AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಹಣದುಬ್ಬರ ನಿಯಂತ್ರಣಕ್ಕೆ ಆರ್​ಬಿಐ ಕಠಿಣ ಕ್ರಮ: ರೆಪೊ ದರ ಮತ್ತೆ ಶೇ 0.50 ಹೆಚ್ಚಳ

ಆರ್​ಬಿಐನ ಈ ನಿರ್ಧಾರದಿಂದ ಗೃಹ ಸಾಲ ಸೇರಿದಂತೆ ಎಲ್ಲ ಬಗೆಯ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಾಗಲಿದೆ.

Breaking News: ಹಣದುಬ್ಬರ ನಿಯಂತ್ರಣಕ್ಕೆ ಆರ್​ಬಿಐ ಕಠಿಣ ಕ್ರಮ: ರೆಪೊ ದರ ಮತ್ತೆ ಶೇ 0.50 ಹೆಚ್ಚಳ
TV9 Web
| Edited By: |

Updated on:Sep 30, 2022 | 11:09 AM

Share

ಭಾರತದಲ್ಲಿ ಹಣದುಬ್ಬರ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India – RBI) ಶುಕ್ರವಾರ (ಸೆ 30) ರೆಪೊ ದರಗಳನ್ನು 50 ಮೂಲಾಂಶಗಳಷ್ಟು (ಶೇ 0.5) ಹೆಚ್ಚಿಸಿದೆ. ಪ್ರಸ್ತುತ ದೇಶದಲ್ಲಿ ರೆಪೊ ದರದ ಪ್ರಮಾಣವು ಶೇ 5.90ಕ್ಕೆ ಮುಟ್ಟಿದ್ದು, ಗೃಹ ಸಾಲ ಸೇರಿದಂತೆ ಬಹುತೇಕ ಎಲ್ಲ ಬಗೆಯ ಸಾಲದ ಮೇಲಿನ ಬಡ್ಡಿ ದುಬಾರಿಯಾಗಲಿದೆ. ಹಣಕಾಸು ನೀತಿ ನಿರೂಪಣಾ ಸಮಿತಿಯ (Monetary Policy Committee – MPC) ಪರಾಮರ್ಶನಾ ಸಭೆಯ ನಂತರ, ವಿಷಯ ತಜ್ಞರ ಶಿಫಾರಸಿನಂತೆ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್​ ಈ ನಿರ್ಧಾರ ಪ್ರಕಟಿಸಿದ್ದಾರೆ. ಹಣಕಾಸು ನೀತಿ ನಿರೂಪಣಾ ಸಮಿತಿಯಲ್ಲಿ ಆರ್​ಬಿಐನ ಮೂವರು ಹಾಗೂ ಮೂರು ಬಾಹ್ಯ ಹಣಕಾಸು ತಜ್ಞರು ಇರುತ್ತಾರೆ. ಆರು ಮಂದಿಯ ಸಮಿತಿಯಲ್ಲಿ ಐವರು ಬಡ್ಡಿದರ ಹೆಚ್ಚಿಸಬೇಕೆಂದು ಅಭಿಪ್ರಾಯಪಟ್ಟಿದ್ದರು.

“ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಭಾರತೀಯ ಆರ್ಥಿಕತೆಯು ಚೇತರಿಸಿಕೊಳ್ಳುತ್ತಿದೆ. ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯೂ ಹೆಚ್ಚಾಗಿದೆ, ಹಣದುಬ್ಬರ ಹೆಚ್ಚಾಗಿದೆ” ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ಯುಎಸ್ ಡಾಲರ್ ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಉದಯೋನ್ಮುಖ ಮಾರುಕಟ್ಟೆ ಆರ್ಥಿಕತೆಗಳು ನಿಧಾನಗತಿಯ ಜಾಗತಿಕ ಬೆಳವಣಿಗೆ, ಹೆಚ್ಚಿದ ಆಹಾರ ಮತ್ತು ಇಂಧನ ಬೆಲೆಗಳು, ಸುಧಾರಿತ ಆರ್ಥಿಕ ನೀತಿಗಳಿಂದ ಸ್ಪಿಲ್‌ಓವರ್‌ಗಳು, ಸಾಲದ ತೊಂದರೆ ಮತ್ತು ತೀಕ್ಷ್ಣವಾದ ಕರೆನ್ಸಿ ಸವಕಳಿಯ ಸವಾಲುಗಳನ್ನು ಎದುರಿಸುತ್ತಿವೆ ಎಂದರು.

ಜಾಗತಿಕವಾಗಿ ಹಣಕಾಸು ಮಾರುಕಟ್ಟೆಯ ಎಲ್ಲಾ ವಿಭಾಗಗಳು ಪ್ರಕ್ಷುಬ್ಧತೆಯಲ್ಲಿವೆ. ಕೊರೋನಾ ಮಹಾಮಾರಿ ಸಾಂಕ್ರಾಮಿಕದ ಎರಡು ಆಘಾತಗಳು ಮತ್ತು ಉಕ್ರೇನ್‌ನಲ್ಲಿನ ಸಂಘರ್ಷದ ನಂತರ ಈಗ ನಾವು ಜಾಗತಿಕ ಕೇಂದ್ರ ಬ್ಯಾಂಕ್‌ಗಳ ಆಕ್ರಮಣಕಾರಿ ವಿತ್ತೀಯ ನೀತಿಗಳಿಂದ ಉಂಟಾಗುವ ಮತ್ತೊಂದು ಆಘಾತದ  ಮಧ್ಯದಲ್ಲಿದ್ದೇವೆ ಎಂದು ದಾಸ್ ಹೇಳಿದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 30 September 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು