AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಮೋಹನ್ ರಾಜೀನಾಮೆ; ಬೈಜುಸ್​ಗೆ ಸಿಇಒ ಆಗಿ ಮರಳಿದ ರವೀಂದ್ರನ್; ಮೂರು ಸ್ವತಂತ್ರ ಯೂನಿಟ್​ಗಳಾಗಿ ಬೈಜುಸ್ ವಿಭಜನೆ

Byju Raveedran comeback as CEO: ಬೈಜುಸ್ ಸಿಇಒ ಅರ್ಜುನ್ ಮೋಹನ್ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಸಂಸ್ಥಾಪಕ ಬೈಜು ರವೀಂದ್ರನ್ ಸಿಇಒ ಆಗಿ ಮರಳಿದ್ದಾರೆ. ಇದರೊಂದಿಗೆ ಬೈಜುಸ್ 3.0 ಕಾಲ ಶುರುವಾಗಿದೆ. ಬೈಜುಸ್ ಲರ್ನಿಂಗ್ ಆ್ಯಪ್, ಆನ್ಲೈನ್ ಕ್ಲಾಸ್ ಮತ್ತು ಟ್ಯೂಷನ್ ಕ್ಲಾಸ್ ಹಾಗು ಟೆಸ್ಟ್ ಪ್ರಿಪರೇಶನ್ ಹೀಗೆ ಮೂರು ಘಟಕಗಳಾಗಿ ಬೈಜುಸ್ ನಿರ್ವಹಣೆ ಆಗಲಿದೆ. ಈ ಮೂರು ಘಟಕಗಳು ಪ್ರತ್ಯೇಕ ನಾಯಕತ್ವದೊಂದಿಗೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲಿವೆ.

ಅರ್ಜುನ್ ಮೋಹನ್ ರಾಜೀನಾಮೆ; ಬೈಜುಸ್​ಗೆ ಸಿಇಒ ಆಗಿ ಮರಳಿದ ರವೀಂದ್ರನ್; ಮೂರು ಸ್ವತಂತ್ರ ಯೂನಿಟ್​ಗಳಾಗಿ ಬೈಜುಸ್ ವಿಭಜನೆ
ಬೈಜು ರವೀಂದ್ರನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 15, 2024 | 2:23 PM

Share

ಬೆಂಗಳೂರು, ಏಪ್ರಿಲ್ 15: ಸಂಕಷ್ಟ ಮತ್ತು ವಿವಾದಗಳಿಂದ ಜರ್ಝರಿತವಾಗಿರುವ ಬೈಜುಸ್ ಸಂಸ್ಥೆಯ ಸಿಇಒ ಅರ್ಜುನ್ ಮೋಹನ್ (Arjun Mohan) ಪದತ್ಯಾಗ ಮಾಡಿದ್ದಾರೆ. ಬೈಜುಸ್ ಸಂಸ್ಥಾಪಕ ಬೈಜು ರವೀಂದ್ರನ್ (Byju Raveendran) ಅವರೇ ಸಿಇಒ ಆಗಿ ಕಂಪನಿಯ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಕಂಪನಿಯ ನಿತ್ಯದ ಚಟುವಟಿಕೆಗಳ ಮೇಲೆ ರವೀಂದ್ರನ್ ಅವರೇ ಖುದ್ದಾಗಿ ನಿಗಾ ಇಡಲಿದ್ದಾರೆ. ನಿರ್ಗಮಿತ ಅರ್ಜುನ್ ಮೋಹನ್ ಅವರು ಬಾಹ್ಯ ಸಲಹೆಗಾರರಾಗಿ ಬೈಜೂಸ್ ಜೊತೆ ನಂಟು ಹೊಂದಿರಲಿದ್ದಾರೆ. ಆಡಳಿತ ನಿರ್ಧಾರಗಳಲ್ಲಿ ಅವರ ಪಾತ್ರ ಇರುವುದಿಲ್ಲ. ಇದರೊಂದಿಗೆ ಅವರು ಬಹುತೇಕ ಬೈಜುಸ್​ನಿಂದ ನಿರ್ಗಮಿಸಿದಂತಾಗುತ್ತದೆ.

ಆಕಾಶ್ ಸಂಸ್ಥೆಯ ಸಿಇಒ ಸ್ಥಾನದ ಮೇಲಿತ್ತು ಅರ್ಜುನ್ ಮೋಹನ್ ಕಣ್ಣು

ಅರ್ಜುನ್ ಮೋಹನ್ ಈ ಮೊದಲು ಬೈಜುಸ್​ನಲ್ಲಿ ಚೀಫ್ ಬಿಸಿನೆಸ್ ಆಗಿದ್ದರು. 2020ರಲ್ಲಿ ರಾಜೀನಾಮೆ ನೀಡಿ ಅಪ್​ಗ್ರಾಡ್​ಗೆ ಸಿಇಒ ಆಗಿದ್ದರು. ಬೈಜುಸ್​ಗೆ ಮರಳಿದ ಅವರು ಇಂಟರ್ನ್ಯಾಷನಲ್ ಬಿಸಿನೆಸ್​ ವಿಭಾಗದ ಮುಖ್ಯಸ್ಥರಾಗಿದ್ದರು. ಕಳೆದ 10 ತಿಂಗಳಿಂದ ಅವರು ಸಿಇಒ ಆಗಿಯೂ ಆಡಳಿತ ನಡೆಸಿದ್ದಾರೆ.

ಇದನ್ನೂ ಓದಿ: ವೃದ್ಧರಿಗೆ ಬಿಜೆಪಿಯಿಂದ ಉಚಿತ ಆರೋಗ್ಯ ವಿಮೆ ಭರವಸೆ; ಏನಿದು ಆಯುಷ್ಮಾನ್ ಭಾರತ್ ಸ್ಕೀಮ್?

ಸಂಕಷ್ಟದ ಸಂದರ್ಭದಲ್ಲಿ ಬೈಜೂಸ್ ಅನ್ನು ಮುನ್ನಡೆಸಿರುವ ಅರ್ಜುನ್ ಮೋಹನ್, ಸುಮಾರು ನಾಲ್ಕರಿಂದ ಐದು ಸಾವಿರ ಉದ್ಯೋಗಿಗಳನ್ನು ಲೇ ಆಫ್ ಮಾಡುವ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಬೈಜೂಸ್​ನ ವ್ಯವಹಾರ ಕಡಿಮೆ ಆಗುತ್ತಿದ್ದಂತೆಯೇ ಅರ್ಜುನ್ ಮೋಹನ್ ಪರ್ಯಾಯ ಮಾರ್ಗ ಅವಲೋಕಿಸಿದ್ದರು. ಬೈಜೂಸ್​ನ ಮಾಲಕ ಸಂಸ್ಥೆ ಥಿಂಕ್ ಅಂಡ್ ಲರ್ನ್​ನ ಸಹ-ಕಂಪನಿಯಾದ ಆಕಾಶ್​ಗೆ ಸಿಇಒ ಆಗಲು ಅವರು ಪ್ರಯತ್ನಿಸಿದ್ದರು. ಆದರೆ, ಅದು ಬೇರೆಯವರಿಗೆ ಹೋಯಿತು. ಈಗ ಬೈಜುಸ್​ನಲ್ಲಿ ತಮಗೆ ಸೂಕ್ತ ಹುದ್ದೆ ಅಥವಾ ಜವಾಬ್ದಾರಿ ಇಲ್ಲ ಎಂಬುದು ಖಾತ್ರಿಯಾದ ಬಳಿಕ ನಿರ್ಗಮಿಸುವ ನಿರ್ಧಾರಕ್ಕೆ ಬಂದರು ಎನ್ನಲಾಗಿದೆ.

ಬೈಜುಸ್ 3.0: ಮೂರು ಅಂಶಗಳ ಮೇಲೆ ಗಮನ

ಬೈಜುಸ್ ಸ್ಥಾಪನೆಯಾದ ಬಳಿಕ ಮೂರು ಬಾರಿ ನಾಯಕತ್ವ ಬದಲಾವಣೆ ಆಗಿದೆ. 2023ರಲ್ಲಿ ಅರ್ಜುನ್ ಮೋಹನ್ ಸಿಇಒ ಆಗಿದ್ದರು. ಈಗ ಬೈಜು ರವೀಂದ್ರನ್ ಮರಳಿದ್ದಾರೆ. ಬೈಜುಸ್ 3.0ನ ಹೊಸ ಆಡಳಿತ ಮೂರು ಅಂಶಗಳತ್ತ ಗಮನ ಕೊಡಲು ನಿರ್ಧರಿಸಿದೆ.

ಇದನ್ನೂ ಓದಿ: ಅಶ್ನೀರ್ ಗ್ರೋವರ್​ರಿಂದ ಹೊಸ ಸ್ಟಾರ್ಟಪ್; ಆಸ್ಪತ್ರೆ ಚಿಕಿತ್ಸೆಗೆ ಸಾಲ ಕೊಡುವ ಝೀರೋ ಪೇ; ಹೇಗೆ ಪಡೆಯುವುದು ಈ ಪ್ರೀ ಅಪ್ರೂವ್ಡ್ ಲೋನ್?

ಬೈಜುಸ್ ಲರ್ನಿಂಗ್ ಆ್ಯಪ್ ಒಂದು, ಆನ್ಲೈನ್ ಕ್ಲಾಸ್ ಮತ್ತು ಟ್ಯೂಷನ್ ಸೆಂಟರ್​ಗಳ ಬಿಸಿನೆಸ್ ಇನ್ನೊಂದು. ಪರೀಕ್ಷಾ ಸಿದ್ಧತೆಗಳ ಬಿಸಿನೆಸ್ ಮೂರನೆಯದು. ಈ ಮೂರೂ ಘಟಕಗಳು ಪ್ರತ್ಯೇಕ ನಾಯಕತ್ವದೊಂದಿಗೆ ಸ್ವತಂತ್ರವಾಗಿ ಕಾರ್ಯ ವಹಿಸಲಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು