AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಮಾಲಾ ಯೋಜನೆಯಡಿ ಅ. 31ರವರೆಗೆ 18,714 ಕಿಮೀ ಹೆದ್ದಾರಿಗಳ ನಿರ್ಮಾಣ: ಸರ್ಕಾರದಿಂದ ಮಾಹಿತಿ

Bharatmala Pariyojana implementation: ಭಾರತ್​ಮಾಲಾ ಪರಿಯೋಜನೆ ಅಡಿಯಲ್ಲಿ ಅ. 31ರವರೆಗೆ 18,714 ಕಿಮೀ ರಾಹೆ ನಿರ್ಮಾಣ ಆಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. 2017ರಲ್ಲಿ ಆರಂಭವಾದ ಭಾರತ್​ಮಾಲಾ ಯೋಜನೆಯಲ್ಲಿ ವಿವಿಧ ಪ್ರದೇಶಗಳ ನಡುವೆ ಸಂಪರ್ಕಜಾಲ ಗಟ್ಟಿಗೊಳಿಸುವ ಗುರಿ ಇದೆ. ಕರಾವಳಿ ರಾಜ್ಯಗಳಲ್ಲಿನ ವಿವಿಧ ಬಂದರುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಜಾಲವನ್ನೂ ಗಟ್ಟಿಗೊಳಿಸಲಾಗುತ್ತಿದೆ.

ಭಾರತ್ ಮಾಲಾ ಯೋಜನೆಯಡಿ ಅ. 31ರವರೆಗೆ 18,714 ಕಿಮೀ ಹೆದ್ದಾರಿಗಳ ನಿರ್ಮಾಣ: ಸರ್ಕಾರದಿಂದ ಮಾಹಿತಿ
ಹೆದ್ದಾರಿ ನಿರ್ಮಾಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 19, 2024 | 2:13 PM

Share

ನವದೆಹಲಿ, ಡಿಸೆಂಬರ್ 19: ಭಾರತಮಾಲ ಪರಿಯೋಜನಾ ಸ್ಕೀಮ್ ಅಡಿಯಲ್ಲಿ ಮಾಡಲಾಗುತ್ತಿರುವ 26,425 ಕಿಮೀವರೆಗಿನ ಹೆದ್ದಾರಿ ಪೈಕಿ ಅಕ್ಟೋಬರ್ 31ರವರೆಗೆ 18,714 ಕಿಮೀಯಷ್ಟು ಹೆದ್ದಾರಿಯ ನಿರ್ಮಾಣವಾಗಿದೆ. ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಮಾಹಿತಿಯನ್ನು ಸಂಸತ್ತಿಗೆ ನೀಡಿದ್ದಾರೆ. 2024ರ ಅಕ್ಟೋಬರ್ 30ರವರೆಗೆ ಭಾರತ್​ಮಾಲ ಪರಿಯೋಜನೆ ಅಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 4.72 ಲಕ್ಷ ಕೋಟಿ ರೂ ಹೂಡಿಕೆ ಮಾಡಿದೆ ಎಂದು ನಿತಿನ್ ಗಡ್ಕರಿ ಅವರು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

2017ರಲ್ಲಿ ಆರಂಭವಾದ ಭಾರತ್​ಮಾಲ ಪರಿಯೋಜನೆಯು ದೇಶದಲ್ಲಿ ವಿವಿಧ ಪ್ರದೇಶಗಳ ನಡುವಿನ ಸಂಪರ್ಕತೆ ಹೆಚ್ಚಿಸಲು ಮತ್ತು ಸಾಗಣೆ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ. ಈ ಯೋಜನೆ ಅಡಿ 34,800 ಕಿಮೀಯಷ್ಟು ರಸ್ತೆ ನಿರ್ಮಾಣ ಮಾಡುವ ಕಾಮಗಾರಿಗಳಿಗೆ ಅನುಮೋದನೆ ಇದೆ. ನಿತಿನ್ ಗಡ್ಕರಿ ನೀಡಿದ ಮಾಹಿತಿ ಪ್ರಕಾರ ಬಂದರು ಮತ್ತು ಕರಾವಳಿ ಸಂಪರ್ಕ ರಸ್ತೆಗಳ ವಿಭಾಗದಲ್ಲಿ 18 ಪ್ರಾಜೆಕ್ಟ್​ಗಳು ಚಾಲನೆಯಲ್ಲಿದ್ದು, ಒಟ್ಟಾರೆ 424 ಕಿಮೀ ಉದ್ದದ ರಸ್ತೆಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ಈ ಪೈಕಿ ಇಲ್ಲಿಯವರೆಗೆ 189 ಕಿಮೀಯಷ್ಟು ರಸ್ತೆ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ಏ. 1ರಿಂದ ಡಿ. 17ರವರೆಗೆ ನೇರ ತೆರಿಗೆ ಸಂಗ್ರಹ 19,21,508 ಕೋಟಿ ರೂ

ಈಶಾನ್ಯ ಭಾರತದ ಭಾಗದಲ್ಲಿ 81,540 ಕೋಟಿ ರೂ ವೆಚ್ಚದ 190 ಯೋಜನೆಗಳಲ್ಲಿ 3,856 ಕಿಮೀಯಷ್ಟು ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 2024-25ರ ಸಾಲಿನಲ್ಲಿ ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆಂದು 19,338 ಕೋಟಿ ರೂ ಮೀಸಲಿಡಲಾಗಿದೆ. ಈಗಾಗಲೇ ಆರಂಭವಾಗಿರುವ ಎಲ್ಲಾ ಯೋಜನೆಗಳ ಕಾಮಗಾರಿಗಳು 2028ರ ಸೆಪ್ಟಂಬರ್​ನೊಳಗೆ ಪೂರ್ಣಗೊಳ್ಳಲು ಯೋಜಿಸಲಾಗಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ,. ಗುಜರಾತ್, ಒಡಿಶಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮೊದಲಾದ ಕರಾವಳಿ ರಾಜ್ಯಗಳಲ್ಲಿನ ದೊಡ್ಡ ಬಂದರು, ಸಣ್ಣ ಬಂದರು ಸೇರಿದಂತೆ ವಿವಿಧ ಪೋರ್ಟ್​ಗಳಿಗೆ ಸಂಪರ್ಕ ವ್ಯವಸ್ಥೆ ಬಲಪಡಿಸಲು ಭಾರತ್​ಮಾಲ ಯೋಜನೆ ಅಡಿ ಹಲವಾರು ಕಾಮಗಾರಿಗಳನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್‌ ಸಂಪರ್ಕಕ್ಕೆ ಮತ್ತೊಮ್ಮೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಈ ಯೋಜನೆಗಳನ್ನು ಸಮರ್ಪಕವಾಗಿ ಮತ್ತು ವೇಗವಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳ ಮಧ್ಯೆ ನಿಕಟ ಸಮನ್ವಯ ನಡೆಯುತ್ತಿದೆ. ವಿವಿಧ ಹಂತಗಳಲ್ಲಿ ಕಾಮಗಾರಿಗಳ ಪರಿಶೀಲನೆ, ಪರಾಮರ್ಶೆ ನಡೆಯುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ