AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biggest Bank Scam: 22,842 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ವಂಚನೆ; ಎಬಿಜಿ ಶಿಪ್‌ಯಾರ್ಡ್, ಮಾಜಿ ಉನ್ನತಾಧಿಕಾರಿ ವಿರುದ್ಧ ಸಿಬಿಐ ವಿಚಾರಣೆ

ವಿಜಯ್ ಮಲ್ಯ ವಿರುದ್ಧ ಇರುವುದು 9000 ಕೋಟಿ ರೂಪಾಯಿಯ ಬ್ಯಾಂಕ್ ವಂಚನೆ ಪ್ರಕರಣ. ಈಗ ಎಬಿಪಿ ಶಿಪ್​ಯಾರ್ಡ್ ಹಾಗೂ ಅದರ ಹಿಂದಿನ ಸಿಇಒ ಮತ್ತು ಇತರರ ವಿರುದ್ಧ 22842 ಕೋಟಿ ರೂಪಾಯಿಯ ವಂಚನೆ ಪ್ರಕರಣವನ್ನು ಸಿಬಿಐ ದಾಖಲಿಸಿದೆ. ಮಲ್ಯ ಪ್ರಕರಣಕ್ಕೆ ಹೋಲಿಸಿದರೆ ಇದೆಷ್ಟು ದೊಡ್ಡದು ಎಂದು ಅಂದಾಜಿಸಬಹುದು.

Biggest Bank Scam: 22,842 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ವಂಚನೆ; ಎಬಿಜಿ ಶಿಪ್‌ಯಾರ್ಡ್, ಮಾಜಿ ಉನ್ನತಾಧಿಕಾರಿ ವಿರುದ್ಧ ಸಿಬಿಐ ವಿಚಾರಣೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Feb 12, 2022 | 9:40 PM

Share

ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ 22,842 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿದ ಆರೋಪದ ಮೇಲೆ ಸಿಬಿಐನಿಂದ ಎಬಿಜಿ ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಅದರ ಆಗಿನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಿಷಿ ಕಮಲೇಶ್ ಅಗರ್​ವಾಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಕ್ರಿಮಿನಲ್ ಪಿತೂರಿ, ವಂಚನೆ, ಕ್ರಿಮಿನಲ್ ನಂಬಿಕೆ ದ್ರೋಹ ಮತ್ತು ಅಧಿಕಾರ ದುರುಪಯೋಗದ ಆರೋಪಗಳಿಗೆ ಸಂಬಂಧಿಸಿದಂತೆ ಅಗರ್​ವಾಲ್ ಜೊತೆಗೆ ಆಗಿನ ಕಾರ್ಯನಿರ್ವಾಹಕ ನಿರ್ದೇಶಕ ಸಂತಾನಂ ಮುತ್ತಸ್ವಾಮಿ, ನಿರ್ದೇಶಕರಾದ ಅಶ್ವಿನಿ ಕುಮಾರ್, ಸುಶೀಲ್ ಕುಮಾರ್ ಅಗರ್​ವಾಲ್ ಮತ್ತು ರವಿ ವಿಮಲ್ ನೆವೆಟಿಯಾ ಮತ್ತು ಇನ್ನೊಂದು ಕಂಪೆನಿ ಎಬಿಜಿ ಇಂಟರ್​ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಅನ್ನು ಸಹ ಐಪಿಸಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಸಂಸ್ಥೆಯಿಂದ ಹೆಸರಿಸಲಾಗಿದೆ, ಎಂದು ಅವರು ಹೇಳಿದ್ದಾರೆ.

ಬ್ಯಾಂಕ್ ಮೊದಲ ಬಾರಿಗೆ ನವೆಂಬರ್ 8, 2019ರಂದು ದೂರು ಸಲ್ಲಿಸಿತ್ತು. ಅದರ ಮೇಲೆ ಸಿಬಿಐ ಮಾರ್ಚ್ 12, 2020ರಂದು ಕೆಲವು ಸ್ಪಷ್ಟೀಕರಣ ಕೇಳಿತ್ತು. ಅದೇ ವರ್ಷ ಆಗಸ್ಟ್‌ನಲ್ಲಿ ಬ್ಯಾಂಕ್ ಹೊಸ ದೂರನ್ನು ಸಲ್ಲಿಸಿತು. ಒಂದೂವರೆ ವರ್ಷಗಳ ಕಾಲ “ಪರಿಶೀಲನೆ” ಮಾಡಿದ ನಂತರ, ಫೆಬ್ರವರಿ 7, 2022ರಂದು ಎಫ್‌ಐಆರ್ ದಾಖಲಿಸುವ ದೂರಿನ ಮೇಲೆ ಸಿಬಿಐ ಕ್ರಮ ಕೈಗೊಂಡಿತು. ಬ್ಯಾಂಕ್ ಅದೇ ವರ್ಷದ ಆಗಸ್ಟ್‌ನಲ್ಲಿ ಹೊಸ ದೂರನ್ನು ಸಲ್ಲಿಸಿತು.

ಕಂಪೆನಿಯು 28 ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿಸಿಕೊಂಡಿದ್ದು, ಅದರಲ್ಲಿ ಎಸ್‌ಬಿಐ 2468.51 ಕೋಟಿ ರೂಪಾಯಿ ನೀಡಿದೆ. 2012ರಿಂದ 2017ರ ನಡುವೆ ಆರೋಪಿಗಳು ಒಟ್ಟಾಗಿ ಸೇರಿಕೊಂಡು ಹಣವನ್ನು ಬೇರೆ ಉದ್ದೇಶಕ್ಕೆ ಬಳಕೆ, ದುರುಪಯೋಗ ಮತ್ತು ಕ್ರಿಮಿನಲ್ ನಂಬಿಕೆ ದ್ರೋಹ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ಎಸಗಿದ್ದಾರೆ ಎಂದು ಫೊರೆನ್ಸಿಕ್ ಆಡಿಟ್ ತೋರಿಸಿದೆ ಎಂದು ಅವರು ಹೇಳಿದ್ದಾರೆ. ಸಿಬಿಐ ದಾಖಲಿಸಿರುವ ಅತಿ ದೊಡ್ಡ ಬ್ಯಾಂಕ್ ವಂಚನೆ ಪ್ರಕರಣ ಇದಾಗಿದೆ. ಬ್ಯಾಂಕ್‌ಗಳು ಬಿಡುಗಡೆ ಮಾಡಿದ ಉದ್ದೇಶಗಳಿಗೆ ಹೊರತುಪಡಿಸಿ ಬೇರೆಯದ್ದಕ್ಕಾಗಿ ಹಣವನ್ನು ಬಳಸಲಾಗಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ನಕಲಿ ಕ್ರಿಪ್ಟೋಕರೆನ್ಸಿ: ಕೇರಳದಲ್ಲಿ 900 ಮಂದಿಗೆ ₹1200 ಕೋಟಿಗಿಂತಲೂ ಹೆಚ್ಚು ಮೊತ್ತ ವಂಚನೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ