AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2024 PMGSY: ಕೇಂದ್ರ ಬಜೆಟ್​ನಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಹೆಚ್ಚಿನ ಒತ್ತು

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2024-25ನೇ ಸಾಲಿನ ಬಜೆಟ್​ ಮಂಡನೆ ಮಾಡಿದ್ದಾರೆ. ಹಲವು ಘೋಷಣೆಗಳನ್ನು ಮಾಡಿದ್ದು, ಅದರಲ್ಲಿ ಗ್ರಾಮ ಸಡಕ್ ಯೋಜನೆ ಕೂಡ ಒಂದು. ಗ್ರಾಮ ಸಡಕ್ ಯೋಜನೆ ಎಂದರೇನು ಇಲ್ಲಿದೆ ಮಾಹಿತಿ.

Budget 2024 PMGSY: ಕೇಂದ್ರ ಬಜೆಟ್​ನಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಹೆಚ್ಚಿನ ಒತ್ತು
ರಸ್ತೆImage Credit source: Mint
ನಯನಾ ರಾಜೀವ್
|

Updated on:Jul 23, 2024 | 3:03 PM

Share

ಪ್ರಧಾನಮಂತ್ರಿ ಗ್ರಾಮ ಸಡಕ್​ ಯೋಜನೆಯ ನಾಲ್ಕನೇ ಹಂತವನ್ನು ಪ್ರಾರಂಭಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದು ಕೇಂದ್ರ ಸರ್ಕಾರದ ಅತ್ಯಂತ ಯಶಸ್ವಿ ಯೋಜನೆಯಲ್ಲಿ ಒಂದಾಗಿದೆ. ದೇಶದ 25 ಸಾವಿರ ಹಳ್ಳಿಗಳಿಗೆ ಸರ್ವಋತು ರಸ್ತೆಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ. ಹಳ್ಳಿಗಳನ್ನು ಪಕ್ಕಾ ರಸ್ತೆಗಳೊಂದಿಗೆ ಸಂಪರ್ಕಿಸಲು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ನಾಲ್ಕನೇ ಹಂತವನ್ನು ಪ್ರಾರಂಭಿಸಲಿದ್ದಾರೆ.

ಬಿಹಾರದಂತಹ ರಾಜ್ಯಗಳಲ್ಲಿ ಪ್ರತಿ ವರ್ಷ ಪ್ರವಾಹ ಸಮಸ್ಯೆ ಎದುರಾಗುತ್ತದೆ. ಈ ಪ್ರದೇಶಗಳಲ್ಲಿ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡುತ್ತೇವೆ. ಇದರೊಂದಿಗೆ ದೇಶದ ಇತರೆ ರಾಜ್ಯಗಳ ರಸ್ತೆಗಳ ಪುನರ್ ನಿರ್ಮಾಣ ಪ್ರಕ್ರಿಯೆಗೂ ಗಮನಹರಿಸಲಾಗುವುದು.

ಬಿಹಾರದ ವಿವಿಧ ರಸ್ತೆ ಯೋಜನೆಗಳಡಿ 26 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುವ ಗುರಿಯನ್ನು ನಿಗದಿಪಡಿಸಲಾಗಿದೆ. ಇದರೊಂದಿಗೆ ಬಿಹಾರದಲ್ಲಿ ಹೊಸ ಹೆದ್ದಾರಿಗಳನ್ನು ನಿರ್ಮಿಸಲಾಗುವುದು ಮತ್ತು ಗ್ರಾಮೀಣ ಮಟ್ಟದವರೆಗೆ ರಸ್ತೆಗಳ ಜಾಲವನ್ನು ಹಾಕಲಾಗುವುದು.

ಭಾರತ ಸರ್ಕಾರವು ಈ ಯೋಜನೆಯನ್ನು 2000 ರಲ್ಲಿ ಪ್ರಾರಂಭಿಸಿತು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯು ಹಳ್ಳಿಗಳಲ್ಲಿನ ರಸ್ತೆಗಳನ್ನು ನಗರಗಳಲ್ಲಿ ಕಾಂಕ್ರೀಟ್ ರಸ್ತೆಗಳೊಂದಿಗೆ ಸಂಪರ್ಕಿಸುವ ಗುರಿಯನ್ನು ಹೊಂದಿದೆ. ಗ್ರಾಮ ಪಂಚಾಯತಿಗಳು, ಪಂಚಾಯತಿ ಸಮಿತಿಗಳು ಮತ್ತು ಪುರಸಭೆಗಳಿಂದ ನಿರ್ವಹಿಸಲ್ಪಡುವ ಈ ಯೋಜನೆಯು ಪರಿಣಾಮಕಾರಿ ಗ್ರಾಮೀಣ ರಸ್ತೆಗಳನ್ನು ಸುಗಮಗೊಳಿಸುತ್ತದೆ.

ಮತ್ತಷ್ಟು ಓದಿ: ಎನ್​ಪಿಎಸ್​-ವಾತ್ಸಲ್ಯ ಯೋಜನೆ ಎಂದರೇನು? ಇದರಿಂದ ಪೋಷಕರು, ಮಕ್ಕಳಿಗೇನು ಪ್ರಯೋಜನ

ಈ ಹಂತವು ಈಗಾಗಲೇ ಸಂಪರ್ಕ ಹೊಂದಿದ ಗ್ರಾಮಗಳಲ್ಲಿನ ರಸ್ತೆಗಳನ್ನು ದುರಸ್ತಿ ಮಾಡುವತ್ತ ಗಮನಹರಿಸುತ್ತದೆ. PMGSY ಸಂಪರ್ಕವನ್ನು ಹೆಚ್ಚಿಸುವ ಮೂಲಕ ಗ್ರಾಮೀಣ ನಾಗರಿಕರ ಜೀವನಮಟ್ಟವನ್ನು ಹೆಚ್ಚಿಸುತ್ತದೆ. ಸಬಲೀಕರಣ ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸುತ್ತದೆ. ಈ ಯೋಜನೆಯೊಂದಿಗೆ ಗ್ರಾಮೀಣ ಸಮುದಾಯಗಳು ಅಗತ್ಯ ಸೇವೆಗಳಿಗೆ ಪ್ರವೇಶವನ್ನು ಪಡೆಯುತ್ತವೆ. ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಸುಗಮಗೊಳಿಸುತ್ತದೆ ಮತ್ತು ನಿವಾಸಿಗಳು ಸ್ವತಂತ್ರವಾಗಿ ತಿರುಗಾಡಲು ಅನುವು ಮಾಡಿಕೊಡುತ್ತದೆ.

2024-25ರ ಮಧ್ಯಂತರ ಬಜೆಟ್‌ನಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ 19,000 ಕೋಟಿಗಳನ್ನು ರೂ.ಗಳನ್ನು ಮೀಸಲಿಟ್ಟರು. ಕೇಂದ್ರ ಸರ್ಕಾರವು ಡಿಸೆಂಬರ್ 25, 2000 ರಂದು ಗ್ರಾಮೀಣ ಪ್ರದೇಶಗಳಲ್ಲಿ ಸೂಕ್ತ ಸಂಪರ್ಕವಿಲ್ಲದ ವಾಸಸ್ಥಳಗಳಿಗೆ ಎಲ್ಲಾ ಹವಾಮಾನ ರಸ್ತೆ ಸಂಪರ್ಕವನ್ನು ಒದಗಿಸಲು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯನ್ನು ಪ್ರಾರಂಭಿಸಿತು.

2023-24 ರ ಹಣಕಾಸು ವರ್ಷದಲ್ಲಿ PMGSY ಗಾಗಿ ಬಜೆಟ್ ಹಂಚಿಕೆಯು ಸುಮಾರು 19,000ರೂ. ಕೋಟಿಗಳಷ್ಟಿತ್ತು, ಇದು FY 2022-23 ರ ಬಜೆಟ್ ಹಂಚಿಕೆ ಮತ್ತು ಪರಿಷ್ಕೃತ ಅಂದಾಜಿನಂತೆಯೇ ಇತ್ತು. ಮೊದಲ ಮತ್ತು ಎರಡನೇ ಹಂತದ ಯೋಜನೆಯಡಿ 7 ಲಕ್ಷ ಕಿಲೋಮೀಟರ್‌ಗೂ ಹೆಚ್ಚು ರಸ್ತೆಗಳನ್ನು ನಿರ್ಮಿಸಲಾಗಿದ್ದು, ಇದು ಪ್ರಸ್ತುತ ಮೂರನೇ ಹಂತದಲ್ಲಿದೆ.

ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸರ್ ಭಾಗಲ್ಪುರ್ ಎಕ್ಸ್‌ಪ್ರೆಸ್‌ವೇ, ಬೋಧಗಯಾ-ರಾಜ್‌ಗೀರ್ ವೈಶಾಲಿ ದರ್ಭಾಂಗ ಎಕ್ಸ್‌ಪ್ರೆಸ್‌ವೇ ನಿರ್ಮಿಸಲಾಗುವುದು. ಇದಲ್ಲದೆ, ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ದ್ವಿಪಥ ಸೇತುವೆಯನ್ನು ಸಹ ನಿರ್ಮಿಸಲಾಗುವುದು.

ಇದಕ್ಕಾಗಿ 26000 ಕೋಟಿ ರೂ. ಇದಲ್ಲದೇ ಬಿಹಾರದ ಗಯಾದಲ್ಲಿ ಕಾಶಿ ಮಾದರಿಯಲ್ಲಿ ವಿಷ್ಣುಪಾದ ದೇವಸ್ಥಾನ ಮತ್ತು ಮಹಾಬೋಧಿ ಮಂದಿರ ಕಾರಿಡಾರ್ ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:02 pm, Tue, 23 July 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ