Sign In

By signing in or creating an account, you agree with Associated Broadcasting Company's Terms & Conditions and Privacy Policy.

PAN Card Fraud: ಸನ್ನಿ ಲಿಯೋನ್​ಗೆ ಆಗಿದ್ದ ವಂಚನೆಯೇ ಈಗ ನಟ ರಾಜ್​ಕುಮಾರ್​ ರಾವ್​ಗೆ; ಪ್ಯಾನ್​ ಕಾರ್ಡ್ ದುರ್ಬಳಕೆ ದೂರು

ಬಾಲಿವುಡ್​ ನಟ ರಾಜ್​ಕುಮಾರ್​ ರಾವ್ ಅವರು ತಮಗೆ ಪ್ಯಾನ್​ಕಾರ್ಡ್ ವಂಚನೆ ಆಗಿರುವ ಬಗ್ಗೆ ಟ್ವೀಟ್​ ಮೂಲಕ ಹೇಳಿಕೊಂಡಿದ್ದಾರೆ. ಆ ಬಗ್ಗೆ ವಿವರ ಇಲ್ಲಿದೆ.

PAN Card Fraud: ಸನ್ನಿ ಲಿಯೋನ್​ಗೆ ಆಗಿದ್ದ ವಂಚನೆಯೇ ಈಗ ನಟ ರಾಜ್​ಕುಮಾರ್​ ರಾವ್​ಗೆ; ಪ್ಯಾನ್​ ಕಾರ್ಡ್ ದುರ್ಬಳಕೆ ದೂರು
ರಾಜ್​ಕುಮಾರ್​ ರಾವ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Apr 02, 2022 | 5:01 PM

ನಿಮ್ಮ ಪ್ಯಾನ್​ ಕಾರ್ಡ್ (PAN Card) ಬಳಸಿ, ಬೇರೆಯವರು ವಂಚಿಸಬಹುದು ಎಂದು ಎಷ್ಟೇ ಎಚ್ಚರಿಸಿದರೂ ಅಂಥ ಪ್ರಕರಣಗಳು ಪದೇಪದೇ ಕಂಡುಬರುತ್ತಲೇ ಇರುತ್ತವೆ. ಇಲ್ಲಿನ ಉದಾಹರಣೆಯನ್ನೇ ಗಮನಿಸಿ, ಬಾಲಿವುಡ್​ನ ಖ್ಯಾತ ನಟ ರಾಜ್​ಕುಮಾರ್​ ರಾವ್​ ಅವರ ಪ್ಯಾನ್​ ಕಾರ್ಡ್​ನ ದುರ್ಬಳಕೆ ಮಾಡಿಕೊಂಡ ಬಗ್ಗೆ ದೂರಿದ್ದಾರೆ. ಪ್ಯಾನ್​ ಕಾರ್ಡ್ ಮಾಹಿತಿಯನ್ನು ಬಳಸಿಕೊಂಡು, ತಮ್ಮ ಹೆಸರಿನಲ್ಲಿ ಸಾಲವನ್ನು ಪಡೆದುಕೊಂಡಿದ್ದಾರೆ ಎಂದು ರಾಜ್​ಕುಮಾರ್ ರಾವ್ ಅವರು ಹೇಳಿದ್ದಾರೆ. 37 ವರ್ಷದ ರಾವ್ ಅವರು ಹೇಳಿಕೊಂಡಂತೆ, ಈ ವಂಚನೆಯಿಂದ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರಿದೆ. ಈ ವಿಚಾರದ ಬಗ್ಗೆ ಗಮನ ನೀಡುವಂತೆ ಕ್ರೆಡಿಟ್ ಇನ್ಫರ್ಮೇಷನ್ ಬ್ಯುರೋ (ಇಂಡಿಯಾ) ಲಿಮಿಟೆಡ್ (CIBIL) ಅಧಿಕಾರಿಗಳನ್ನು ಕೇಳಿದ್ದಾಗಿ ಹೇಳಿದ್ದಾರೆ.

“#FraudAlert ನನ್ನ ಪ್ಯಾನ್ ಕಾರ್ಡ್​ ಅನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ನತ್ತು ಸಣ್ಣ ಸಾಲ ರೂ. 2500 ನನ್ನ ಹೆಸರಲ್ಲಿ ಸಾಲ ಪಡೆದಿದ್ದಾರೆ. ಇದರಿಂದಾಗಿ ನನ್ನ ಸಿಬಿಲ್ ಸ್ಕೋರ್​ ಮೇಲೆ ಪರಿಣಾಮ ಬೀರಿದೆ. @CIBIL_ಅಧಿಕಾರಿಗಳು ದಯವಿಟ್ಟು ಇದನ್ನು ತಿದ್ದುಪಡಿ ಮಾಡಿ ಹಾಗೂ ಇದರ ವಿರುದ್ಧ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಿ,” ಎಂದು ರಾವ್ ಟ್ವೀಟ್ ಮಾಡಿದ್ದಾರೆ. ಸಿಬಿಲ್​ನ ಅಧಿಕೃತ ಟ್ವಿಟರ್​ ಖಾತೆಯಿಂದ ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಈ ಹಿಂದೆ ಬಾಲಿವುಡ್​ ನಟಿ ಸನ್ನಿ ಲಿಯೋನ್ ಕೂಡ ಇಂಥದ್ದೇ ಆರೋಪ ಮಾಡಿದ್ದರು. ತಮ್ಮ ಪ್ಯಾನ್​ ಕಾರ್ಡ್ ಅನ್ನು ದುರುಪಯೋಗ ಮಾಡಿಕೊಂಡು 2000 ರೂಪಾಯಿ ಸಾಲ ಪಡೆದಿದ್ದು, ಇದರಿಂದ ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಆಗಿತ್ತು. ತಮ್ಮ ಪ್ಯಾನ್ ಕಾರ್ಡ್ ಬಳಸಿ, ಸಾಲ ಪಡೆದುಕೊಂಡಿದ್ದಾರೆ. ವಂಚನೆಯ ಮಾರ್ಗವನ್ನು ಬಳಸಿ, ತಮ್ಮ ಸಹಿ ನಕಲಿ ಮಾಡಿದ್ದರು ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: PAN card fraud: ನಿಮ್ಮ ಪ್ಯಾನ್​ ಕಾರ್ಡ್ ಸಂಖ್ಯೆ ಬಳಸಿ ಬೇರೆಯವರು ಸಾಲ ತೆಗೆದುಕೊಂಡಿದ್ದಾರಾ? ಇದನ್ನು ತಿಳಿಯುವುದು ಹೀಗೆ

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ