ಭೀಮ್ ಯುಪಿಐ ಆ್ಯಪ್​ನಲ್ಲಿ ಪೇಮೆಂಟ್​ಗೆ ಪಿನ್ ಕೋಡ್ ಬದಲು ಫಿಂಗರ್ ಪ್ರಿಂಟ್ ಮತ್ತು ಫೇಸ್ ಅನ್​ಲಾಕ್ ಸಿಸ್ಟಂ

BHIM Payments App introduces Biometric authentication feature: ಭೀಮ್ ಯುಪಿಐ ಆ್ಯಪ್​ನಲ್ಲಿ ಹೊಸ ಫೀಚರ್ ಪರಿಚಯಿಸಲಾಗಿದೆ. ಯುಪಿಐ ಹಣ ಪಾವತಿಗೆ ಬಯೋಮೆಟ್ರಿಕ್ ದೃಢೀಕರಣದ ಸೌಲಭ್ಯವನ್ನು ಬಳಕೆದಾರರಿಗೆ ಕೊಡಲಾಗಿದೆ. 5,000 ರೂವರೆಗಿನ ಪಾವತಿಗೆ ಫಿಂಗರ್ ಪ್ರಿಂಟ್ ಅಥವಾ ಫೇಶಿಯಲ್ ರೆಕಗ್ನಿಶನ್ ಮೂಲಕ ಅಥೆಂಟಿಕೇಶನ್ ಕೊಡಬಹುದು.

ಭೀಮ್ ಯುಪಿಐ ಆ್ಯಪ್​ನಲ್ಲಿ ಪೇಮೆಂಟ್​ಗೆ ಪಿನ್ ಕೋಡ್ ಬದಲು ಫಿಂಗರ್ ಪ್ರಿಂಟ್ ಮತ್ತು ಫೇಸ್ ಅನ್​ಲಾಕ್ ಸಿಸ್ಟಂ
ಭೀಮ್ ಪೇಮೆಂಟ್ಸ್ ಆ್ಯಪ್

Updated on: Mar 24, 2026 | 8:59 PM

ನವದೆಹಲಿ, ಮಾರ್ಚ್ 24: ಭೀಮ್ (BHIM) ಪೇಮೆಂಟ್ ಆ್ಯಪ್​ನಲ್ಲಿ ಯುಪಿಐ ಪಾವತಿಗೆ ಪಿನ್ ಕೋಡ್ ಜೊತೆಗೆ ಬಯೋಮೆಟ್ರಿಕ್ ದೃಢೀಕರಣದ ಅವಕಾಶವನ್ನೂ ಕೊಡಲಾಗುತ್ತಿದೆ. ಯುಪಿಐ ಸಿಸ್ಟಂ ರೂಪಿಸಿದ ಎನ್​ಪಿಸಿಐನ ಅಂಗಸಂಸ್ಥೆಯಾದ ಭೀಮ್ ಸರ್ವಿಸಸ್ ಲಿಮಿಟೆಡ್ (BHIM Payments App) ಈ ಹೊಸ ಫೀಚರ್ ಅನಾವರಣಗೊಳಿಸಿರುವುದನ್ನು ಇಂದು ಘೋಷಿಸಿದೆ. ಭೀಮ್ ಆ್ಯಪ್ ಬಳಕೆದಾರರು 5,000 ರೂವರೆಗಿನ ಯುಪಿಐ ಟ್ರಾನ್ಸಾಕ್ಷನ್​ಗಳಿಗೆ ಬಯೋಮೆಟ್ರಿಕ್ ಅಥೆಂಟಿಕೇಶನ್ ನೀಡಬಹುದು

ಫಿಂಗರ್ ಪ್ರಿಂಟ್ ಮತ್ತು ಫೇಶಿಯಲ್ ರೆಕಗ್ನಿಶನ್ ಸೌಲಭ್ಯ ಇರುವಂತಹ ಸ್ಮಾರ್ಟ್​ಫೋನ್​ಗಳಲ್ಲಿ ಭೀಮ್ ಆ್ಯಪ್ ಬಳಕೆದಾರರು ಈ ಫೀಚರ್ ಅನ್ನು ಬಳಸಬಹುದು.

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಇಎಂಐ, ಝೀರೋ ಕಾಸ್ಟ್ ಇಎಂಐ ಹಿಂದಿರುವ ಸೀಕ್ರೆಟ್ ವಿಚಾರಗಳು ಏನು ಗೊತ್ತಾ?

ಬಯೋಮೆಟ್ರಿಕ್ ಫೀಚರ್ ಎನೇಬಲ್ ಆಗಿದ್ದರೆ, 5,000 ರೂವರೆಗಿನ ಪಾವತಿಗೆ ಪಿನ್ ಹಾಕುವ ಅವಶ್ಯಕತೆ ಇರುವುದಿಲ್ಲ. ಅದಕ್ಕೂ ಮೇಲ್ಪಟ್ಟ ಮೊತ್ತದ ಪಾವತಿಗೆ ಮಾತ್ರ ಪಿನ್ ಬೇಕಾಗುತ್ತದೆ. ಉಳಿದಂತೆ, ಫಿಂಗರ್ ಪ್ರಿಂಟ್ ಅಥವಾ ಮುಖ ಚಹರೆ ಕಾಣಿಸಿದರೆ ಸಾಕಾಗುತ್ತದೆ.

ಯುಪಿಐ ಪಾವತಿ ಸಿಸ್ಟಂಗೆ ಬಯೋಮೆಟ್ರಿಕ್ ಅಥೆಂಟಿಕೇಶನ್ ಹೆಚ್ಚುವರಿ ಭದ್ರತೆ ಒದಗಿಸುತ್ತದೆ. ಫಿಂಗರ್​ಪ್ರಿಂಟ್ ಮತ್ತು ಫೇಶಿಯಲ್ ರೆಕಗ್ನಿಶನ್​ನ ದತ್ತಾಂಶವು ಸ್ಮಾರ್ಟ್​ಫೋನ್​ನಲ್ಲಿ ಮಾತ್ರವೇ ಸಂಗ್ರಹವಾಗಿರುತ್ತದೆ. ಹೀಗಾಗಿ, ಬೇರೆಯವರು ನಿಮ್ಮ ಐಡೆಂಟಿಟಿಯನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಕಡಿಮೆ ಇರುತ್ತದೆ. ಪಾವತಿ ಕಾರ್ಯವೂ ಸುಲಭವಾಗಿರುತ್ತದೆ.

ಇದನ್ನೂ ಓದಿ: ಹೊಸ ಪ್ಯಾನ್ ನಿಯಮದಿಂದ ಹಿಡಿದು ಇನ್ಷೂರೆನ್ಸ್ ಪಾವತಿವರೆಗೆ, ಮಾರ್ಚ್ 31ಕ್ಕೆ ಡೆಡ್​ಲೈನ್ ಇರುವ ಕೆಲ ಪ್ರಮುಖ ಹಣಕಾಸು ಕಾರ್ಯಗಳು

ಭೀಮ್ ಪೇಮೆಂಟ್ಸ್ ಆ್ಯಪ್​ನಲ್ಲಿ ಬಯೋಮೆಟ್ರಿಕ್ ಅಥೆಂಟಿಕೇಶನ್ ಸಕ್ರಿಯಗೊಳಿಸುವ ಕ್ರಮ

  • ಭೀಮ್ ಪೇಮೆಂಟ್ಸ್ ಆ್ಯಪ್ ತೆರೆಯಿರಿ
  • ಪ್ರೊಫೈಲ್​ಗೆ ಹೋಗಿ
  • ನಿಮ್ಮ ಬ್ಯಾಂಕ್ ಅಕೌಂಟ್ ಆಯ್ದುಕೊಳ್ಳಿ
  • ಬಯೋಮೆಟ್ರಿಕ್ ಟ್ರಾನ್ಸಾಕ್ಷನ್ಸ್ ಸಕ್ರಿಯಗೊಳಿಸಿ
  • ಫಿಂಗರ್ ಪ್ರಿಂಟ್ ಮೂಲಕ 5,000 ರೂವರೆಗಿನ ಹಣವನ್ನು ಪಾವತಿಸಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us