AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BYJU’S Turmoil: ಕೇರಳದಲ್ಲಿ ಕಚೇರಿ ಮುಚ್ಚಿದ ಬೈಜೂಸ್, ಉದ್ಯೋಗಿಗಳ ವಜಾ; ವರದಿ

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಎಜುಟೆಕ್ ಕಂಪನಿ ಬೈಜೂಸ್ ತನ್ನ ಅಂಗಸಂಸ್ಥೆ ಆಕಾಶ್ ಎಜುಕೇಶನಲ್ ಸರ್ವೀಸಸ್​ನಿಂದಲೇ 300 ಕೋಟಿ ರೂ. ಸಾಲ ಪಡೆದಿದೆ.

BYJU’S Turmoil: ಕೇರಳದಲ್ಲಿ ಕಚೇರಿ ಮುಚ್ಚಿದ ಬೈಜೂಸ್, ಉದ್ಯೋಗಿಗಳ ವಜಾ; ವರದಿ
ಬೈಜೂಸ್Image Credit source: Shutterstock
TV9 Web
| Updated By: Ganapathi Sharma|

Updated on: Oct 28, 2022 | 12:20 PM

Share

ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಎಜುಟೆಕ್ ಕಂಪನಿ ಬೈಜೂಸ್ (BYJU’s) ತನ್ನ ಅಂಗಸಂಸ್ಥೆ ಆಕಾಶ್ ಎಜುಕೇಶನಲ್ ಸರ್ವೀಸಸ್​ನಿಂದಲೇ (Aakash Educational Services) 300 ಕೋಟಿ ರೂ. ಸಾಲ ಪಡೆದಿದೆ ಎಂದು ವರದಿಯಾಗಿದೆ. ಪ್ರಧಾನ ವ್ಯಾಪಾರ ಚಟುವಟಿಕೆಗಳಿಗೆ ಅಗತ್ಯವಿರುವ ಹಣವನ್ನು ಸಾಲದ ರೂಪದಲ್ಲಿ ಪಡೆಯಲಾಗಿದೆ ಎಂದು ಕಂಪನಿಯ ನಿಯಂತ್ರಕರು ತಿಳಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಕಂಪನಿಯು ಕೇರಳದಲ್ಲಿ ಕಚೇರಿಗಳನ್ನು ಮುಚ್ಚಿದೆ, ಉದ್ಯೋಗಿಗಳಿಂದ ಬಲವಂತವಾಗಿ ರಾಜೀನಾಮೆ ಪಡೆಯುತ್ತಿದೆ ಎಂಬ ದೂರುಗಳೂ ಕೇಳಿಬಂದಿವೆ.

ಬೈಜೂಸ್ ತಿರುವನಂತಪುರದ ಟೆಕ್ನೊಪಾರ್ಕ್​ನಲ್ಲಿರುವ ಕಚೇರಿಯನ್ನು ಮುಚ್ಚಿದೆ. ರಾಜೀನಾಮೆ ನೀಡುವಂತೆ ಉದ್ಯೋಗಿಗಳನ್ನು ಒತ್ತಾಯಿಸುತ್ತಿದೆ ಎಂದು ಕೇರಳದ ಸಚಿವ ವಿ. ಶಿವನ್​ಕುಟ್ಟಿ ಆರೋಪಿಸಿದ್ದಾರೆ. ಬೈಜೂಸ್ ಉದ್ಯೋಗಿಗಳು ಐಟಿ ಉದ್ಯೋಗಿಗಳ ಕಲ್ಯಾಣ ಸಂಘದ ಪದಾಧಿಕಾರಿಗಳ ಜತೆ ಬಂದು ತಮ್ಮನ್ನು ಭೇಟಿಯಾಗಿ ಕಷ್ಟಗಳನ್ನು ಹೇಳಿಕೊಂಡಿದ್ದಾಗಿಯೂ ಸಚಿವರು ತಿಳಿಸಿದ್ದಾರೆ. ಈ ಕುರಿತು ಕಾರ್ಮಿಕ ಇಲಾಖೆ ಗಂಭೀರವಾಗಿ ತಪಾಸಣೆ ನಡೆಸಲಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ನೀವು ಬೆಳವಣಿಗೆಯನ್ನು ಕಾಣುತ್ತಿಲ್ಲ ಎಂದಾದರೆ ಉಳಿದುಕೊಳ್ಳುವ ಮನಸ್ಥಿತಿ ರೂಢಿಸಿಕೊಳ್ಳಿ: ಬೈಜೂಸ್​​ ಬಗ್ಗೆ ಸುನೀಲ್​​​ ಶೆಟ್ಟಿ

ಇದನ್ನೂ ಓದಿ
Image
Petrol Price On October 28: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿದೆಯೇ? ತಿಳಿಯಿರಿ
Image
Gold Price Today: ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ದರವೆಷ್ಟಿದೆ? ಇಲ್ಲಿದೆ ಮಾಹಿತಿ
Image
RBI Meet: ನಿಯಂತ್ರಣಕ್ಕೆ ಬರುತ್ತಿಲ್ಲ ಹಣದುಬ್ಬರ; ನವೆಂಬರ್​ 3ಕ್ಕೆ ಎಂಪಿಸಿ ವಿಶೇಷ ಸಭೆ ಕರೆದ ಆರ್​ಬಿಐ
Image
Banking Frauds: ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಹೆಸರಲ್ಲಿ ವಂಚನೆ; ಎಚ್ಚರ ವಹಿಸಿ

ಕೇರಳದಲ್ಲಿ ಕೊಚ್ಚಿ ಹೊರತುಪಡಿಸಿ ಮತ್ತೆಲ್ಲ ಕಡೆಗಳಲ್ಲಿಯೂ ಬೈಜೂಸ್ ಕಚೇರಿಗಳನ್ನು ಮುಚ್ಚಲಾಗಿದೆ. ದೊಡ್ಡ ಮಟ್ಟದಲ್ಲಿ ಉದ್ಯೋಗಿಗಳ ವಜಾ ನಡೆಯುತ್ತಿದೆ ಎಂದು ಕಂಪನಿಯ ಆಂತರಿಕ ಮೂಲಗಳು ತಿಳಿಸಿವೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ಬೈಜೂಸ್ ಬಿಕ್ಕಟ್ಟು; ಇತ್ತೀಚಿನ ಬೆಳವಣಿಗೆಗಳು

ಸೇಲ್ಸ್ ತಂಡದ ಟಾರ್ಗೆಟ್ ಅವಧಿಯನ್ನು 12 ವಾರಗಳಿಂದ 8 ವಾರಗಳಿಗೆ ಇಳಿಕೆ ಮಾಡಲಾಗಿದೆ. ವಾರದ ಕೆಲಸದ ದಿನಗಳನ್ನು 5ರಿಂದ 6ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಂಬಿಸಿ ಉದ್ಯೋಗದಿಂದ ವಜಾಗೊಳಿಸಲು ಕಂಪನಿ ಈ ತಂತ್ರ ಅನುಸರಿಸುತ್ತಿದೆ ಎಂದು ಮೂಲಗಳ ಹೇಳಿಕೆ ಉಲ್ಲೇಖಿಸಿ ‘ಇಂಡಿಯಾ ಡಾಟ್ ಕಾಂ’ ವರದಿ ಮಾಡಿದೆ.

ಉದ್ಯೋಗಿಗಳು ಅಕ್ಟೋಬರ್​ ತಿಂಗಳ ವೇತನದ ಒಂದು ಬಾರಿಯ ಸೆಟಲ್​ಮೆಂಟ್​ಗೆ ಬೇಡಿಕೆ ಇಟ್ಟಿದ್ದಾರೆ. ನವೆಂಬರ್​ನಿಂದ 2023ರ ಜನವರಿ ವರೆಗಿನ ವೇತನದ ಒಂದು ಬಾರಿಯ ಪಾವತಿಗೂ ಬೇಡಿಕೆ ಇಟ್ಟಿದ್ದಾರೆ. ಜತೆಗೆ ಗಳಿಕೆ ರಜೆಯ ನಗದೀಕರಣ ಹಾಗೂ ವೇರಿಯೇಬಲ್ ಪೇ ಪಾವತಿಗೂ ಪಟ್ಟು ಹಿಡಿದಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ನಷ್ಟದ ಸುಳಿಯಲ್ಲಿ ಬೈಜೂಸ್

21ನೇ ಹಣಕಾಸು ವರ್ಷದಲ್ಲಿ ಬೈಜೂಸ್ 4,588 ಕೋಟಿ ನಷ್ಟ ದಾಖಲಿಸಿತ್ತು. 18 ತಿಂಗಳು ವಿಳಂಬವಾಗಿ ಈ ವರದಿ ಪ್ರಕಟಿಸಿತ್ತು. ಬಹು ನಿರೀಕ್ಷಿತ ಐಪಿಒ (ಇನಿಷಿಯಲ್ ಪಬ್ಲಿಕ್ ಆಫರಿಂಗ್) ಅನ್ನೂ ಬೈಜೂಸ್ ವಿಳಂಬ ಮಾಡುತ್ತಿದೆ. ಜನರಿಂದ ಉತ್ತಮ ಸ್ಪಂದನೆ ದೊರೆಯದಿರಬಹುದೆಂಬ ಆತಂಕದಲ್ಲಿ ಹೀಗೆ ಮಾಡಲಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!