AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharti Airtel: ಭಾರ್ತಿ ಏರ್​ಟೆಲ್​ ಎರಡನೇ ತ್ರೈಮಾಸಿಕ ಲಾಭ ರೂ. 1134 ಕೋಟಿ

ಟೆಲಿಕಾಂ ಕಂಪೆನಿ ಭಾರ್ತಿ ಏರ್​ಟೆಲ್ ಜುಲೈನಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ 1134 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ. ಹಣಕಾಸು ಫಲಿತಾಂಶದ ಇನ್ನಷ್ಟು ವಿವರ ಈ ಲೇಖನದಲ್ಲಿದೆ.

Bharti Airtel: ಭಾರ್ತಿ ಏರ್​ಟೆಲ್​ ಎರಡನೇ ತ್ರೈಮಾಸಿಕ ಲಾಭ ರೂ. 1134 ಕೋಟಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 02, 2021 | 6:12 PM

Share

ಟೆಲಿಕಾಂ ಸೇವೆ ಒದಗಿಸುವ ಭಾರ್ತಿ ಏರ್​ಟೆಲ್ ನವೆಂಬರ್ 2ನೇ ತಾರೀಕಿನ ಮಂಗಳವಾರದಂದು ಜುಲೈನಿಂದ ಸೆಪ್ಟೆಂಬರ್ ತ್ರೈಮಾಸಿಕದ ಹಣಕಾಸು ಫಲಿತಾಂಶವನ್ನು ಪ್ರಕಟಿಸಿದೆ. ತೆರಿಗೆ ನಂತರದ ಲಾಭವು 1,134 ಕೋಟಿ ರೂಪಾಯಿ ಬಂದಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಭಾರ್ತಿ ಏರ್​ಟೆಲ್ 763 ಕೋಟಿ ರೂಪಾಯಿ ನಷ್ಟವಾಗಿತ್ತು. ತ್ರೈಮಾಸಿಕ ಆಧಾರದಲ್ಲಿ ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ತೆರಿಗೆ ನಂತರದ ಲಾಭವು ಶೇ 300ರಷ್ಟು ಹೆಚ್ಚಾಗಿದೆ.

ಹಿಂದಿನ ತ್ರೈಮಾಸಿಕದಲ್ಲಿ ರೂ. 284 ಕೋಟಿ ಲಾಭ ವರದಿಯಾಗಿತ್ತು. ಕಂಪೆನಿಯು ವರ್ಷದಿಂದ ವರ್ಷಕ್ಕೆ ಕ್ರೋಡೀಕೃತ ಲಾಭವು ಶೇ 13ರಷ್ಟು ಹೆಚ್ಚಾಗಿ, ರೂ. 25,060 ಕೋಟಿಯಿಂದ ರೂ. 28,326 ಕೋಟಿಗೆ ತಲುಪಿದೆ. ಕಳೆದ ತ್ರೈಮಾಸಿಕಕ್ಕೆ ಹೋಲಿಸಿದಲ್ಲಿ 26,854 ಕೋಟಿ ರೂಪಾಯಿಯಿಂದ ಶೇ 5ರಷ್ಟು ಹೆಚ್ಚಳವಾಗಿದೆ.

ಪ್ರಸಕ್ತ ಹಣಕಾಸು ವರ್ಷದ ಈ ತ್ರೈಮಾಸಿಕದಲ್ಲಿ ಕ್ರೋಡೀಕೃತ ನಿವ್ವಳ ಲಾಭ 1,141 ಕೋಟಿ ರೂಪಾಯಿ ಮತ್ತು ಆದಾಯ ರೂ. 27,811 ಕೋಟಿ ರೂಪಾಯಿ ಆಗಬಹುದು ಎಂದು ಪೇಟೆಯ ನಿರೀಕ್ಷೆ ಇತ್ತು. ಕಂಪೆನಿಯು ರಿಲಯನ್ಸ್​ ಜಿಯೋದಿಂದ ಒಂದು ಸಲದ ಪಾವತಿಯಾಗಿ 722 ಕೋಟಿ ರೂಪಾಯಿಯನ್ನು ಏರ್​ಟೆಲ್ ಪಡೆದುಕೊಂಡಿದೆ. ಇದು ಸ್ಪೆಕ್ಟ್ರಂ ವರ್ಗಾವಣೆಯ ಮೊತ್ತವಾಗಿದ್ದು, ಇದು ಪರ್ಫಾರ್ಮೆನ್ಸ್​ಗೆ ಸೇರ್ಪಡೆ ಮಾಡುತ್ತದೆ.

ಭಾರ್ತಿ ಏರ್​ಟೆಲ್ ಷೇರು ಮಂಗಳವಾರದ ದಿನಾಂತ್ಯಕ್ಕೆ ಈ ಹಿಂದಿನ ಟ್ರೇಡಿಂಗ್ ಸೆಷನ್​ಗಿಂತ ಶೇ 0.60ರಷ್ಟು ಏರಿಕೆಯಾಗಿ, ರೂ. 712.9ರಲ್ಲಿ ವ್ಯವಹಾರ ಮುಗಿಸಿದೆ.

ಇದನ್ನೂ ಓದಿ: ದೂರಸಂಪರ್ಕ ಇಲಾಖೆಯಿಂದ ಏರ್​ಟೆಲ್​, VILಗೆ ರೂ. 3050 ಕೋಟಿ ದಂಡ; ಪಾವತಿಸಲು 3 ವಾರದ ಗಡುವು

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್