AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharti Airtel: ಭಾರ್ತಿ ಏರ್​ಟೆಲ್​ ಎರಡನೇ ತ್ರೈಮಾಸಿಕ ಲಾಭ ರೂ. 1134 ಕೋಟಿ

ಟೆಲಿಕಾಂ ಕಂಪೆನಿ ಭಾರ್ತಿ ಏರ್​ಟೆಲ್ ಜುಲೈನಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 1134 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ. ಹಣಕಾಸು ಫಲಿತಾಂಶದ ಇನ್ನಷ್ಟು ವಿವರ ಈ ಲೇಖನದಲ್ಲಿದೆ.

Bharti Airtel: ಭಾರ್ತಿ ಏರ್​ಟೆಲ್​ ಎರಡನೇ ತ್ರೈಮಾಸಿಕ ಲಾಭ ರೂ. 1134 ಕೋಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 02, 2021 | 6:12 PM

Share

ಟೆಲಿಕಾಂ ಸೇವೆ ಒದಗಿಸುವ ಭಾರ್ತಿ ಏರ್​ಟೆಲ್ ನವೆಂಬರ್ 2ನೇ ತಾರೀಕಿನ ಮಂಗಳವಾರದಂದು ಜುಲೈನಿಂದ ಸೆಪ್ಟೆಂಬರ್ ತ್ರೈಮಾಸಿಕದ ಹಣಕಾಸು ಫಲಿತಾಂಶವನ್ನು ಪ್ರಕಟಿಸಿದೆ. ತೆರಿಗೆ ನಂತರದ ಲಾಭವು 1,134 ಕೋಟಿ ರೂಪಾಯಿ ಬಂದಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಭಾರ್ತಿ ಏರ್​ಟೆಲ್ 763 ಕೋಟಿ ರೂಪಾಯಿ ನಷ್ಟವಾಗಿತ್ತು. ತ್ರೈಮಾಸಿಕ ಆಧಾರದಲ್ಲಿ ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ತೆರಿಗೆ ನಂತರದ ಲಾಭವು ಶೇ 300ರಷ್ಟು ಹೆಚ್ಚಾಗಿದೆ.

ಹಿಂದಿನ ತ್ರೈಮಾಸಿಕದಲ್ಲಿ ರೂ. 284 ಕೋಟಿ ಲಾಭ ವರದಿಯಾಗಿತ್ತು. ಕಂಪೆನಿಯು ವರ್ಷದಿಂದ ವರ್ಷಕ್ಕೆ ಕ್ರೋಡೀಕೃತ ಲಾಭವು ಶೇ 13ರಷ್ಟು ಹೆಚ್ಚಾಗಿ, ರೂ. 25,060 ಕೋಟಿಯಿಂದ ರೂ. 28,326 ಕೋಟಿಗೆ ತಲುಪಿದೆ. ಕಳೆದ ತ್ರೈಮಾಸಿಕಕ್ಕೆ ಹೋಲಿಸಿದಲ್ಲಿ 26,854 ಕೋಟಿ ರೂಪಾಯಿಯಿಂದ ಶೇ 5ರಷ್ಟು ಹೆಚ್ಚಳವಾಗಿದೆ.

ಪ್ರಸಕ್ತ ಹಣಕಾಸು ವರ್ಷದ ಈ ತ್ರೈಮಾಸಿಕದಲ್ಲಿ ಕ್ರೋಡೀಕೃತ ನಿವ್ವಳ ಲಾಭ 1,141 ಕೋಟಿ ರೂಪಾಯಿ ಮತ್ತು ಆದಾಯ ರೂ. 27,811 ಕೋಟಿ ರೂಪಾಯಿ ಆಗಬಹುದು ಎಂದು ಪೇಟೆಯ ನಿರೀಕ್ಷೆ ಇತ್ತು. ಕಂಪೆನಿಯು ರಿಲಯನ್ಸ್​ ಜಿಯೋದಿಂದ ಒಂದು ಸಲದ ಪಾವತಿಯಾಗಿ 722 ಕೋಟಿ ರೂಪಾಯಿಯನ್ನು ಏರ್​ಟೆಲ್ ಪಡೆದುಕೊಂಡಿದೆ. ಇದು ಸ್ಪೆಕ್ಟ್ರಂ ವರ್ಗಾವಣೆಯ ಮೊತ್ತವಾಗಿದ್ದು, ಇದು ಪರ್ಫಾರ್ಮೆನ್ಸ್​ಗೆ ಸೇರ್ಪಡೆ ಮಾಡುತ್ತದೆ.

ಭಾರ್ತಿ ಏರ್​ಟೆಲ್ ಷೇರು ಮಂಗಳವಾರದ ದಿನಾಂತ್ಯಕ್ಕೆ ಈ ಹಿಂದಿನ ಟ್ರೇಡಿಂಗ್ ಸೆಷನ್​ಗಿಂತ ಶೇ 0.60ರಷ್ಟು ಏರಿಕೆಯಾಗಿ, ರೂ. 712.9ರಲ್ಲಿ ವ್ಯವಹಾರ ಮುಗಿಸಿದೆ.

ಇದನ್ನೂ ಓದಿ: ದೂರಸಂಪರ್ಕ ಇಲಾಖೆಯಿಂದ ಏರ್​ಟೆಲ್​, VILಗೆ ರೂ. 3050 ಕೋಟಿ ದಂಡ; ಪಾವತಿಸಲು 3 ವಾರದ ಗಡುವು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ