AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023 ಮಧ್ಯಮ ವರ್ಗಕ್ಕೆ ಬಜೆಟ್​​​ನಲ್ಲಿ ಏನೇನಿರುತ್ತದೆ?; ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು

ನಾನು ಮಧ್ಯಮ ವರ್ಗಕ್ಕೆ ಸೇರಿದವಳು ಮತ್ತು ನನ್ನನ್ನು ಮಧ್ಯಮ ವರ್ಗ ಎಂದು ಗುರುತಿಸಿಕೊಳ್ಳುತ್ತೇನೆ ಆದ್ದರಿಂದ ನಾನು ಅವರನ್ನು ಅರ್ಥಮಾಡಿಕೊಳ್ಳಬಲ್ಲೆ. ಮೋದಿ ಸರ್ಕಾರವು ಇಲ್ಲಿಯವರೆಗೆ ಯಾವುದೇ ಬಜೆಟ್‌ನಲ್ಲಿ ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ

Budget 2023 ಮಧ್ಯಮ ವರ್ಗಕ್ಕೆ ಬಜೆಟ್​​​ನಲ್ಲಿ ಏನೇನಿರುತ್ತದೆ?; ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು
ನಿರ್ಮಲಾ ಸೀತಾರಾಮನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 16, 2023 | 2:39 PM

Share

ಕೇಂದ್ರ ಬಜೆಟ್ 2023 (Budget 2023) ಅನ್ನು ಘೋಷಿಸಲು ಸಜ್ಜಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman )ಕೇಂದ್ರ ಸರ್ಕಾರವು ಮಧ್ಯಮ ವರ್ಗದವರಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದಿದ್ದಾರೆ. ನಾನು ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದವಳು, ಹಾಗಾಗಿ ಅವರು ಎದುರಿಸುತ್ತಿರುವ ಒತ್ತಡವನ್ನು ಅರ್ಥಮಾಡಿಕೊಳ್ಳಬಲ್ಲೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಇದುವರೆಗೆ ಯಾವುದೇ ಬಜೆಟ್‌ನಲ್ಲಿ ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದಿದ್ದಾರೆ ನಿರ್ಮಲಾ ಸೀತಾರಾಮನ್. ನಾನು ಮಧ್ಯಮ ವರ್ಗಕ್ಕೆ ಸೇರಿದವಳು ಮತ್ತು ನನ್ನನ್ನು ಮಧ್ಯಮ ವರ್ಗ ಎಂದು ಗುರುತಿಸಿಕೊಳ್ಳುತ್ತೇನೆ. ಆದ್ದರಿಂದ ನಾನು ಅವರನ್ನು ಅರ್ಥಮಾಡಿಕೊಳ್ಳಬಲ್ಲೆ. ಮೋದಿ ಸರ್ಕಾರವು (Modi Government) ಇಲ್ಲಿಯವರೆಗೆ ಯಾವುದೇ ಬಜೆಟ್‌ನಲ್ಲಿ ಮಧ್ಯಮ ವರ್ಗದ ಮೇಲೆ ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಅದೇ ವೇಳೆ ಐದು ಲಕ್ಷದವರೆಗೆ ಸಂಬಳ ಪಡೆಯುವ ಜನರಿಗೆ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಂಬರುವ ಬಜೆಟ್‌ನಲ್ಲಿ ಸರ್ಕಾರವು “ಮಧ್ಯಮ ವರ್ಗದವರಿಗಾಗಿ ಕೆಲಸ” ಮುಂದುವರಿಸಲಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ. “ಮಧ್ಯಮ ವರ್ಗದವರು ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸುತ್ತಾರೆ ಮತ್ತು ನಾವು ಮೆಟ್ರೋವನ್ನು 27 ಸ್ಥಳಗಳಿಗೆ ತಂದಿದ್ದೇವೆ. ಬಹಳಷ್ಟು ಮಧ್ಯಮ ವರ್ಗದ ಜನರು ಉದ್ಯೋಗದ ಹುಡುಕಾಟದಲ್ಲಿ ನಗರಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ. ನಾವು ಸ್ಮಾರ್ಟ್ ಸಿಟಿಗಳ ಗುರಿಯತ್ತ ಗಮನಹರಿಸುತ್ತಿದ್ದೇವೆ. ನಾವು ಮಧ್ಯಮ ವರ್ಗದವರಿಗೆ ನಮ್ಮ ಕೆಲಸವನ್ನು ಮುಂದುವರಿಸುತ್ತೇವೆ ಎಂದು ಸಚಿವೆ ಹೇಳಿದ್ದಾರೆ.

ಇದನ್ನೂ ಓದಿ:Budget Session 2023: ಜನವರಿ 31ರಿಂದ ಏಪ್ರಿಲ್ 6ರ ವರೆಗೆ ಸಂಸತ್ ಬಜೆಟ್ ಅಧಿವೇಶನ; ಪ್ರಲ್ಹಾದ್ ಜೋಶಿ

ದೇಶದ ಜನಸಂಖ್ಯೆಯ ಬಹುಪಾಲು ಭಾಗವನ್ನು ಒಳಗೊಂಡಿರುವ ಭಾರತದ ಮಧ್ಯಮ ವರ್ಗವು ಫೆಬ್ರವರಿ 1 ರಂದು ಮುಂಬರುವ ಬಜೆಟ್‌ನ ಮುಂದೆ ಹೆಚ್ಚಿನ ನಿರೀಕ್ಷೆಗಳನ್ನು ಹೊಂದಿದೆ. ಇದು 2024 ರ ಸಾರ್ವತ್ರಿಕ ಚುನಾವಣೆಯ ಮೊದಲು ಆಡಳಿತ ಸರ್ಕಾರದ ಕೊನೆಯ ಪೂರ್ಣ ಬಜೆಟ್ ಆಗಿರುವುದರಿಂದ, ನಿರೀಕ್ಷೆಗಳು ಹೆಚ್ಚಾಗಿ ತೆರಿಗೆ ಪರಿಹಾರ, ಆರೋಗ್ಯ ಮತ್ತು ಉದ್ಯೋಗಗಳ ಸುತ್ತ ಕೇಂದ್ರೀಕೃತವಾಗಿವೆ.

ಆದಾಗ್ಯೂ, ಹದಗೆಡುತ್ತಿರುವ ಜಾಗತಿಕ ಆರ್ಥಿಕ ವಾತಾವರಣವು FY24 ರಲ್ಲಿ ಭಾರತದ GDP ಬೆಳವಣಿಗೆಯನ್ನು ಕುಂಠಿತಗೊಳಿಸಬಹುದಾದ್ದರಿಂದ, ಮೇಲೆ ತಿಳಿಸಲಾದ ಎಲ್ಲಾ ಬೇಡಿಕೆಗಳನ್ನು ಪೂರೈಸಲು ಸರ್ಕಾರವು ಅವಕಾಶವನ್ನು ಹೊಂದಿಲ್ಲದಿರಬಹುದು. ವಿತ್ತೀಯ ಕೊರತೆಯು ಈಗಾಗಲೇ ವಿಸ್ತರಿಸಲ್ಪಟ್ಟಿದೆ. ಚಾಲ್ತಿ ಖಾತೆ ಕೊರತೆ (ಸಿಎಡಿ) ಒಂಬತ್ತು ವರ್ಷಗಳ ಗರಿಷ್ಠ ಮಟ್ಟದಲ್ಲಿರುವಾಗ ತಜ್ಞರು ಬಜೆಟ್‌ನಲ್ಲಿ ಕಡಿಮೆ ವೆಚ್ಚವನ್ನು ನಿರೀಕ್ಷಿಸುತ್ತಾರೆ, ಕೆಲವು ಉತ್ಪನ್ನಗಳ ಮೇಲೆ ಕಸ್ಟಮ್ಸ್ ಸುಂಕ ಹೆಚ್ಚಳದ ಸಾಧ್ಯತೆಯೂ ಇದೆ. ಮೂಲಸೌಕರ್ಯ ಮತ್ತು ಗ್ರಾಮೀಣ ವಲಯಗಳನ್ನು ಉತ್ತೇಜಿಸಲು ಕೆಲವು ಖರ್ಚುಗಳು ಇರಬಹುದಾದರೂ, ಸರ್ಕಾರವು ಯಾವುದೇ ನೇರ ತೆರಿಗೆ ಪರಿಹಾರವನ್ನು ಒದಗಿಸುವುದನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Mon, 16 January 23

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ