AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೆಲ ಕಳೆದುಕೊಳ್ಳುವ ಆತಂಕದಲ್ಲಿ ಬೈಜುಸ್​ ಉದ್ಯೋಗಿಗಳು; ವೆಚ್ಚ ಕಡಿತದ ಹಿನ್ನೆಲೆಯಲ್ಲಿ ಬೈಜೂಸ್​ನಲ್ಲಿ ಮತ್ತೊಂದು ಸುತ್ತಿನ ಲೇ ಆಫ್

BYJU'S To Layoff 11pc Employees: ವೆಚ್ಚ ಕಡಿತ ಮತ್ತು ಕಂಪನಿ ಪುನಾರಚನೆಯ ಭಾಗವಾಗಿ ಬೈಜುಸ್​ನ ಬಹಳಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗುತ್ತಿದೆ. ಕಂಪನಿಯ ಈ ಹೊಸ ಸುತ್ತಿನ ಲೇ ಆಫ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 4,000 ಮಂದಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಂದರೆ ಬೈಜುಸ್​ನಲ್ಲಿರುವ 35 ಸಾವಿರ ಮಂದಿ ಉದ್ಯೋಗಿಗಳಲ್ಲಿ ಶೇ. 11ರಷ್ಟು ಮಂದಿ ಕೆಲಸ ಕಳೆದುಕೊಳ್ಳಬಹುದು ಎಂದು ಬಿಸಿನೆಸ್ ಟುಡೇ ವರದಿಯಲ್ಲಿ ಹೇಳಿದೆ.

ಮತ್ತೆ ಕೆಲ ಕಳೆದುಕೊಳ್ಳುವ ಆತಂಕದಲ್ಲಿ ಬೈಜುಸ್​ ಉದ್ಯೋಗಿಗಳು; ವೆಚ್ಚ ಕಡಿತದ ಹಿನ್ನೆಲೆಯಲ್ಲಿ ಬೈಜೂಸ್​ನಲ್ಲಿ ಮತ್ತೊಂದು ಸುತ್ತಿನ ಲೇ ಆಫ್
ಬೈಜುಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 27, 2023 | 12:40 PM

Share

ಬೆಂಗಳೂರು, ಸೆಪ್ಟೆಂಬರ್ 27: ಸಾಲ ಮತ್ತು ವಿವಾದಗಳಿಂದ ಬಾಧಿತವಾಗಿರುವ ಭಾರತದ ಪ್ರಮುಖ ಶಿಕ್ಷಣ ತಂತ್ರಜ್ಞಾನ ಸಂಸ್ಥೆ ಬೈಜುಸ್ (BYJU’S) ಮತ್ತೊಂದು ಸುತ್ತಿನ ಲೇ ಆಫ್​ಗೆ ಕೈ ಹಾಕಲು ನಿರ್ಧರಿಸಿದೆ. ಬಿಸಿನೆಸ್ ಟುಡೇ ವಾಹಿನಿಯಲ್ಲಿ ಬಂದಿರುವ ವರದಿ ಪ್ರಕಾರ ವೆಚ್ಚ ಕಡಿತ ಮತ್ತು ಕಂಪನಿ ಪುನಾರಚನೆಯ (Restructuring) ಭಾಗವಾಗಿ ಬೈಜುಸ್​ನ ಬಹಳಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗುತ್ತಿದೆ. ಕಂಪನಿಯ ಈ ಹೊಸ ಸುತ್ತಿನ ಲೇ ಆಫ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 4,000 ಮಂದಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ (Job Loss) ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಂದರೆ ಬೈಜುಸ್​ನಲ್ಲಿರುವ 35 ಸಾವಿರ ಮಂದಿ ಉದ್ಯೋಗಿಗಳಲ್ಲಿ ಶೇ. 11ರಷ್ಟು ಮಂದಿ ಕೆಲಸ ಕಳೆದುಕೊಳ್ಳಬಹುದು ಎಂದು ಬಿಸಿನೆಸ್ ಟುಡೇ ವರದಿಯಲ್ಲಿ ಹೇಳಿದೆ.

ಇಷ್ಟು ಅಗಾಧ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುತ್ತಿರುವ ಬಗ್ಗೆ ಬೈಜುಸ್​ನಿಂದ ಅಧಿಕೃತವಾಗಿ ಹೇಳಿಕೆ ಬಂದಿಲ್ಲ. ಆದರೆ, ಬಿಸಿನೆಸ್ ರೀಸ್ಟ್ರಕ್ಚರಿಂಗ್ ಕಾರ್ಯದ ಅಂತಿಮ ಹಂತದಲ್ಲಿದ್ದೇವೆ ಎಂದು ಮಾಧ್ಯಮಗಳಿಗೆ ಬೈಜುಸ್​ನ ವಕ್ತಾರರು ತಿಳಿಸಿದ್ದಾರೆ.

‘ಕಾರ್ಯಾಚರಣೆ ರಚನೆಯನ್ನು (Operational structure) ಸರಳಗೊಳಿಸಲು, ವೆಚ್ಚವನ್ನು ಕಡಿಮೆ ಮಾಡಲು ಮತ್ತು ನಗದು ಹರಿವಿನ ನಿರ್ವಹಣೆಯನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ವ್ಯವಹಾರ ಪುನಾರಚನೆ (business restructuring) ಕಾರ್ಯದ ಅಂತಿಮ ಹಂತದಲ್ಲಿದ್ದೇವೆ,’ ಎಂದು ಬೈಜುಸ್​ನ ವಕ್ತಾರರು ಪ್ರತಿಕ್ರಿಯಿಸಿದರೆಂದು ಬಿಸಿನೆಸ್ ಟುಡೇ ವರದಿ ಮಾಡಿದೆ.

ಇದನ್ನೂ ಓದಿ: ಹಬ್ಬದ ಸೀಸನ್ ಅಕ್ಟೋಬರ್ 2023ರಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ; ಕರ್ನಾಟಕದಲ್ಲಿ ಯಾವ್ಯಾವತ್ತು ಬ್ಯಾಂಕ್ ಬಂದ್? ಇಲ್ಲಿದೆ ವಿವರ

ಕೆಲ ವಾರಗಳ ಹಿಂದಷ್ಟೇ ಬೈಜುಸ್​ನ ಭಾರತ ವಿಭಾಗಕ್ಕೆ ಹೊಸ ಸಿಇಒ ಆಗಿ ಬಂದಿರುವ ಅರ್ಜುನ್ ಮೋಹನ್ ಅವರ ನೇತೃತ್ವದಲ್ಲಿ ಮುಂದಿನ ಕೆಲ ವಾರಗಳಲ್ಲಿ ಈ ಪ್ರಕ್ರಿಯೆಯನ್ನು ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ಹೇಳಲಾಗಿದೆ.

ಸಾಲು ಸಾಲು ರಾಜೀನಾಮೆ

ಸಿಇಒ ಆಗಿ ಮೃಣಾಲ್ ಮೋಹಿತ್ ಅವರ ಸ್ಥಾನವನ್ನು ತುಂಬುವ ಮುನ್ನ ಅರ್ಜುನ್ ಮೋಹನ್ ಅವರು ಬೈಜುಸ್​ನ ಚೀಫ್ ಬಿಸಿನೆಸ್ ಆಫೀಸರ್ ಆಗಿದ್ದರು. ಮೃಣಾಲ್ ಮೋಹಿತ್ ಅವರು ಬೈಜುಸ್​ನ ಪ್ರತಿಸ್ಪರ್ಧಿ ಅಪ್​ಗ್ರಾಡ್ ಅನ್ನು ಸೇರಿಕೊಂಡಿದ್ದಾರೆ. ಅವರಷ್ಟೇ ಅಲ್ಲ, ಬೈಜುಸ್​ನ ಇತರ ನಾಲ್ವರು ಹಿರಿಯ ಎಕ್ಸಿಕ್ಯೂಟಿವ್​ಗಳಾದ ಪ್ರತ್ಯುಶಾ ಅಗರ್ವಾಲ್, ಹಿಮಾಂಶು ಬಜಾಜ್, ಮುಕುತ್ ದೀಪಕ್ ಮತ್ತು ಚೆರಿಯನ್ ಥಾಮಸ್ ಅವರೂ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: Google 25th Birthday:: ಗೂಗಲ್ ಜನ್ಮದಿನ ಇಂದು; ಗೂಗಲ್ ಹೆಸರಿನ ಅರ್ಥ ಏನು? ಗ್ಯಾರೇಜ್​ನಿಂದ ಶುರುವಾಗಿ ಇವತ್ತದು ಎಷ್ಟು ಅಗಾಧವಾಗಿ ಬೆಳೆದಿದೆ ನೋಡಿ..!

ಸಾಕಷ್ಟು ಕಷ್ಟಕ್ಕೆ ಸಿಲುಕಿರುವ ಹೊತ್ತಿನಲ್ಲಿ ಬೈಜುಸ್​ನ ಚುಕ್ಕಾಣಿ ಹಿಡಿದಿರುವ ಅರ್ಜುನ್ ಮೋಹನ್ ಅವರಿಗೆ ಗುರುತರ ಜವಾಬ್ದಾರಿಗಳಿವೆ. ಹಣಕಾಸು ಸಂಕಷ್ಟದಲ್ಲಿರುವ ಬೈಜುಸ್​ಗೆ ಫಂಡಿಂಗ್ ತರುವುದು, ವೆಚ್ಚ ಕಡಿತ ಮಾಡುವುದು, ಬಿಸಿನೆಸ್ ಹೆಚ್ಚಿಸುವುದು ಹೇಗೆ ಕಠಿಣ ಸವಾಲುಗಳಿವೆ. ಈ ಹಿನ್ನೆಲೆಯಲ್ಲಿ ಉದ್ಯೋಗಕಡಿತದಂತಹ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೈಜುಸ್​ಗೆ ಅನಿವಾರ್ಯವಾಗಬಹುದು.

ಬೈಜುಸ್ ಈ ಮುಂಚೆ ಮೂರ್ನಾಲ್ಕು ಬಾರಿ ಲೇ ಆಫ್ ಮಾಡಿದ್ದಿದೆ. ಕಳೆದ ವರ್ಷ 2,500 ಮಂದಿಯನ್ನು ಕೆಲಸದಿಂದ ತೆಗೆಯಲಾಗಿತ್ತು. ಈಗ 4,000 ಮಂದಿ ಕೆಲಸ ಕಳೆದುಕೊಳ್ಳುವುದು ನಿಜವೇ ಆದಲ್ಲಿ ಬೈಜುಸ್​ನಿಂದ ಆಗಿರುವ ಅತಿದೊಡ್ಡ ಲೇ ಆಫ್ ಎನಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್