AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಹಣದುಬ್ಬರ ನಿಯಂತ್ರಣಕ್ಕೆ ಆರ್​ಬಿಐ ಕಠಿಣ ಕ್ರಮ: ರೆಪೊ ದರ ಮತ್ತೆ ಶೇ 0.50 ಹೆಚ್ಚಳ

ಆರ್​ಬಿಐನ ಈ ನಿರ್ಧಾರದಿಂದ ಗೃಹ ಸಾಲ ಸೇರಿದಂತೆ ಎಲ್ಲ ಬಗೆಯ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಾಗಲಿದೆ.

Breaking News: ಹಣದುಬ್ಬರ ನಿಯಂತ್ರಣಕ್ಕೆ ಆರ್​ಬಿಐ ಕಠಿಣ ಕ್ರಮ: ರೆಪೊ ದರ ಮತ್ತೆ ಶೇ 0.50 ಹೆಚ್ಚಳ
TV9 Web
| Edited By: Rakesh Nayak Manchi|

Updated on:Sep 30, 2022 | 11:09 AM

Share

ಭಾರತದಲ್ಲಿ ಹಣದುಬ್ಬರ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India – RBI) ಶುಕ್ರವಾರ (ಸೆ 30) ರೆಪೊ ದರಗಳನ್ನು 50 ಮೂಲಾಂಶಗಳಷ್ಟು (ಶೇ 0.5) ಹೆಚ್ಚಿಸಿದೆ. ಪ್ರಸ್ತುತ ದೇಶದಲ್ಲಿ ರೆಪೊ ದರದ ಪ್ರಮಾಣವು ಶೇ 5.90ಕ್ಕೆ ಮುಟ್ಟಿದ್ದು, ಗೃಹ ಸಾಲ ಸೇರಿದಂತೆ ಬಹುತೇಕ ಎಲ್ಲ ಬಗೆಯ ಸಾಲದ ಮೇಲಿನ ಬಡ್ಡಿ ದುಬಾರಿಯಾಗಲಿದೆ. ಹಣಕಾಸು ನೀತಿ ನಿರೂಪಣಾ ಸಮಿತಿಯ (Monetary Policy Committee – MPC) ಪರಾಮರ್ಶನಾ ಸಭೆಯ ನಂತರ, ವಿಷಯ ತಜ್ಞರ ಶಿಫಾರಸಿನಂತೆ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್​ ಈ ನಿರ್ಧಾರ ಪ್ರಕಟಿಸಿದ್ದಾರೆ. ಹಣಕಾಸು ನೀತಿ ನಿರೂಪಣಾ ಸಮಿತಿಯಲ್ಲಿ ಆರ್​ಬಿಐನ ಮೂವರು ಹಾಗೂ ಮೂರು ಬಾಹ್ಯ ಹಣಕಾಸು ತಜ್ಞರು ಇರುತ್ತಾರೆ. ಆರು ಮಂದಿಯ ಸಮಿತಿಯಲ್ಲಿ ಐವರು ಬಡ್ಡಿದರ ಹೆಚ್ಚಿಸಬೇಕೆಂದು ಅಭಿಪ್ರಾಯಪಟ್ಟಿದ್ದರು.

“ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಭಾರತೀಯ ಆರ್ಥಿಕತೆಯು ಚೇತರಿಸಿಕೊಳ್ಳುತ್ತಿದೆ. ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯೂ ಹೆಚ್ಚಾಗಿದೆ, ಹಣದುಬ್ಬರ ಹೆಚ್ಚಾಗಿದೆ” ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ಯುಎಸ್ ಡಾಲರ್ ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಉದಯೋನ್ಮುಖ ಮಾರುಕಟ್ಟೆ ಆರ್ಥಿಕತೆಗಳು ನಿಧಾನಗತಿಯ ಜಾಗತಿಕ ಬೆಳವಣಿಗೆ, ಹೆಚ್ಚಿದ ಆಹಾರ ಮತ್ತು ಇಂಧನ ಬೆಲೆಗಳು, ಸುಧಾರಿತ ಆರ್ಥಿಕ ನೀತಿಗಳಿಂದ ಸ್ಪಿಲ್‌ಓವರ್‌ಗಳು, ಸಾಲದ ತೊಂದರೆ ಮತ್ತು ತೀಕ್ಷ್ಣವಾದ ಕರೆನ್ಸಿ ಸವಕಳಿಯ ಸವಾಲುಗಳನ್ನು ಎದುರಿಸುತ್ತಿವೆ ಎಂದರು.

ಜಾಗತಿಕವಾಗಿ ಹಣಕಾಸು ಮಾರುಕಟ್ಟೆಯ ಎಲ್ಲಾ ವಿಭಾಗಗಳು ಪ್ರಕ್ಷುಬ್ಧತೆಯಲ್ಲಿವೆ. ಕೊರೋನಾ ಮಹಾಮಾರಿ ಸಾಂಕ್ರಾಮಿಕದ ಎರಡು ಆಘಾತಗಳು ಮತ್ತು ಉಕ್ರೇನ್‌ನಲ್ಲಿನ ಸಂಘರ್ಷದ ನಂತರ ಈಗ ನಾವು ಜಾಗತಿಕ ಕೇಂದ್ರ ಬ್ಯಾಂಕ್‌ಗಳ ಆಕ್ರಮಣಕಾರಿ ವಿತ್ತೀಯ ನೀತಿಗಳಿಂದ ಉಂಟಾಗುವ ಮತ್ತೊಂದು ಆಘಾತದ  ಮಧ್ಯದಲ್ಲಿದ್ದೇವೆ ಎಂದು ದಾಸ್ ಹೇಳಿದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 am, Fri, 30 September 22

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!