AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್​​​ ಮಲ್ಯಗೆ ಬಿಗ್​​ ಶಾಕ್​ ನೀಡಿದ ಸೆಬಿ, ಸೆಕ್ಯುರಿಟೀಸ್ ಮಾರುಕಟ್ಟೆಯಿಂದ 3 ವರ್ಷಗಳ ಕಾಲ ನಿಷೇಧ

ಮದ್ಯದ ದೊರೆ ವಿಜಯ್​​​ ಮಲ್ಯಗೆ ಸೆಬಿ ಬಿಗ್​​ ಶಾಕ್ ನೀಡಿದೆ. ಇನ್ನು ಮೂರು ವರ್ಷಗಳ ಕಾಲ ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ಮಲ್ಯ ಅವರನ್ನು ನಿಷೇಧಿಸಿದೆ. ಅಷ್ಟಕ್ಕೂ ಮಲ್ಯ ಅವರನ್ನು ಯಾಕೆ ಸೆಬಿ ನಿರ್ಬಂಧಿಸಿದೆ, ಮಲ್ಯ ಮಾಡಿದ ಅಕ್ರಮವೇನು? ಎಂಬ ಬಗ್ಗೆ ಇಲ್ಲಿದೆ.

ವಿಜಯ್​​​ ಮಲ್ಯಗೆ ಬಿಗ್​​ ಶಾಕ್​ ನೀಡಿದ ಸೆಬಿ, ಸೆಕ್ಯುರಿಟೀಸ್ ಮಾರುಕಟ್ಟೆಯಿಂದ 3 ವರ್ಷಗಳ ಕಾಲ ನಿಷೇಧ
ವಿಜಯ್​​​ ಮಲ್ಯ
ಅಕ್ಷಯ್​ ಪಲ್ಲಮಜಲು​​
|

Updated on: Jul 27, 2024 | 1:09 PM

Share

ಮಾಜಿ ಮದ್ಯದ ದೊರೆ ವಿಜಯ್​​​ ಮಲ್ಯಗೆ ಸೆಬಿ (Securities and Exchange Board of India) ಬಿಗ್​​ ಶಾಕ್​​​ ನೀಡಿದೆ. ವಿಜಯ್​​​ ಮಲ್ಯ ಯುಬಿಎಸ್ ಎಜಿ ಹೊಂದಿರುವ ದೇಶದ ಬೇರೆ ಬೇರೆ ಬ್ಯಾಂಕ್​​ ಖಾತೆಗಳ ಮೂಲಕ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರೂಟಿಂಗ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಮೂರು ವರ್ಷಗಳ ಕಾಲ ಸೆಬಿ, ಸೆಕ್ಯುರಿಟೀಸ್ ಮಾರುಕಟ್ಟೆಯಿಂದ ನಿರ್ಬಂಧಿಸಿದೆ. ಮೂರು ವರ್ಷಗಳವರೆಗೆ ಸೆಬಿ ಪಟ್ಟಿ ಮಾಡಿರುವ ಸಂಸ್ಥೆಯೊಂದಿಗೆ ಯಾವುದೇ ವ್ಯವಹಾರ ನಡೆಸಬಾರದು ಎಂದು ಹೇಳಿದೆ.

ಈಗಾಗಲೇ ಕಿಂಗ್‌ಫಿಷರ್ ಏರ್‌ಲೈನ್ಸ್‌ ವಂಚನೆ ಆರೋಪವನ್ನು ಹೊತ್ತಿರುವ ಅವರು ಭಾರತದಿಂದ ಪರಾರಿಯಾಗಿ ಯುಕೆಯಲ್ಲಿ ನೆಲೆಸಿದ್ದಾರೆ. ಅವರನ್ನು ಯುಕೆಯಿಂದ ಗಡಿಪಾರು ಮಾಡುವಂತೆ ಭಾರತ ಸರ್ಕಾರ ಯುಕೆ ಸರ್ಕಾರಕ್ಕೆ ಮನವಿ ಮಾಡಿದೆ. 2016ರಿಂದ ಮಲ್ಯ ಅವರು ಯುಕೆಯಲ್ಲಿ ನೆಲೆಸಿದ್ದಾರೆ. ಇದೀಗ ಇದರ ಜತೆಗೆ ಈ ಆರೋಪವನ್ನು ಕೂಡ ಮಲ್ಯ ಹೊತ್ತುಕೊಂಡಿದ್ದಾರೆ.

ಜನವರಿ 2006 ರಿಂದ ಮಾರ್ಚ್ 2008 ರವರೆಗೆ ಸೆಬಿ ನಡೆಸಿದ ತನಿಖೆಯಲ್ಲಿ ಮಲ್ಯ ಅವರು ಮ್ಯಾಟರ್‌ಹಾರ್ನ್ ವೆಂಚರ್ಸ್, ವಿದೇಶಿ ಸಾಂಸ್ಥಿಕ ಹೂಡಿಕೆದಾರ (ಎಫ್‌ಐಐ)ರಿಗೆ ತಮ್ಮ ಕಂಪನಿಗಳಾದ ಹರ್ಬರ್ಟ್‌ಸನ್ಸ್ ಲಿಮಿಟೆಡ್ ಮತ್ತು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (ಯುಎಸ್‌ಎಲ್) ಗಳ ಷೇರುಗಳನ್ನು ರಹಸ್ಯವಾಗಿ ವ್ಯಾಪಾರ ಮಾಡಲು ಮುಂದಾಗಿದ್ದರು ಎಂದು ಸೆಬಿ ಹೇಳಿದೆ.

UBS AG ಯ ವಿವಿಧ ಖಾತೆಗಳ ಮೂಲಕ ಮ್ಯಾಟರ್‌ಹಾರ್ನ್ ವೆಂಚರ್ಸ್ ಅನ್ನು ಬಳಸಿಕೊಂಡು ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರವಾನಿಸಿದರು. ಇದಕ್ಕಾಗಿ ತಮ್ಮ ಹೆಸರನ್ನು ಮರೆಮಾಚಿ ಬೇರೆ ಬೇರೆ ಖಾತೆಗಳಿಂದ ಹಣವನ್ನು ರವಾನಿಸಿದ್ದಾರೆ ಎಂದು ಹೇಳಿದೆ. ಮ್ಯಾಟರ್‌ಹಾರ್ನ್ ವೆಂಚರ್ಸ್ ಕಂಪನಿಯನ್ನು ಸಾರ್ವಜನಿಕ ಷೇರುದಾರ ಎಂದು ತಪ್ಪಾಗಿ ಗುರುತಿಸಲಾಗಿದೆ. ಆದರೂ ಅದರ 9.98 ಶೇಕಡಾ ಷೇರುಗಳು ಪ್ರವರ್ತಕ ವರ್ಗಕ್ಕೆ ಸೇರಿದೆ ಎಂಬುದನ್ನು ಸೆಬಿ ತನಿಖೆಯಲ್ಲಿ ಹೇಳಿದೆ.

ಸೆಬಿ ತನ್ನ 37 ಪುಟಗಳ ತನಿಖಾ ವರದಿಯಲ್ಲಿ ಈ ಬಗ್ಗೆ ತಿಳಿಸಲಾಗಿದೆ. ಇದೀಗ ಸೆಬಿ ಮುಖ್ಯ ಜನರಲ್ ಮ್ಯಾನೇಜರ್ ಅನಿತಾ ಅನೂಪ್ ಅವರು ಮಲ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಈ ನೋಟಿಸ್​​​ನಲ್ಲಿ ತಮ್ಮ ವಹಿವಾಟುಗಳು / ನಿಧಿಯ ಹರಿವಿನ ಅಕ್ರಮವಾಗಿದ್ದು, ಷೇರುಗಳಲ್ಲಿ ಪರೋಕ್ಷವಾಗಿ ವ್ಯಾಪಾರ ಮಾಡುವ ಯೋಜನೆ ಹಾಕಿದ್ದು , ನಮ್ಮ ಮಾನದಂಡಗಳನ್ನು ಧಿಕ್ಕರಿಸಿ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಯಲ್ಲಿ ಅಕ್ರಮವಾಗಿ ವ್ಯಾಪಾರ ಮಾಡಲು ಮುಂದಾಗಿದ್ದೀರಾ. ಈ ಕೃತ್ಯಗಳು ಮೋಸ ಮತ್ತು ವಂಚನೆ ಮಾತ್ರವಲ್ಲದೆ ಸೆಕ್ಯುರಿಟೀಸ್ ಮಾರುಕಟ್ಟೆಯ ಸಮಗ್ರತೆಗೆ ಬೆದರಿಕೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್ಥಿಕತೆ ಬೆಳವಣಿಗೆಗೆ ಧಕ್ಕೆಯಾಗದಂತೆ ಸಾಲವನ್ನು ಕಡಿಮೆ ಮಾಡಬೇಕು: ನಿರ್ಮಲಾ ಸೀತಾರಾಮನ್

ಇದಕ್ಕಾಗಿ ಮಲ್ಯ ಅವರನ್ನು ಸೆಬಿಯು ಸೆಕ್ಯುರಿಟೀಸ್ ಮಾರುಕಟ್ಟೆಯನ್ನು ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ ಹಾಗೂ ಸೆಕ್ಯುರಿಟಿಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಖರೀದಿಸುವುದು, ಮಾರಾಟ ಮಾಡುವುದು ಅಥವಾ ಇತರ ರೀತಿಯಲ್ಲಿ ವ್ಯವಹಾರ ನಡೆಸುವುದು ಹಾಗೂ ಯಾವುದೇ ರೀತಿಯಲ್ಲಿ ಸೆಕ್ಯುರಿಟೀಸ್ ಮಾರುಕಟ್ಟೆಗೆ ಪ್ರವೇಶ ನಡೆಸದಂತೆ ನಿರ್ಬಂಧಿಸಲಾಗಿದೆ. ಇದರ ಜತೆಗೆ ಮಲ್ಯ ಅವರನ್ನು ತನಿಖೆ ಒಳಪಡಿಸುವಂತೆ ಆದೇಶ ನೀಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!