AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೋ ಕಟ್ಟಿ, ಇನ್ಯಾರಿಗೋ ಮನೆ ಮಾರುತ್ತಿದ್ದ ಈ ಬ್ಯುಲ್ಡರ್; ಇಡಿ ನೋಟೀಸ್

Builder misusing PM Awas Yojana: ಗುರುಗ್ರಾಮ್ ಮೂಲದ ಒಎನ್​ಬಿಪಿಎಲ್ ಎನ್ನುವ ಗೃಹ ನಿರ್ಮಾಣ ಸಂಸ್ಥೆ ಹಾಗೂ ಅದರ ಮಾಲೀಕರ ಮೇಲೆ ಇಡಿ ಕೇಸ್ ಹಾಕಿದೆ. ಪಿಎಂ ಆವಾಸ್ ಯೋಜನೆ ಅಡಿ ಮಂಜೂರಾದ ಮನೆಗಳಿಂದ ಅಕ್ರಮವಾಗಿ ಹಣ ಮಾಡಿರುವ ಆರೋಪ ಇದೆ. ಮನೆ ಮಂಜೂರಾತಿಯನ್ನು ಸುಳ್ಳು ನೆವ ಹೇಳಿ ರದ್ದು ಮಾಡಿ ಅದನ್ನು ಬೇರೆಯವರಿಗೆ ಹೆಚ್ಚಿನ ಬೆಲೆಗೆ ಮಾರುವ ಅಕ್ರಮ ನಡೆದಿತ್ತೆನ್ನಲಾಗಿದೆ.

ಯಾರಿಗೋ ಕಟ್ಟಿ, ಇನ್ಯಾರಿಗೋ ಮನೆ ಮಾರುತ್ತಿದ್ದ ಈ ಬ್ಯುಲ್ಡರ್; ಇಡಿ ನೋಟೀಸ್
ಸಾಂದರ್ಭಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 08, 2025 | 5:55 PM

Share

ನವದೆಹಲಿ, ಡಿಸೆಂಬರ್ 8: ದೆಹಲಿಯ ಸಮೀಪದಲ್ಲಿರುವ ಗುರುಗ್ರಾಮ್​ನ ಓಷನ್ ಸೆವೆನ್ ಬ್ಯುಲ್ಡ್​ಟೆಕ್ ಪ್ರೈವೇಟ್ ಲಿಮಿಟೆಡ್ ಎನ್ನುವ ಕಂಪನಿಯ ಮೇಲೆ ಜಾರಿ ನಿರ್ದೇಶನಾಲಯ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದೆ. ಪಿಎಂ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ಬಡವರಿಗೆಂದು ನಿರ್ಮಿಸಿದ ಮನೆಯನ್ನು ಹೆಚ್ಚಿನ ಹಣಕ್ಕೆ ಬೇರೆಯವರಿಗೆ ಮಾರಿದ ಆರೋಪ ಈ ಒಎಸ್​ಬಿಪಿಎಲ್ ಕಂಪನಿ ಮೇಲಿದೆ. ತನಿಖೆಯ ವೇಳೆ, ಈ ಕಂಪನಿಯವರು ವಂಚನೆ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗಿದೆ.

ಕಳೆದ ತಿಂಗಳು (ನ. 13) ಒಎಸ್​ಬಿಪಿಎಲ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಸ್ವರಾಜ್ ಸಿಂಗ್ ಯಾದವ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಈ ಕಂಪನಿಯು ಪಿಎಂಎವೈ ಯೋಜನೆಯನ್ನು ಲಾಭಕ್ಕೆ ದುರ್ಬಳಕೆ ಮಾಡಿಕೊಳ್ಳುವಂತಹ ವ್ಯವಸ್ಥೆ ರೂಪಿಸಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಇಂಡಿಗೋ ಏರ್ಲೈನ್ಸ್ ದಿಢೀರ್ ಬಿಕ್ಕಟ್ಟಿಗೆ ಸಿಲುಕಲು ಹೊಸ ಎಫ್​ಡಿಟಿಎಲ್ ನಿಯಮಗಳೇ ಕಾರಣ; ಏನಿದೆ ರೂಲ್ಸ್?

ಆವಾಸ್ ಯೋಜನೆಯನ್ನು ಒಎಸ್​ಬಿಪಿಎಲ್ ದುರ್ಬಳಕೆ ಮಾಡಿಕೊಂಡಿದ್ದು ಹೀಗೆ…

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಫ್ಲ್ಯಾಟ್​ಗಳನ್ನು ಒಎಸ್​ಬಿಪಿಎಲ್ ಕಂಪನಿ ಸುಳ್ಳು ಕಾರಣಗಳನ್ನು ನೀಡಿ ರದ್ದುಗೊಳಿಸುವ ಒಂದು ವ್ಯವಸ್ಥೆ ಮಾಡಿತ್ತು. ರದ್ದಾದ ಕೆಲ ಫ್ಲಾಟ್​ಗಳನ್ನು ಹೆಚ್ಚಿನ ಮೊತ್ತಕ್ಕೆ ಹೊಸ ಖರೀದಿದಾರರಿಗೆ ಮಾರಲಾಗುತ್ತಿತ್ತು.

ಮೂಲಬೆಲೆ 26.5 ಲಕ್ಷ ರೂ ಇದ್ದ ಒಂದು ಫ್ಲಾಟ್ ಅನ್ನು 40ರಿಂದ 50 ಲಕ್ಷ ರೂಗೆ ಮರು ಮಾರಾಟ ಮಾಡಲಾಗುತ್ತಿತ್ತು. ಈ ಅಕ್ರಮ ಇದಷ್ಟೇ ಅಲ್ಲ, ಮೊದಲಿನ ಅರ್ಜಿದಾರರು ಮಾಡಿದ್ದ ಹಣವನ್ನೂ ಈ ಕಂಪನಿ ಗುಳುಂ ಮಾಡುತ್ತಿತ್ತು. ಒಂದೇ ಫ್ಲಾಟ್ ಅನ್ನು ಇಬ್ಬರಿಗೆ ಮಾರಿ ಭಾರೀ ಲಾಭ ಮಾಡುತ್ತಿತ್ತು ಈ ಕಂಪನಿ ಎನ್ನಲಾಗಿದೆ.

ಇದನ್ನೂ ಓದಿ: ನಕಲಿ ವಜ್ರ ಗುರುತಿಸುವುದು ಹೇಗೆ? ಮನೆಯಲ್ಲೇ ಸುಲಭವಾಗಿ ಮಾಡಬಹುದಾದ ಪರೀಕ್ಷೆಗಳು

ಒಎಸ್​ಬಿಪಿಎಲ್​ನ ಎಂಡಿ ಸ್ವರಾಜ್ ಸಿಂಗ್ ಯಾದವ್ ಅವರು ಖರೀದಿದಾರರಿಂದ ಅಕ್ರಮವಾಗಿ ಪಡೆದ 222 ಕೋಟಿ ರೂ ಹಣವನ್ನು ಶೆಲ್ ಕಂಪನಿಗಳ ಮೂಲಕ ಹೊರಗೆ ಸಾಗಿಸುತ್ತಿದ್ದ. ಗುರುಗ್ರಾಮ್, ಮಹಾರಾಷ್ಟ್ರ, ಹಾಗೂ ರಾಜಸ್ಥಾನದಲ್ಲಿ ಇವರು ಹಾಗೂ ಇವರ ಕಂಪನಿಯ ಆಸ್ತಿಗಳನ್ನು ಮಾರಿ ಹವಾಲ ಮೂಲಕ ವಿದೇಶಕ್ಕೆ ಕಳುಹಿಸಲಾಗುತ್ತಿತ್ತು. ಅಮೆರಿಕಕ್ಕೆ ಹೋಗಿದ್ದ ಈತನ ಹೆಂಡತಿಯ ಹೆಸರಿನಲ್ಲಿದ್ದ ಬ್ಯಾಂಕ್ ಖಾತೆ ಮೂಲಕ ವಿದೇಶಕ್ಕೆ ಹೋಗುತ್ತಿತ್ತು ಆ ಹಣ. ಇದೀಗ, ಒಎಸ್​ಬಿಪಿಎಲ್​ನ ಆಸ್ತಿಗಳನ್ನು ಜಫ್ತಿ ಮಾಡಿಕೊಳ್ಳಲು ಇಡಿ ಯತ್ನಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ