AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ?

ರೈತರಿಗೆ ಬೆಳೆ, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ವೈಜ್ಞಾನಿಕ ಸಲಹೆ ಹಾಗೂ ಮಾಹಿತಿ ನೀಡುವುದಕ್ಕಾಗಿ ಬಜೆಟ್​​ನಲ್ಲಿ ಮಹತ್ವದ ಉಪಕ್ರಮವೊಂದನ್ನು ಘೋಷಣೆ ಮಾಡಲಾಗಿದೆ.‘ಭಾರತ್ ವಿಸ್ತಾರ್’ ಎಂಬ ಕೃತಕ ಬುದ್ಧಿಮತ್ತೆ ಟೂಲ್ ಅನ್ನು ಹಣಕಾಸು ಸಚಿವರು ಬಜೆಟ್​​ನಲ್ಲಿ ಘೋಷಿಸಿದ್ದು, ಇದು ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡಿ ರೈತರ ಆದಾಯ ಹೆಚ್ಚಿಸಲು ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ?
ಸಾಂದರ್ಭಿಕ ಚಿತ್ರ
Ganapathi Sharma
|

Updated on: Feb 01, 2026 | 2:29 PM

Share

ನವದೆಹಲಿ, ಫೆಬ್ರವರಿ 1: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) ‘ಭಾರತ್ ವಿಸ್ತಾರ್’ (Bharat Vistar) ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದನ್ನು ಅಗ್ರಿಸ್ಟ್ಯಾಕ್ ಮತ್ತು ICAR ನಿಂದ ಪ್ರಮಾಣೀಕೃತ ಡೇಟಾವನ್ನು ಸಂಯೋಜಿಸುವ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ. ಕೃಷಿ ನಿರ್ಧಾರಗಳನ್ನು ಹೆಚ್ಚು ನಿಖರ, ವೇಗ ಮತ್ತು ಕಡಿಮೆ ಸಮಸ್ಯೆಗಳು ಇರುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ.

ಭಾರತ್ ವಿಸ್ತಾರ್ ಎಂದರೇನು? ಈ ಎಐ ಟೂಲ್ ಹೇಗೆ ಕೆಲಸ ಮಾಡುತ್ತೆ?

ಭಾರತ್ ವಿಸ್ತಾರ್, ಇದರ ವಿಸ್ತರಿತ ರೂಪ ವರ್ಚುವಲಿ ಇಂಟಿಗ್ರೇಟೆಡ್ ಸಿಸ್ಟಮ್ ಟು ಆಕ್ಸೆಸ್ ಅಗ್ರಿಕಲ್ಚರಲ್ ರಿಸೋರ್ಸಸ್ (VISTAAR) ಪ್ಲಾಟ್‌ಫಾರ್ಮ್. ಇದು ಕೃಷಿ-ಸ್ಟ್ಯಾಕ್ ಪೋರ್ಟಲ್ ಮತ್ತು ICAR ಅನುಮೋದಿತ ಕೃಷಿ ಪದ್ಧತಿಗಳನ್ನು ಎಐ ವ್ಯವಸ್ಥೆಗಳೊಂದಿಗೆ ಸಂಯೋಜಿಸುತ್ತದೆ. ರೈತರಿಗೆ ಒಂದೇ ಕಡೆ ವಿಶ್ವಾಸಾರ್ಹ, ವೈಜ್ಞಾನಿಕ ಸಲಹೆಯನ್ನು ಒದಗಿಸುವುದು ಇದರ ಗುರಿಯಾಗಿದೆ. ಇದು ಡೇಟಾ ಮತ್ತು ಸಂಶೋಧನೆಯ ಆಧಾರದ ಮೇಲೆ ಕೃಷಿ ಚಟುವಟಿಕೆಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.

ಭಾರತ್ ವಿಸ್ತಾರ್ ಎಐ ಟೂಲ್ ಬೆಳೆ ಮಾದರಿಗಳು, ಮಣ್ಣಿನ ಗುಣಮಟ್ಟ, ಹವಾಮಾನ ಪ್ರವೃತ್ತಿಗಳು ಮತ್ತು ಇತರ ಕೃಷಿ ದತ್ತಾಂಶಗಳನ್ನು ವಿಶ್ಲೇಷಿಸಿ ರೈತರಿಗೆ ಸಲಹೆ ಅಥವಾ ಶಿಫಾರಸುಗಳನ್ನು ಮಾಡುತ್ತದೆ. ಸರ್ಕಾರದ ಪ್ರಕಾರ, ಇದು ರೈತರಿಗೆ ಸರಳ ಮತ್ತು ಪ್ರಾಯೋಗಿಕ ರೀತಿಯಲ್ಲಿ ವೈಜ್ಞಾನಿಕ ಮಾಹಿತಿಯನ್ನು ತಲುಪಿಸುತ್ತದೆ. ಕೃಷಿ ಚಟುವಟಿಕೆಗಳಲ್ಲಿನ ನಷ್ಟವನ್ನು ಕಡಿಮೆ ಮಾಡುವುದು ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ವೇದಿಕೆಯ ಗುರಿಯಾಗಿದೆ. ಸರಿಯಾದ ಸಮಯದಲ್ಲಿ ನಿಖರವಾದ ಮಾಹಿತಿಯನ್ನು ಒದಗಿಸುವುದು ವೆಚ್ಚಗಳನ್ನು ನಿಯಂತ್ರಿಸಲು ಮತ್ತು ಉತ್ಪಾದನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಿಸಾನ್ ಕಾಲ್ ಸೆಂಟರ್ ಮತ್ತು ಸರ್ಕಾರಿ ಯೋಜನೆಗಳಿಗೆ ನೇರ ಸಂಪರ್ಕ

ಭಾರತ್ ವಿಸ್ತಾರ್ ಟೂಲ್ ಕಿಸಾನ್ ಕಾಲ್ ಸೆಂಟರ್ ಸೇವೆಗಳೊಂದಿಗೆ ಲಿಂಕ್ ಆಗಲಿದೆ. ಇದರಿಂದಾಗಿ ರೈತರು ನೇರವಾಗಿ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಮತ್ತು ಸಮಸ್ಯೆಗಳಿಗೆ ಪರಿಹಾರಗಳನ್ನು ಪಡೆಯಲು ಸಾಧ್ಯವಾಗಲಿದೆ. ರಿಯಲ್ ಟೈಂ ಹವಾಮಾನ ಮುನ್ಸೂಚನೆಗಳನ್ನು ಲಭ್ಯವಾಗುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ: Budget 2026: 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿದ ವಿತ್ತ ಸಚಿವೆ; ಆಯವ್ಯಯ ಮಂಡನೆಯಲ್ಲೂ ದಾಖಲೆ

ಪ್ರಸ್ತುತ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶಗಳಲ್ಲಿ ಸುಮಾರು 4,000 ಮಂದಿ ಆಧಾರಿತ ಟೆಲಿಗ್ರಾಮ್ ಚಾಟ್‌ಬಾಟ್‌ನಿಂದ ಕೃಷಿ ಸಲಹೆಯನ್ನು ಪಡೆಯುತ್ತಿದ್ದಾರೆ. ಡಿಜಿಟಲ್ ಗ್ರೀನ್ ಭಾಷಿಣಿ ತಂತ್ರಜ್ಞಾನವನ್ನು ಬಳಸಿಕೊಂಡು ಈ ಚಾಟ್‌ಬಾಟ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಹಿಂದಿ, ತೆಲುಗು ಮತ್ತು ಇಂಗ್ಲಿಷ್‌ನಲ್ಲಿ ಪ್ರತಿಕ್ರಿಯಿಸುತ್ತದೆ. ಇದೀಗ ಭಾರತ್ ವಿಸ್ತಾರ್ ಎಐ ಟೂಲ್​​ನೊಂದಿಗೆ ದೇಶದ ಎಲ್ಲ ಭಾಗದ ರೈತರಿಗೆ ಅವರದೇ ಭಾಷೆಗಳಲ್ಲಿ ಸಲಹೆ ಸೂಚನೆ ಪಡೆಯಬಹುದಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ