AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Byju’s: ಬೈಜೂಸ್​ಗೆ ನಿಲ್ಲದ ಸಂಕಷ್ಟ, ಸಾಲಗಾರರ ಕಾಟ; ಬಡ್ಡಿಕಟ್ಟಲೂ ಕಷ್ಟ; ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಪರದಾಟ

Loan Repayment Of Byju's: ಸಾಲ ಮರುರಚನೆಗೆ ಯತ್ನಿಸಿ ಸಾಲಗಾರರೊಂದಿಗೆ ಬೈಜೂಸ್ ಮಾಡಿದ ಪ್ರಯತ್ನ ವಿಫಲವಾಗಿದೆ. 1.2 ಬಿಲಿಯನ್ ಡಾಲರ್ ಸಾಲ ಹೊಂದಿರುವ ಬೈಜೂಸ್ ಇವತ್ತು 40 ಮಿಲಿಯನ್ ಡಾಲರ್​ನಷ್ಟು ಬಡ್ಡಿ ಕಟ್ಟಬೇಕಿದೆ.

Byju's: ಬೈಜೂಸ್​ಗೆ ನಿಲ್ಲದ ಸಂಕಷ್ಟ, ಸಾಲಗಾರರ ಕಾಟ; ಬಡ್ಡಿಕಟ್ಟಲೂ ಕಷ್ಟ; ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಪರದಾಟ
ಬೈಜೂಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 05, 2023 | 11:39 AM

Share

ನವದೆಹಲಿ: ಭಾರತದ ಸ್ಟಾರ್ಟಪ್ ಲೋಕದ ಸ್ಟಾರ್​ಕಿಡ್​ನಂತೆ ಇದ್ದ ಬೈಜೂಸ್ ಸಂಸ್ಥೆಗೆ (Byju’s) ಸಂಕಷ್ಟದ ಸರಮಾಲೆ ಒಂದರ ಹಿಂದೊಂದು ಬರುತ್ತಲೇ ಇದೆ. ಒಂದು ಕಡೆ ಸಾಲದ ಹೊರೆ, ಇನ್ನೊಂದು ಕಡೆ ನಿರೀಕ್ಷಿತವಾಗಿ ನಡೆಯದ ಬ್ಯುಸಿನೆಸ್, ಮಗದೊಂದೆಡೆ ಹಣಕಾಸು ವರದಿ ಸಲ್ಲಿಸದ ಆರೋಪ, ಮತ್ತಿನ್ನೊಂದೆಡೆ ತೆರಿಗೆ ವಂಚನೆಯ ಆರೋಪದಲ್ಲಿ ತೆರಿಗೆ ಅಧಿಕಾರಿಗಳಿಂದ ಶೋಧ, ಹೀಗೆ ಕಷ್ಟ, ವಿವಾದಗಳ ಕೆಸರು ಬೈಜೂಸ್ ಅನ್ನು ಮೆತ್ತಿಕೊಂಡಿದೆ. 1.2 ಬಿಲಿಯನ್ ಡಾಲರ್ (ಸುಮಾರು 10,000 ಕೋಟಿ ರೂ) ಸಾಲದ ಸುಳಿಗೆ ಸಿಲುಕಿರುವ ಬೈಜೂಸ್ 3 ತಿಂಗಳಿಗೊಮ್ಮೆ ಬಡ್ಡಿಯನ್ನಾದರೂ ಕಟ್ಟಬೇಕು. ಇವತ್ತು ಜೂನ್ 5ರಂದು ಬಡ್ಡಿ ಕಟ್ಟಲು ಡೆಡ್​ಲೈನ್. ಬಡ್ಡಿ ಮೊತ್ತ 40 ಮಿಲಿಯನ್ ಡಾಲರ್. ಅಂದರೆ, 33 ಕೋಟಿ ರೂಪಾಯಿ. ಇಷ್ಟು ಹಣ ಹೊಂದಿಸಲು ಬೈಜೂಸ್ ಹೆಣಗಾಡುತ್ತಿದೆ.

ಬೈಜೂಸ್ ಸಂಸ್ಥೆಗೆ 1.2 ಬಿಲಿಯನ್ ಡಾಲರ್ ಸಾಲವನ್ನು ಕೊಟ್ಟಿರುವ ಸಂಸ್ಥೆಗಳು ಯಾವ ಸಂಧಾನಕ್ಕೂ ಜಗ್ಗುತ್ತಿಲ್ಲ. ಸಾಲ ತೀರಿಸಲು ಹೆಚ್ಚು ಸಮಯ ಕೇಳಿದ ಬೈಜೂಸ್​ನ ಮನವಿಯನ್ನು ಸಾಲಗಾರರು ತಿರಸ್ಕರಿಸಿದ್ದಾರೆ. ಈಗ ನಿಗದಿತ ದಿನದೊಳಗೆ, ಅಂದರೆ ಇವತ್ತು ಬೈಜೂಸ್ ಬಡ್ಡಿ ಕಟ್ಟದಿದ್ದರೆ ಲೋನ್ ಡೀಫಾಲ್ಟ್ ಆಗಲಿದೆ. ಆಗ ಬೈಜೂಸ್ ತೊಂದರೆ ಸಿಕ್ಕಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿGiga Factory: ಭಾರತದಲ್ಲಿ ಮೊದಲ ಬಾರಿಗೆ ಲಿಥಿಯಮ್ ಅಯಾನ್ ಸೆಲ್ ತಯಾರಿಕೆ; ಟಾಟಾದಿಂದ ಗೀಗಾ ಫ್ಯಾಕ್ಟರಿ ಸ್ಥಾಪನೆಗೆ ಒಪ್ಪಂದ

ಒಂದು ವೇಳೆ ಬೈಜೂಸ್ ಇವತ್ತು ಬಡ್ಡಿ ಕಟ್ಟಿಬಿಟ್ಟರೆ ಬೀಸೋ ದೊಣ್ಣೆಯಿಂದ ಸದ್ಯಕ್ಕೆ ಪಾರಾಗಬಹುದು. ಮತ್ತೆ ಒಂದಷ್ಟು ಅವಧಿ ಉಸಿರಾಡಲು ಸಮಯ ಸಿಗುತ್ತದೆ. ಅಷ್ಟರೊಳಗೆ ಎಲ್ಲಿಯಾದರೂ ಬೇರೆಡೆ ಸಾಲ ಹೊಂದಿಸಿ, ಆ ಸಾಲವನ್ನು ಹಳೆಯ ಸಾಲ ತೀರಿಸಲು ಬಳಸಬಹುದು. ಈ ಮೂಲಕ ಮಾರುಕಟ್ಟೆಯಲ್ಲಿ ಬೈಜೂಸ್ ಜೀವಂತವಾಗಿ ಉಳಿಯಲು ಸಾಧ್ಯವಾಗಬಹುದು.

ಬೈಜೂಸ್ ಮೇಲೆ ಸಾಲಗಾರರಿಗೆ ಯಾಕೆ ಮುನಿಸು?

ಬೈಜೂಸ್ ಸಂಸ್ಥೆ 2022-23ರ ಹಣಕಾಸು ವರ್ಷದಲ್ಲಿ ನಿಗದಿತ ಅವಧಿಯೊಳಗೆ ಆಡಿಟ್ ಮಾಡಿದ ಸ್ಟೇಟ್ಮೆಂಟ್ ಫೈಲ್ ಮಾಡಲು ವಿಫಲವಾಗಿತ್ತು. ಇದು ಸಾಲಗಾರರಿಗೆ ಬೈಜೂಸ್ ಮೇಲಿದ್ದ ನಂಬಿಕೆ ನಶಿಸುವಂತೆ ಮಾಡಿತು ಎಂದು ಹೇಳಲಾಗುತ್ತದೆ. ಇದರ ಜೊತೆಗೆ ಫೆಮಾ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಭಾರತದ ಐಟಿ ಇಲಾಖೆ ಬೈಜೂಸ್​ನ ಕಚೇರಿ ಮತ್ತಿತರ ಸ್ಥಳಗಳ ಮೇಲೆ ರೇಡ್ ಮಾಡಿದ ಘಟನೆಯೂ ಆಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ