AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BHEL: ಬೆಂಗಳೂರಿನ ಬಿಎಚ್​ಇಎಲ್​ನಿಂದ ತಯಾರಾಗಲಿವೆ 80 ವಂದೇ ಭಾರತ್ ಟ್ರೈನುಗಳು; 24 ಸಾವಿರ ಕೋಟಿ ರೂ ಗುತ್ತಿಗೆ ನೀಡಿದ ಭಾರತೀಯ ರೈಲ್ವೆ

Contract To Manufacture 80 Vande Bharat Trains: ಬಿಎಚ್​ಇಎಲ್, ಟಿಆರ್​ಎಸ್​ಎಲ್ ಮೊದಲಾದ ಕಂಪನಿಗಳ ಕನ್ಸಾರ್ಟಿಯಂಗೆ 80 ವಂದೇ ಭಾರತ್ ಟ್ರೈನುಗಳ ತಯಾರಿಕೆಯ ಗುತ್ತಿಗೆಯನ್ನು ಭಾರತೀಯ ರೈಲ್ವೆ ನೀಡಿದೆ. 2029ರಷ್ಟರಲ್ಲಿ ಈ ರೈಲುಗಳು ತಯಾರಾಗಬೇಕು. 24,000 ಕೋಟಿ ರೂ ಮೊತ್ತದ ಗುತ್ತಿಗೆ ಇದಾಗಿದೆ.

BHEL: ಬೆಂಗಳೂರಿನ ಬಿಎಚ್​ಇಎಲ್​ನಿಂದ ತಯಾರಾಗಲಿವೆ 80 ವಂದೇ ಭಾರತ್ ಟ್ರೈನುಗಳು; 24 ಸಾವಿರ ಕೋಟಿ ರೂ ಗುತ್ತಿಗೆ ನೀಡಿದ ಭಾರತೀಯ ರೈಲ್ವೆ
ವಂದೇ ಭಾರತ್ ರೈಲು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 15, 2023 | 6:10 PM

ನವದೆಹಲಿ: ಬೆಂಗಳೂರು ಮೂಲದ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿ (BHEL) ಮತ್ತು ಕೋಲ್ಕತಾದ ತೀತಾಗಡ್ ರೈಲ್ ಸಿಸ್ಟಮ್ಸ್ ಲಿ (TRSL) ನೇತೃತ್ವದ ಸಮೂಹಕ್ಕೆ ವಂದೇ ಭಾರತ್ ಸ್ಲೀಪರ್ ಟ್ರೈನುಗಳ (Vande Bharat Sleeper Coach Trains) ತಯಾರಿಕೆಯ ಯೋಜನೆ ಸಿಕ್ಕಿದೆ. 80 ವಂದೇ ಭಾರತ್ ರೈಲುಗಳನ್ನು ತಯಾರಿಸಲು ಭಾರತೀಯ ರೈಲ್ವೇಸ್ ಈ ಗುತ್ತಿಗೆ ನೀಡಿದೆ. 24,000 ರೂ ಮೊತ್ತದ ಗುತ್ತಿಗೆ ಇದಾಗಿದೆ. ಈ ವಿಚಾರವನ್ನು ಜಂಟಿ ಹೇಳಿಕೆ ಮೂಲಕ ಈ ಸಂಸ್ಥೆಗಳು ಪ್ರಕಟಿಸಿವೆ.

2029ರಷ್ಟರಲ್ಲಿ ಈ 80 ಸ್ಲೀಪರ್ ಕೋಚ್ ಟ್ರೈನುಗಳನ್ನು ತಯಾರಿಸಬೇಕಿದೆ. ಟ್ರೈನ್​ನ ವಿನ್ಯಾಸದಿಂದ ಹಿಡಿದು ಎಲ್ಲವನ್ನೂ ಪೂರ್ಣವಾಗಿ ತಯಾರಿಸಬೇಕು. ಹಾಗೂ 35 ವರ್ಷಗಳ ಕಾಲ ಈ ಟ್ರೈನುಗಳ ಮೈಂಟೆನೆನ್ಸ್ ಕೂಡ ಮಾಡಬೇಕು. ಇದು ಗುತ್ತಿಗೆಯಲ್ಲಿರುವ ಷರತ್ತುಗಳು. ಈ ರೀತಿಯ ಪರಿಪೂರ್ಣ ರೈಲ್ವೆ ಗುತ್ತಿಗೆಯನ್ನು ಭಾರತೀಯ ಸಂಸ್ಥೆಗಳಿಗೆ ನೀಡಲಾಗಿರುವುದು ಇದೇ ಮೊದಲು.

ಇದನ್ನೂ ಓದಿPakistan: ಪಾಕಿಸ್ತಾನದಿಂದ ಕಾಲ್ಕೀಳುತ್ತಿದೆ ಶೆಲ್; ಅಲ್ಲಾಹುವೇ ಕಾಪಾಡಬೇಕೆಂದ ನೆಟ್ಟಿಗರು

ಈ ಗುತ್ತಿಗೆಯನ್ನು 6 ವರ್ಷದ ಅವಧಿಯಲ್ಲಿ ನೆರವೇರಿಸಲಾಗುವುದು. ಎರಡು ವರ್ಷದೊಳಗೆ ಮೊದಲ ವಂದೇ ಭಾರತ್ ಟ್ರೈನಿನ ಪ್ರೋಟೋಟೈಪ್ ಒದಗಿಸಲಾಗುವುದು. ಅದಾದ ಬಳಿಕ ಉಳಿದ ಟ್ರೈನುಗಳನ್ನು ತಯಾರಿಸಿ ಭಾರತೀಯ ರೈಲ್ವೆಗೆ ಒಪ್ಪಿಸಲಾಗುವುದು ಎಂದು ತೀತಾಗಡ್ ರೈಲ್ ಸಿಸ್ಟಮ್ಸ್​ನ ಎಂಡಿ ಮತ್ತು ಉಪಾಧ್ಯಕ್ಷ ಉಮೇಸ್ ಚೌಧರಿ ಹೇಳಿದ್ದಾರೆ.

ಈ ವಂದೇ ಭಾರತ್ ರೈಲುಗಳು ಗಂಟೆಗೆ 160 ಕಿಮೀ ವೇಗದಲ್ಲಿ ಸಾಗುವಂತೆ ವಿನ್ಯಾಸ ಮಾಡಲಾಗುತ್ತದೆ. ಒಂದು ಟ್ರೈನಿನಲ್ಲಿ 16 ಬೋಗಿಗಳಿರಲಿದ್ದು, ಒಟ್ಟು 887 ಪ್ರಯಾಣಿಕರಿಗೆ ಸ್ಥಳಾವಕಾಶ ಇರುತ್ತದೆ. ಇಂಥ 80 ಟ್ರೈನುಗಳು 2029ರಷ್ಟರಲ್ಲಿ ಹಂತ ಹಂತವಾಗಿ ಬಿಡುಗಡೆ ಆಗಲಿವೆ. ಈ ಟ್ರೈನುಗಳ ಅಂತಿಮ ಜೋಡಣೆ, ಪರೀಕ್ಷೆ ಮತ್ತು ಚಾಲನೆಯನ್ನು ಚೆನ್ನೈನಲ್ಲಿರುವ ಭಾರತೀಯ ರೈಲ್ವೆಯ ಜಾಗದಲ್ಲಿ ನಡೆಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ