AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAN Card Fraud: ಸನ್ನಿ ಲಿಯೋನ್​ಗೆ ಆಗಿದ್ದ ವಂಚನೆಯೇ ಈಗ ನಟ ರಾಜ್​ಕುಮಾರ್​ ರಾವ್​ಗೆ; ಪ್ಯಾನ್​ ಕಾರ್ಡ್ ದುರ್ಬಳಕೆ ದೂರು

ಬಾಲಿವುಡ್​ ನಟ ರಾಜ್​ಕುಮಾರ್​ ರಾವ್ ಅವರು ತಮಗೆ ಪ್ಯಾನ್​ಕಾರ್ಡ್ ವಂಚನೆ ಆಗಿರುವ ಬಗ್ಗೆ ಟ್ವೀಟ್​ ಮೂಲಕ ಹೇಳಿಕೊಂಡಿದ್ದಾರೆ. ಆ ಬಗ್ಗೆ ವಿವರ ಇಲ್ಲಿದೆ.

PAN Card Fraud: ಸನ್ನಿ ಲಿಯೋನ್​ಗೆ ಆಗಿದ್ದ ವಂಚನೆಯೇ ಈಗ ನಟ ರಾಜ್​ಕುಮಾರ್​ ರಾವ್​ಗೆ; ಪ್ಯಾನ್​ ಕಾರ್ಡ್ ದುರ್ಬಳಕೆ ದೂರು
ರಾಜ್​ಕುಮಾರ್​ ರಾವ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Apr 02, 2022 | 5:01 PM

Share

ನಿಮ್ಮ ಪ್ಯಾನ್​ ಕಾರ್ಡ್ (PAN Card) ಬಳಸಿ, ಬೇರೆಯವರು ವಂಚಿಸಬಹುದು ಎಂದು ಎಷ್ಟೇ ಎಚ್ಚರಿಸಿದರೂ ಅಂಥ ಪ್ರಕರಣಗಳು ಪದೇಪದೇ ಕಂಡುಬರುತ್ತಲೇ ಇರುತ್ತವೆ. ಇಲ್ಲಿನ ಉದಾಹರಣೆಯನ್ನೇ ಗಮನಿಸಿ, ಬಾಲಿವುಡ್​ನ ಖ್ಯಾತ ನಟ ರಾಜ್​ಕುಮಾರ್​ ರಾವ್​ ಅವರ ಪ್ಯಾನ್​ ಕಾರ್ಡ್​ನ ದುರ್ಬಳಕೆ ಮಾಡಿಕೊಂಡ ಬಗ್ಗೆ ದೂರಿದ್ದಾರೆ. ಪ್ಯಾನ್​ ಕಾರ್ಡ್ ಮಾಹಿತಿಯನ್ನು ಬಳಸಿಕೊಂಡು, ತಮ್ಮ ಹೆಸರಿನಲ್ಲಿ ಸಾಲವನ್ನು ಪಡೆದುಕೊಂಡಿದ್ದಾರೆ ಎಂದು ರಾಜ್​ಕುಮಾರ್ ರಾವ್ ಅವರು ಹೇಳಿದ್ದಾರೆ. 37 ವರ್ಷದ ರಾವ್ ಅವರು ಹೇಳಿಕೊಂಡಂತೆ, ಈ ವಂಚನೆಯಿಂದ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರಿದೆ. ಈ ವಿಚಾರದ ಬಗ್ಗೆ ಗಮನ ನೀಡುವಂತೆ ಕ್ರೆಡಿಟ್ ಇನ್ಫರ್ಮೇಷನ್ ಬ್ಯುರೋ (ಇಂಡಿಯಾ) ಲಿಮಿಟೆಡ್ (CIBIL) ಅಧಿಕಾರಿಗಳನ್ನು ಕೇಳಿದ್ದಾಗಿ ಹೇಳಿದ್ದಾರೆ.

“#FraudAlert ನನ್ನ ಪ್ಯಾನ್ ಕಾರ್ಡ್​ ಅನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ನತ್ತು ಸಣ್ಣ ಸಾಲ ರೂ. 2500 ನನ್ನ ಹೆಸರಲ್ಲಿ ಸಾಲ ಪಡೆದಿದ್ದಾರೆ. ಇದರಿಂದಾಗಿ ನನ್ನ ಸಿಬಿಲ್ ಸ್ಕೋರ್​ ಮೇಲೆ ಪರಿಣಾಮ ಬೀರಿದೆ. @CIBIL_ಅಧಿಕಾರಿಗಳು ದಯವಿಟ್ಟು ಇದನ್ನು ತಿದ್ದುಪಡಿ ಮಾಡಿ ಹಾಗೂ ಇದರ ವಿರುದ್ಧ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಿ,” ಎಂದು ರಾವ್ ಟ್ವೀಟ್ ಮಾಡಿದ್ದಾರೆ. ಸಿಬಿಲ್​ನ ಅಧಿಕೃತ ಟ್ವಿಟರ್​ ಖಾತೆಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಈ ಹಿಂದೆ ಬಾಲಿವುಡ್​ ನಟಿ ಸನ್ನಿ ಲಿಯೋನ್ ಕೂಡ ಇಂಥದ್ದೇ ಆರೋಪ ಮಾಡಿದ್ದರು. ತಮ್ಮ ಪ್ಯಾನ್​ ಕಾರ್ಡ್ ಅನ್ನು ದುರುಪಯೋಗ ಮಾಡಿಕೊಂಡು 2000 ರೂಪಾಯಿ ಸಾಲ ಪಡೆದಿದ್ದು, ಇದರಿಂದ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಆಗಿತ್ತು. ತಮ್ಮ ಪ್ಯಾನ್ ಕಾರ್ಡ್ ಬಳಸಿ, ಸಾಲ ಪಡೆದುಕೊಂಡಿದ್ದಾರೆ. ವಂಚನೆಯ ಮಾರ್ಗವನ್ನು ಬಳಸಿ, ತಮ್ಮ ಸಹಿ ನಕಲಿ ಮಾಡಿದ್ದರು ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: PAN card fraud: ನಿಮ್ಮ ಪ್ಯಾನ್​ ಕಾರ್ಡ್ ಸಂಖ್ಯೆ ಬಳಸಿ ಬೇರೆಯವರು ಸಾಲ ತೆಗೆದುಕೊಂಡಿದ್ದಾರಾ? ಇದನ್ನು ತಿಳಿಯುವುದು ಹೀಗೆ

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ