ್ನಗಳನ್ನು ಮೀರಿ, ಶಿಕ್ಷಣ, ಕೃಷಿ ಮತ್ತು ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಆಯುರ್ವೇದ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು, ಸಾವಯವ ಕೃಷಿಯನ್ನು ಉತ್ತೇಜಿಸುವುದು ಮತ್ತು ಸ್ವದೇಶಿ ಉತ್ಪಾದನೆಯನ್ನು ಬೆಂಬಲಿಸುವುದು ಪತಂಜಲಿಯ ಮುಖ್ಯ ಉದ್ದೇಶಗಳಾಗಿವೆ. ಇದು ಭಾರತದ ಸಮಗ್ರ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ಒಂದು ಸಂಸ್ಥೆಯಾಗಿದೆ.

Patanjali: ಎಫ್​ಎಂಸಿಜಿ ಮಾರುಕಟ್ಟೆಯ ಕಿಂಗ್ ಮಾತ್ರವಲ್ಲ, ಇತರ ಕ್ಷೇತ್ರಗಳಲ್ಲೂ ಮಿಂಚುತ್ತಿದೆ ಪತಂಜಲಿ
ಪತಂಜಲಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 24, 2025 | 3:58 PM

Share

ಭಾರತದಲ್ಲಿ ಸ್ವದೇಶಿ ಮತ್ತು ಆಯುರ್ವೇದದ ಬಗ್ಗೆ ಮಾತು ಬಂದಾಗಲೆಲ್ಲಾ ಬಾಬಾ ರಾಮದೇವ್ ಹಾಗೂ ಅವರ ಪತಂಜಲಿ ಸಂಸ್ಥೆಯ (Patanjali) ಹೆಸರು ಮೊದಲು ಬರುತ್ತದೆ. ಆದರೆ ಪತಂಜಲಿ ಇನ್ನು ಮುಂದೆ ಟೂತ್‌ಪೇಸ್ಟ್, ಶಾಂಪೂ ಮತ್ತು FMCG ಉತ್ಪನ್ನಗಳಿಗೆ ಮಾತ್ರ ಸೀಮಿತವಾಗಿಲ್ಲ. ಶಿಕ್ಷಣ, ಆರೋಗ್ಯ, ಕೃಷಿ, ಪರಿಸರ ಹೀಗೆ ಅದರ ಪ್ರಭಾವ ಹರಡಿದೆ.

ಆಯುರ್ವೇದದಿಂದ ಹಿಡಿದು ಸ್ವಾವಲಂಬನೆಯವರೆಗೆ

ಪತಂಜಲಿ ಮೊದಲಿಗೆ ಆಯುರ್ವೇದ ಉತ್ಪನ್ನಗಳೊಂದಿಗೆ ಮಾರುಕಟ್ಟೆಯಲ್ಲಿ ಕಾಲೂರಿತು. ಕ್ರಮೇಣ, ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ಮಾರ್ಕೆಟಿಂಗ್‌ನೊಂದಿಗೆ ಸಂಯೋಜಿಸುವ ಮೂಲಕ FMCG ವಲಯದಲ್ಲಿ ಒಂದು ವಿಶಿಷ್ಟ ಗುರುತನ್ನು ಸೃಷ್ಟಿಸಿತು. ಆದರೆ ಈಗ ಕಂಪನಿಯು ಕೇವಲ ಲಾಭವನ್ನು ಆಧರಿಸಿರದೆ ಸಮಾಜದ ಪ್ರತಿಯೊಂದು ವರ್ಗಕ್ಕೂ ಪ್ರಯೋಜನವನ್ನು ನೀಡುವ ಪರಂಪರೆಯ ಮೇಲೆ ಕಣ್ಣಿಟ್ಟಿದೆ.

ಶಿಕ್ಷಣ ಮತ್ತು ಸಂಸ್ಕೃತಿಯ ಸಂಗಮ

ಪತಂಜಲಿ ಯೋಗಪೀಠ ಮತ್ತು ಅದರ ಅಡಿಯ ಶಿಕ್ಷಣ ಸಂಸ್ಥೆಗಳಲ್ಲಿ ಆಧುನಿಕ ವಿಜ್ಞಾನ ಮತ್ತು ಸಾಂಪ್ರದಾಯಿಕ ಭಾರತೀಯ ಜ್ಞಾನವನ್ನು ಒಟ್ಟಿಗೆ ಕಲಿಸಲಾಗುತ್ತದೆ. ಪತಂಜಲಿ ಗುರುಕುಲ, ಪತಂಜಲಿ ವಿಶ್ವವಿದ್ಯಾಲಯ ಮತ್ತು ವೇದ-ಪಾಠಶಾಲೆಗಳು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪದವಿಗಳನ್ನು ಮಾತ್ರವಲ್ಲದೆ ಸಂಸ್ಕೃತಿ, ಮೌಲ್ಯಗಳು ಮತ್ತು ಸೇವಾ ಭಾವನೆಯನ್ನು ಸಹ ಕಲಿಸಲಾಗುತ್ತಿದೆ.

ಇದನ್ನೂ ಓದಿ: Palm Seeds Deal: ಮಲೇಷ್ಯಾ ಜೊತೆ ಪತಂಜಲಿ ಒಪ್ಪಂದ; ದೇಶಕ್ಕೆ ಲಕ್ಷಾಂತರ ಕೋಟಿ ರೂ ಉಳಿತಾಯ

ಆಯುರ್ವೇದ ಆರೋಗ್ಯ ವ್ಯವಸ್ಥೆಯ ವಿಸ್ತರಣೆ

ಪತಂಜಲಿ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ದೇಶಾದ್ಯಂತ ರೋಗಿಗಳಿಗೆ ಚಿಕಿತ್ಸೆ ನೀಡುವುದಲ್ಲದೆ, ಆಧುನಿಕ ವಿಜ್ಞಾನ ಮತ್ತು ಆಯುರ್ವೇದದ ನಡುವೆ ಸೇತುವೆಯಾಗಿಯೂ ಕಾರ್ಯನಿರ್ವಹಿಸುತ್ತಿದೆ. ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳ ಜೊತೆಗೆ ಹೊಸ ಸಂಶೋಧನೆಗಳನ್ನು ಸಹ ಇಲ್ಲಿ ಉತ್ತೇಜಿಸಲಾಗುತ್ತಿದೆ.

ರೈತರಿಗೆ ಬದಲಾವಣೆಯ ಹಾದಿ

ಕೃಷಿ ಕ್ಷೇತ್ರದಲ್ಲಿ ಪತಂಜಲಿ ಸಂಸ್ಥೆಯು ಸಾವಯವ ಕೃಷಿಯನ್ನು ಉತ್ತೇಜಿಸಿದೆ. ರೈತರಿಗೆ ರಾಸಾಯನಿಕ ಮುಕ್ತ ಕೃಷಿಯಲ್ಲಿ ತರಬೇತಿ ನೀಡುವುದು, ಸಾವಯವ ಗೊಬ್ಬರಗಳು ಮತ್ತು ಬೀಜಗಳನ್ನು ಒದಗಿಸುವುದು ಮತ್ತು ಅವರ ಉತ್ಪನ್ನಗಳಿಗೆ ಮಾರುಕಟ್ಟೆಯನ್ನು ತಲುಪಲು ಸಹಾಯ ಮಾಡುವುದು ಇದರ ಮುಖ್ಯ ಉದ್ದೇಶಗಳಾಗಿವೆ. ಇದು ಲಕ್ಷಾಂತರ ರೈತರ ಆದಾಯವನ್ನು ಸುಧಾರಿಸಿದೆ ಎಂದು ಕಂಪನಿ ಹೇಳಿಕೊಂಡಿದೆ.

ಇದನ್ನೂ ಓದಿ: ರೀಟೇಲ್ ಮಾತ್ರವಲ್ಲ, ಹೋಲ್​​ಸೇಲ್ ಬ್ಯುಸಿನೆಸ್​​ನಲ್ಲೂ ಇವೆ ಈ ಪತಂಜಲಿ ಉತ್ಪನ್ನಗಳು

ಪರಿಸರ ಮತ್ತು ಸ್ವಾವಲಂಬಿ ಭಾರತದ ಕಡೆಗೆ

ಪತಂಜಲಿ ತನ್ನ ಘಟಕಗಳಲ್ಲಿ ಸುಸ್ಥಿರತೆ ಮತ್ತು ಪರಿಸರ ಸಂರಕ್ಷಣೆಗೆ ಮುತುವರ್ಜಿ ತೋರುತ್ತದೆ. ಸ್ವದೇಶಿ ಆಂದೋಲನ ಉತ್ತೇಜಿಸಲು ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಸ್ಥಳೀಯ ಉತ್ಪಾದನೆಗೆ ಒತ್ತು ನೀಡಲಾಗಿದೆ.

ಪತಂಜಲಿ ಇನ್ನು ಮುಂದೆ ಕೇವಲ FMCG ಬ್ರಾಂಡ್ ಅಲ್ಲ, ಬದಲಾಗಿ ಅದು ಒಂದು ಸೈದ್ಧಾಂತಿಕ ಚಳುವಳಿಯ ರೂಪ ಪಡೆದುಕೊಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹಿಡಿತವನ್ನು ಬಲಪಡಿಸುವುದು ಮಾತ್ರವಲ್ಲದೆ ಪ್ರತಿಯೊಬ್ಬ ಭಾರತೀಯನ ಜೀವನವನ್ನು ಸುಧಾರಿಸುವುದು ಇದರ ಗುರಿಯಾಗಿದೆ. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ ಮತ್ತು ಪರಿಸರದಂತಹ ಕ್ಷೇತ್ರಗಳಲ್ಲಿ ಪತಂಜಲಿಯ ಕ್ರಿಯಾಶೀಲತೆ ನೋಡಿದರೆ, ಅದು ಒಂದು ವ್ಯವಹಾರ ಮಾತ್ರವಲ್ಲ, ಒಂದು ಧ್ಯೇಯವಾಗಿ ನಿಂತಿರುವುದು ಸಾಬೀತಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ